ಗೋಪಾಲಯ್ಯ 
ರಾಜ್ಯ

ಸರ್ಕಾರಕ್ಕೆ ಕೆಟ್ಟ ಹೆಸರು ತರಲು ದುಷ್ಟ ಶಕ್ತಿಗಳ ಪೂರ್ವ ನಿಯೋಜಿತ ಕೃತ್ಯ: ಗೋಪಾಲಯ್ಯ

ಸರ್ಕಾರಕ್ಕೆ ಕೆಟ್ಟ ಹೆಸರು ಕೆಲವು ದುಷ್ಟ ಶಕ್ತಿಗಳು ತರಲು ಗಲಭೆ ಮಾಡುತ್ತಿದ್ದು, ಬೆಂಗಳೂರಿನ ಘಟನೆ ಪೂರ್ವ ನಿಯೋಜಿತ ಗಲಭೆಯಂತೆ ಕಾಣುತ್ತಿದೆ ಎಂದು ಸಚಿವ ಗೋಪಾಲಯ್ಯ ಆತಂಕ ವ್ಯಕ್ತಪಡಿಸಿದ್ದಾರೆ

ಹಾಸನ: ಸರ್ಕಾರಕ್ಕೆ ಕೆಟ್ಟ ಹೆಸರು ಕೆಲವು ದುಷ್ಟ ಶಕ್ತಿಗಳು ತರಲು ಗಲಭೆ ಮಾಡುತ್ತಿದ್ದು, ಬೆಂಗಳೂರಿನ ಘಟನೆ ಪೂರ್ವ ನಿಯೋಜಿತ ಗಲಭೆಯಂತೆ ಕಾಣುತ್ತಿದೆ ಎಂದು ಸಚಿವ ಗೋಪಾಲಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.
 
ಹಾಸನದ ಹೊಳೆನರಸೀಪುರದಲ್ಲಿ ಮಾತನಾಡಿದ ಸಚಿವ ಗೋಪಾಲಯ್ಯ, ಯಡಿಯೂರಪ್ಪ ನೇತೃತ್ವದ ಸರ್ಕಾರ ಎಲ್ಲರನ್ನೂ ವಿಶ್ವಾಸಕ್ಕೆ ತೆಗಡದುಕೊಂಡು ಶಾಂತಿಯುತವಾಗಿ ಆಡಳಿತ ನಡೆಸುತ್ತಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳಾಗಿಲ್ಲ. ಗೃಹಸಚಿವರ ಬಸವರಾಜ ಬೊಮ್ಮಾಯಿ ಅವರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದು ಪರಿಸ್ಥಿತಿಯನ್ನು   ಸಮರ್ಥವಾಗಿ ನಿಭಾಯಿಸಲಿದ್ದಾರೆ ಎಂದು ಹೇಳಿದ್ದಾರೆ.

ನಾನು ಬೆಳಗ್ಗೆಯೇ ಬೆಂಗಳೂರಿನಿಂದ ಬಂದಿದ್ದೇನೆ. ಮಾಧ್ಯಮದಲ್ಲಿ ನೋಡಿ ನನಗೆ ವಿಷಯ ತಿಳಿಯಿತು. ಘಟನೆ ಹಿಂದೆ ಎಸ್‍ಡಿಪಿಐ ಸದಸ್ಯನ ಕೈವಾಡ ಇರುವ ಬಗ್ಗೆ ಗೃಹ ಸಚಿವರು ಮಾಹಿತಿ ನೀಡುತ್ತಾರೆ. ಆದರೆ ಗಲಭೆಗೆ ಕಾರಣರಾದವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.

ಬಿಜೆಪಿ ಸರ್ಕಾರ ಬಂದ ಮೇಲೆ ಯಾವುದೇ ಸಮುದಾಯದ ಮೇಲೆ ಗಲಾಟೆ ಆಗಿಲ್ಲ. ಕೆಲವು ದುಷ್ಟ ಶಕ್ತಿಗಳು ಸರ್ಕಾಕ್ಕೆ ಕೆಟ್ಟ ಹೆಸರು ತರಲು ಈ ರೀತಿ ಮಾಡುತ್ತಿದ್ದಾರೆ. ಪರಿಸ್ಥಿತಿಯನ್ನು ಸಮರ್ಥವಾಗಿ ಗೃಹ ಸಚಿವರು ನಿಭಾಯಿಸುತ್ತಾರೆ. 

ಸರ್ಕಾರ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಗಲಭೆಗೆ ಕಾರಣರಾದವರ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ಸಚಿವ ಗೋಪಾಲಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT