ಗೋಪಾಲಯ್ಯ 
ರಾಜ್ಯ

ಸರ್ಕಾರಕ್ಕೆ ಕೆಟ್ಟ ಹೆಸರು ತರಲು ದುಷ್ಟ ಶಕ್ತಿಗಳ ಪೂರ್ವ ನಿಯೋಜಿತ ಕೃತ್ಯ: ಗೋಪಾಲಯ್ಯ

ಸರ್ಕಾರಕ್ಕೆ ಕೆಟ್ಟ ಹೆಸರು ಕೆಲವು ದುಷ್ಟ ಶಕ್ತಿಗಳು ತರಲು ಗಲಭೆ ಮಾಡುತ್ತಿದ್ದು, ಬೆಂಗಳೂರಿನ ಘಟನೆ ಪೂರ್ವ ನಿಯೋಜಿತ ಗಲಭೆಯಂತೆ ಕಾಣುತ್ತಿದೆ ಎಂದು ಸಚಿವ ಗೋಪಾಲಯ್ಯ ಆತಂಕ ವ್ಯಕ್ತಪಡಿಸಿದ್ದಾರೆ

ಹಾಸನ: ಸರ್ಕಾರಕ್ಕೆ ಕೆಟ್ಟ ಹೆಸರು ಕೆಲವು ದುಷ್ಟ ಶಕ್ತಿಗಳು ತರಲು ಗಲಭೆ ಮಾಡುತ್ತಿದ್ದು, ಬೆಂಗಳೂರಿನ ಘಟನೆ ಪೂರ್ವ ನಿಯೋಜಿತ ಗಲಭೆಯಂತೆ ಕಾಣುತ್ತಿದೆ ಎಂದು ಸಚಿವ ಗೋಪಾಲಯ್ಯ ಆತಂಕ ವ್ಯಕ್ತಪಡಿಸಿದ್ದಾರೆ.
 
ಹಾಸನದ ಹೊಳೆನರಸೀಪುರದಲ್ಲಿ ಮಾತನಾಡಿದ ಸಚಿವ ಗೋಪಾಲಯ್ಯ, ಯಡಿಯೂರಪ್ಪ ನೇತೃತ್ವದ ಸರ್ಕಾರ ಎಲ್ಲರನ್ನೂ ವಿಶ್ವಾಸಕ್ಕೆ ತೆಗಡದುಕೊಂಡು ಶಾಂತಿಯುತವಾಗಿ ಆಡಳಿತ ನಡೆಸುತ್ತಿದೆ. ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಹಾಳಾಗಿಲ್ಲ. ಗೃಹಸಚಿವರ ಬಸವರಾಜ ಬೊಮ್ಮಾಯಿ ಅವರು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದು ಪರಿಸ್ಥಿತಿಯನ್ನು   ಸಮರ್ಥವಾಗಿ ನಿಭಾಯಿಸಲಿದ್ದಾರೆ ಎಂದು ಹೇಳಿದ್ದಾರೆ.

ನಾನು ಬೆಳಗ್ಗೆಯೇ ಬೆಂಗಳೂರಿನಿಂದ ಬಂದಿದ್ದೇನೆ. ಮಾಧ್ಯಮದಲ್ಲಿ ನೋಡಿ ನನಗೆ ವಿಷಯ ತಿಳಿಯಿತು. ಘಟನೆ ಹಿಂದೆ ಎಸ್‍ಡಿಪಿಐ ಸದಸ್ಯನ ಕೈವಾಡ ಇರುವ ಬಗ್ಗೆ ಗೃಹ ಸಚಿವರು ಮಾಹಿತಿ ನೀಡುತ್ತಾರೆ. ಆದರೆ ಗಲಭೆಗೆ ಕಾರಣರಾದವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.

ಬಿಜೆಪಿ ಸರ್ಕಾರ ಬಂದ ಮೇಲೆ ಯಾವುದೇ ಸಮುದಾಯದ ಮೇಲೆ ಗಲಾಟೆ ಆಗಿಲ್ಲ. ಕೆಲವು ದುಷ್ಟ ಶಕ್ತಿಗಳು ಸರ್ಕಾಕ್ಕೆ ಕೆಟ್ಟ ಹೆಸರು ತರಲು ಈ ರೀತಿ ಮಾಡುತ್ತಿದ್ದಾರೆ. ಪರಿಸ್ಥಿತಿಯನ್ನು ಸಮರ್ಥವಾಗಿ ಗೃಹ ಸಚಿವರು ನಿಭಾಯಿಸುತ್ತಾರೆ. 

ಸರ್ಕಾರ ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಗಲಭೆಗೆ ಕಾರಣರಾದವರ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ಸಚಿವ ಗೋಪಾಲಯ್ಯ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

SCROLL FOR NEXT