ಅಪಹರಣಕ್ಕೊಳಗಾಗಿದ್ದ ಲೋಕೋ ಪೈಲಟ್ 
ರಾಜ್ಯ

ಲೋಕೋ ಪೈಲಟ್ ಅಪಹರಣ, ದರೋಡೆ ಪ್ರಕರಣ: ಓಲಾ ಚಾಲಕ, ಆತನ ಸಹಚರನ ಬಂಧನ

ಬೆಂಗಳೂರು ಲೊಕೋ ಪೈಲಟ್ ಸೋನು ಕುಮಾರ್ ಸಿಂಗ್ ಅಪಹರಣ ಹಾಗೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 

ಬೆಂಗಳೂರು: ಬೆಂಗಳೂರು ಲೊಕೋ ಪೈಲಟ್ ಸೋನು ಕುಮಾರ್ ಸಿಂಗ್ ಅಪಹರಣ ಹಾಗೂ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. 

ಪಾಟ್ನಾದಿಂದ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದ ಸೋನು ಕುಮಾರ್ ಸಿಂಗ್ ಅವರನ್ನು ಆರೋಪಿಗಳು ಅಪಹರಣ ಮಾಡಿದ್ದರು. ಬಳಿಕ ರೂ.1.8 ಲಕ್ಷ, ಲಗೇಜ್ ಹಾಗೂ ಎರಡು ಮೊಬೈಲ್ ಕಸಿದುಕೊಂಡಿದ್ದರು. ಬಳಿಕ ಚಿಕ್ಕಮಗಳೂರಿನ ಕಡೂರು ಬಳಿ ಕಾರು ನಿಲ್ಲಿಸಿದ್ದ ಸಂದರ್ಭದಲ್ಲಿ ಸೋನು ಅವರು ಅಪಹರಣಕಾರರಿಂದ ತಪ್ಪಿಸಿಕೊಂಡು ಬಂದು ಪೊಲೀಸರಿಗೆ ದೂರು ನೀಡಿದ್ದರು. 

ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಗಳ ಮೊಬೈಲ್ ನಂಬರ್ ಟ್ರ್ಯಾಕ್ ಮಾಡಿದ್ದು, ಇದೀಗ ಓಲಾ ಚಾಲಕ ಹಾಗೂ ಆತನೊಂದಿಗಿದ್ದ ಸಹಚರನೊಬ್ಬನನ್ನು ಶಿವಮೊಗ್ಗದಲ್ಲಿ ಬಂಧನಕ್ಕೊಳಪಡಿಸಿದ್ದಾರೆ. 

ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದರು, ಬಳಿಕ ತಮ್ಮೊಂದಿಗೆ ಶಿವಮೊಗ್ಗ ಜಿಲ್ಲೆಗೆ ಬರುವಂತೆ ತಿಳಿಸಿದ್ದರು. ರಾತ್ರಿ ಪೊಲೀಸರೊಂದಿಗೆ ತೆರಳಿ, ಆರೋಪಿಗಳನ್ನು ಗುರ್ತಿಸಿದ್ದೆ. ಬುಧವಾರ ಬೆಳಿಗ್ಗೆ ಬೆಂಗಳೂರಿಗೆ ಹಿಂತಿರುಗಿದ್ದೆ. ಆರೋಪಿಗಳು ರೂ.1.8 ಲಕ್ಷ ದೋಚಿದ್ದರು ಎಂದು ಸಿಂಗ್ ಅವರು ಹೇಳಿದ್ದಾರೆ. ಕುಟುಂಬಸ್ಥರು ಹಾಗೂ ಸ್ನೇಹಿತರಿಂಗ ಹಣವನ್ನು ಖಾತೆಗೆ ಜಮೆ ಮಾಡಲಾಗಿತ್ತು. ಓಲಾ ಆ್ಯಪ್ ನಿಂದಲೇ ನಾನು ಕಾರು ಬುಕ್ ಮಾಡಿದ್ದೆ. ಒಟಿಪಿ ಕೂಡ ಬಂದಿತ್ತು ಎಂದು ಸಿಂಗ್ ತಿಳಿಸಿದ್ದಾರೆ. 

ಓಲಾ ಚಾಲಕನ ಹೆಸರು ಮಣಿಕಂದನ್. ವಿಮಾನ ನಿಲ್ದಾಣದಿಂದಲೇ ನಾನು ಕ್ಯಾಬ್ ಹತ್ತಿದ್ದೆ. ಆದರೆ, ಘಟನೆ ಸಂಬಂಧ ಓಲಾ ಸಂಸ್ಥೆಯು ಅಧಿಕೃತವಾಗಿ ಹೇಳಿಕೆ ನೀಡಲು ನಿರಾಕರಿಸುತ್ತಿದೆ. ಹಲವು ಬಾರಿ ಮನವಿ ಮಾಡಿಕೊಂಡರೂ ಹೇಳಿಕೆ ನೀಡುತ್ತಿಲ್ಲ. ಸಾರ್ವಜನಿಕ ಸಂಪರ್ಕ ಅಧಿಕಾರಿಗಳು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದು, ಎಫ್ಐಆರ್ ದಾಖಲಾಗಿರುವ ಬಗ್ಗೆ ನಮಗೆ ಸಾಕ್ಷ್ಯಾಧಾರ ಬೇಕೆಂದು ಹೇಳುತ್ತಿದ್ದಾರೆಂದು ಸಿಂಗ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT