ರಾಜ್ಯ

ಇಬ್ಬರು ಪತ್ನಿಯರ ಜಗಳ ಬಗೆಹರಿಸಲಾಗದೆ ಪತಿ ಆತ್ನಹತ್ಯೆ!

ಎರಡು ಮದುವೆಯಾಗಿ ಇಬ್ಬರು ಹೆಂಡತಿಯರನ್ನು ಹೊಂದಿದ್ದ ವ್ಯಕ್ತಿಯೊಬ್ಬ, ಪತ್ನಿಯರ ಜಗಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಜಿಗಣಿ ಸಮೀಪದ ಕಲ್ಲುಬಾಳು ಎಂಬಲ್ಲಿ ನಡೆದಿದೆ.

ಬೆಂಗಳೂರು: ಎರಡು ಮದುವೆಯಾಗಿ ಇಬ್ಬರು ಹೆಂಡತಿಯರನ್ನು ಹೊಂದಿದ್ದ ವ್ಯಕ್ತಿಯೊಬ್ಬ, ಪತ್ನಿಯರ ಜಗಳದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆ ಜಿಗಣಿ ಸಮೀಪದ ಕಲ್ಲುಬಾಳು ಎಂಬಲ್ಲಿ ನಡೆದಿದೆ.

ರಾಯಚೂರು ಜಿಲ್ಲೆ ನೀರಮಾನ್ವಿ ಗ್ರಾಮದ ವಾಸಿ ರಮೇಶ್( 40) ಆತ್ಮಹತ್ಯೆಗೆ ಶರಣಾದವರು.

ಈತ ಹಲವು ವರ್ಷಗಳ ಹಿಂದೆಯೇ ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದು, ಇಬ್ಬರು ಪತ್ನಿಯರು ಮತ್ತು ಮಕ್ಕಳ ಜೊತೆ ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಮಾರುತಿ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ. 

ಗಾರೆ ಕೆಲಸ ಮಾಡುತ್ತಿದ್ದ ಈತನಿಗೆ ಇಬ್ಬರು ಪತ್ನಿಯರ ಜಗಳ ಬಿಡಿಸಲಾಗದೆ ಕಗ್ಗಂಟಾಗಿತ್ತು. ಇದರಿಂದಾಗಿ ಇತ್ತೀಚೆಗೆ ಆಅ ಖಿನ್ನತೆಗೆ ಒಳಗಾಗಿದ್ದ. 

ಬುಧವಾರ ರಾತ್ರಿ ಕಲ್ಲುಬಾಳು ಸಮೀಪ ಸಂಬಂಧಿಗಳ ಮನೆಗೆ ಆಗಮಿಸಿದ್ದ ರಮೇಶ್ ಅಲ್ಲಿಂದ ಮನೆಗೆ ಹಿಂತಿರುಗುವುದಾಗಿ ಹೇಳಿ ಹೋದವನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಾರಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೊಬ್ಬ ಗುರುವಾರ ಬೆಳಿಗ್ಗೆ ಈ ದೃಶ್ಯ ಕಂಡು ಪೋಲೀಸರಿಗೆ ಮಾಹಿತಿ ರವಾನಿಸಿದ್ದಾರೆ. 

ಸ್ಥಳಕ್ಕಾಗಮಿಸಿದ ಜಿಗಣಿ ಪೊಲೀಸರು ಸುತ್ತಮುತ್ತಲಿನವರಲ್ಲಿ ವಿಚಾರಿಸಿದಾಗ ಮೃತ ವ್ಯಕ್ತಿಯ ಗುರುತು ಪತ್ತೆಯಾಗಿದೆ, ತಕ್ಷಣ ಪೋಲೀಸರು ಮೃತನ ಇಬ್ಬರೂ ಪತ್ನಿಯರಿಗೆ ವಿಚಾರ ತಿಳಿಸಿದ್ದು ಅವರು ಸಾವನ್ನಪ್ಪಿದ ವ್ಯಕ್ತಿ ತಮ್ಮ ಪತಿ ಎಂದು ಗುರುತಿಸಿದ್ದಾರೆ. ಸಧ್ಯ ಮರಣೋತ್ತರ ಪರೀಕ್ಷೆಗಾಗಿ ಮೃತ ದೇಹವನ್ನು ಆಸ್ಪತ್ರೆಗೆ ರವಾನಿಸಲಾಗಿದೆ, 

ಘಟನೆ ಸಂಬಂಧ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT