ಕಿದ್ವಾಯಿ ಆಸ್ಪತ್ರೆ ಕೋವಿಡ್ ಲ್ಯಾಬ್ 
ರಾಜ್ಯ

ಕೊರೋನಾ ವೈರಸ್: ಕರ್ನಾಟಕದಲ್ಲಿ 1 ಲಕ್ಷ ಕೋವಿಡ್ ಪರೀಕ್ಷೆ ಮಾಡಿ ದಾಖಲೆ ಬರೆದ ಕಿದ್ವಾಯಿ ಆಸ್ಪತ್ರೆ!

ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವ ಹೊತ್ತಿನಲ್ಲೇ ಬೆಂಗಳೂರಿನ ವೈದ್ಯಕೀಯ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿರುವ ಕಿದ್ವಾಯಿ ಆಸ್ಪತ್ರೆ ಅಪರೂಪದ ದಾಖಲೆ ಬರೆದಿದೆ.

ಬೆಂಗಳೂರು: ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಗಣನೀಯವಾಗಿ ಏರಿಕೆಯಾಗುತ್ತಿರುವ ಹೊತ್ತಿನಲ್ಲೇ ಬೆಂಗಳೂರಿನ ವೈದ್ಯಕೀಯ ಕ್ಷೇತ್ರದಲ್ಲಿ ಪ್ರಮುಖ ಹೆಸರಾಗಿರುವ ಕಿದ್ವಾಯಿ ಆಸ್ಪತ್ರೆ ಅಪರೂಪದ ದಾಖಲೆ ಬರೆದಿದೆ.

ಹೌದು.. ಕೊರೋನಾ ವೈರಸ್ ಸೋಂಕಿನ ಪರೀಕ್ಷೆಯಲ್ಲಿ ಕಿದ್ವಾಯಿ ಆಸ್ಪತ್ರೆ ದಾಖಲೆ ನಿರ್ಮಿಸಿದ್ದು, ಈ ವರೆಗೂ 1 ಲಕ್ಷ ಕೋವಿಡ್ ಪರೀಕ್ಷೆ ಮಾಡಿದೆ. ಆ ಮೂಲಕ ರಾಜ್ಯದಲ್ಲಿ 1 ಲಕ್ಷ ಕೋವಿಡ್ ಪರೀಕ್ಷೆ ನಡೆಸಿದ ಮೊದಲ ಆಸ್ಪತ್ರೆ ಎಂಬ ಹೆಸರಿಗೆ ಕಿದ್ವಾಯಿ ಪಾತ್ರವಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕಿದ್ವಾಯಿ ಆಸ್ಪತ್ರೆಯಯಲ್ಲಿ ನೋಡಲ್ ಅಧಿಕಾರಿಯಾಗಿರುವ ಡಾ.ಸಿ ರಾಮಚಂದ್ರ ಅವರು, ಮೂರುವರೆ ತಿಂಗಳ ಹಿಂದೆ ನಮ್ಮ ಆಸ್ಪತ್ರೆಯಲ್ಲಿ ಕೋವಿಡ್-19 ಲ್ಯಾಬ್ ಆರಂಭಿಸಲಾಗಿತ್ತು. ಅಂದಿನಿಂದ ಇಂದಿನವರೆಗೂ 1 ಲಕ್ಷ ಕೊರೋನಾ ಪರೀಕ್ಷೆ ಮಾಡಲಾಗಿದೆ. ಇಷ್ಟು ಪ್ರಮಾಣದ ಪರೀಕ್ಷೆ ನಡೆಸಿದ ರಾಜ್ಯದ ಮೊದಲ ಲ್ಯಾಬ್ ಆಗಿದೆ ಎಂದು ಹೇಳಿದ್ದಾರೆ.

 ನಿತ್ಯ ನಮ್ಮ ಲ್ಯಾಬ್ ನಲ್ಲಿ ಸರಾಸರಿ 3 ಸಾವಿರ ಮಾದರಿಗಳ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ಈ ಪ್ರಮಾಣವನ್ನು ಮುಂದಿನ ದಿನಗಳಲ್ಲಿ 6 ರಿಂದ 7 ಸಾವಿರಕ್ಕೆ ಏರಿಕೆ ಮಾಡುವ ಕುರಿತು ಚಿಂತನೆ ಮಾಡಲಾಗುತ್ತಿದೆ. ಇದಕ್ಕಾಗಿ ನಮಗೆ ಡಾಟಾ ಎಂಟ್ರಿ ಆಪರೇಟರ್ ಗಳು, ಲ್ಯಾಬ್ ಟೆಕ್ನೀಷಿಯನ್ ಗಳ ಅಗತ್ಯವಿದೆ. ಅಲ್ಲದೆ ಕಂಪ್ಯೂಟರ್ ಗಳನ್ನು ಮತ್ತು ಇತರೆ ವಸ್ತುಗಳನ್ನು ಖರೀದಿ ಮಾಡಬೇಕು. ಬಿಬಿಎಂಪಿ ಅಧಿಕಾರಿಗಳು ಲ್ಯಾಬ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲ್ಯಾಬ್ ನ ಪರೀಕ್ಷಾ ಸಾಮಾರ್ಥ್ಯ ಹೆಚ್ಚಿಸುವ ನಿಟ್ಟಿನಲ್ಲಿ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಚರ್ಚೆ ನಡೆಸಿದ್ದಾರೆ. ಮಾನವ ಸಂಪನ್ಮೂಲ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕುರಿತು ಭರವಸೆ ನೀಡಿದ್ದಾರೆ ಎಂದು  ಡಾ.ಸಿ ರಾಮಚಂದ್ರ ಹೇಳಿದ್ದಾರೆ.

ಲ್ಯಾಬ್ ನಲ್ಲಿ ಆರ್ ಟಿ-ಪಿಸಿಆರ್ ಟೆಸ್ಟ್ ಗೆ ಸರ್ಕಾರಿ ದರವನ್ನೇ ನಿಗದಿ ಮಾಡಲಾಗಿದೆ. ಬೇರೆ ಖಾಸಗಿ ಲ್ಯಾಬ್ ಗಳಲ್ಲಿ ಇದಕ್ಕೆ 2 ಸಾವಿರ ರೂ ನಿಗದಿ ಮಾಡಿದ್ದರೆ, ಕಿದ್ವಾಯಿ ಲ್ಯಾಬ್ ನಲ್ಲಿ ಇದೇ ಟೆಸ್ಟ್ ಗೆ 1,550 ರೂ ನಿಗದಿ ಮಾಡಲಾಗಿದೆ. ಒಂದು ಆರ್ ಟಿ-ಪಿಸಿಆರ್ ಮಷಿನ್ 384 ಸ್ಯಾಂಪಲ್ ಗಳನ್ನು ಪರೀಕ್ಷೆ ಮಾಡುತ್ತದೆ. ಇತರೆ ಮೂರು ಯಂತ್ರಗಳು 94 ಸ್ಯಾಂಪಲ್ ಗಳನ್ನು ಪರೀಕ್ಷೆ ಮಾಡುತ್ತವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT