ಕೋವಿಡ್-19ನಿಂದ ಗುಣಮುಖರಾದ ವ್ಯಕ್ತಿಯೊಬ್ಬರು ಪ್ಲಾಸ್ಮಾ ದಾನ ಮಾಡುತ್ತಿರುವುದು 
ರಾಜ್ಯ

ಮಂಗಳೂರಿನಲ್ಲಿ ಪ್ಲಾಸ್ಮಾ ಬ್ಯಾಂಕ್ ಸ್ಥಾಪನೆಗೆ ಜಿಲ್ಲಾಡಳಿತ ಚಿಂತನೆ

ಕೋವಿಡ್-19 ಪ್ಲಾಸ್ಮಾ ಬ್ಯಾಂಕ್ ನ್ನು ಮಂಗಳೂರಿನಲ್ಲಿ ಸ್ಥಾಪಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂದಾಗಿದೆ. 

ಮಂಗಳೂರು: ಕೋವಿಡ್-19 ಪ್ಲಾಸ್ಮಾ ಬ್ಯಾಂಕ್ ನ್ನು ಮಂಗಳೂರಿನಲ್ಲಿ ಸ್ಥಾಪಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಮುಂದಾಗಿದೆ. 
ಈ ಬಗ್ಗೆ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ, ಇಲ್ಲಿನ ಖಾಸಗಿ ಆಸ್ಪತ್ರೆಗಳಲ್ಲಿ ಪ್ಲಾಸ್ಮಾ ಬ್ಯಾಂಕ್ ಸ್ಥಾಪಿಸಲು ಸೌಲಭ್ಯವಿದೆಯೇ ಎಂದು ಪರಿಶೀಲಿಸಲು ಜಿಲ್ಲಾ ಆರೋಗ್ಯಾಧಿಕಾರಿ ರಾಮಚಂದ್ರ ಬಾಯಾರಿ ಮತ್ತು ಜಿಲ್ಲಾ ಸರ್ಜನ್ ಡಾ ಸದಾಶಿವ ಅವರಿಗೆ ಹೇಳಿದ್ದಾರೆ.

ಇಲ್ಲಿನ ಖಾಸಗಿ ಆಸ್ಪತ್ರೆಗಳಲ್ಲಿ ಸೌಲಭ್ಯವಿದ್ದು ಪ್ಲಾಸ್ಮಾ ಬ್ಯಾಂಕ್ ಸ್ಥಾಪನೆಗೆ ಒಲವು ತೋರಿಸಿದರೆ ರಾಜ್ಯ ಸರ್ಕಾರದಿಂದ ಅನುಮತಿ ಕೇಳಲಾಗುವುದು ಎಂದರು. ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಈ ವ್ಯವಸ್ಥೆ ಅಳವಡಿಸಲು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯಿಂದ ಅನುಮತಿ ಬೇಕಾಗುತ್ತದೆ ಎಂದರು.

ಇಲ್ಲಿ ಪ್ಲಾಸ್ಮಾ ಬ್ಯಾಂಕ್ ಸೌಲಭ್ಯವಿಲ್ಲದೆ ದಾನಿಗಳು ಬೆಂಗಳೂರಿಗೆ ಹೋಗಬೇಕಾಗುತ್ತದೆ. ಇತ್ತೀಚೆಗೆ ಜೀಶಾ ಆಲಿ ಮತ್ತು ಹೈದರ್ ಆಲಿ ಎಂಬುವವರು ಪ್ಲಾಸ್ಮಾ ದಾನ ಮಾಡಲು ಬೆಂಗಳೂರಿಗೆ ಹೋದರು. ನಂತರ ಅಲ್ಲಿಂದ ಪ್ಲಾಸ್ಮಾ ತಂದು ಇಲ್ಲಿ ಇಬ್ಬರು ಕೋವಿಡ್-19 ರೋಗಿಗಳಿಗೆ ನೀಡಲಾಯಿತು, ಹೀಗಾಗಿ ಈ ಪ್ರಯಾಸವನ್ನು ತಪ್ಪಿಸಲು ಮಂಗಳೂರಿನಲ್ಲಿಯೇ ಸ್ಥಾಪಿಸಲು ನೋಡಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT