ಜಮೀರ್ ಮತ್ತು ಸಂಪತ್ ರಾಜ್ (ಫೇಸ್ ಬುಕ್ ಚಿತ್ರ) 
ರಾಜ್ಯ

ಡಿ.ಜೆ.ಹಳ್ಳಿ ಗಲಭೆ: ಮಾಜಿ ಮೇಯರ್ ಸಂಪತ್ ರಾಜ್ ಕೈವಾಡವಿಲ್ಲ- ಶಾಸಕ ಜಮೀರ್ ಅಹಮದ್

ಡಿ.ಜೆ.ಹಳ್ಳಿ ಗಲಭೆಯಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಕೈವಾಡವಿದೆ ಎಂಬ ಮಾಜಿ ಸಚಿವ ಜಮೀರ್ ಅಹಮದ್ ಹೇಳಿದ್ದಾರೆಂಬ ಆರೋಪವನ್ನು ಸ್ವತಃ ಶಾಸಕ ಜಮೀರ್ ಅಹಮದ್ ಅಲ್ಲಗಳೆದಿದ್ದಾರೆ.

ಬೆಂಗಳೂರು: ಡಿ.ಜೆ.ಹಳ್ಳಿ ಗಲಭೆಯಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಕೈವಾಡವಿದೆ ಎಂಬ ಮಾಜಿ ಸಚಿವ ಜಮೀರ್ ಅಹಮದ್ ಹೇಳಿದ್ದಾರೆಂಬ ಆರೋಪವನ್ನು ಸ್ವತಃ ಶಾಸಕ ಜಮೀರ್ ಅಹಮದ್ ಅಲ್ಲಗಳೆದಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಜಮೀರ್ ಅಹಮದ್ ಖಾನ್ ಮಾಧ್ಯಮಗಳಲ್ಲಿ ಬಂದಿರುವ ವರದಿ ಸತ್ಯಕ್ಕೆ ದೂರ ವಾದುದು. ಕಪೋಲ ಕಲ್ಪಿತ ವರದಿಗಳನ್ನು ಪ್ರಸಾರ ಮಾಡುವ ಮೂಲಕ ಮಾಧ್ಯಮಗಳು ತಮ್ಮ ಘನತೆಗೆ ಕುಂದುಂಟು ಮಾಡಿಕೊಳ್ಳಬಾರದು ಎಂದು ಮನವಿ ಮಾಡಿದ್ದಾರೆ.

'ನಿನ್ನೆಯ ಕೆ.ಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ನಮ್ಮ‌ ಪಕ್ಷದ ಮುಖಂಡರಾದ ಸಂಪತ್ ಅವರ ಕೈವಾಡವಿದೆ ಎಂದು ನಾನು ಕೆಲವರ ಬಳಿ ಹೇಳಿದ್ದೇನೆ ಎಂಬ ಸುಳ್ಳು ಸುದ್ದಿ ಮಾಧ್ಯಮವೊಂದರಲ್ಲಿ ಪ್ರಸಾರವಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಮಾಧ್ಯಮಗಳಿಗೆ ನನ್ನದೊಂದು ಮನವಿ, ದಯವಿಟ್ಟು ಕಲ್ಪಿತ ವರದಿಗಳನ್ನು ಪ್ರಸಾರ ಮಾಡಿ ಜನರಿಗೆ ತಪ್ಪು ಸಂದೇಶ ನೀಡಬೇಡಿ'.

'ಹಲವು ವರ್ಷಗಳಿಂದ ಸಂಪತ್ ಅವರು ನನಗೆ ಪರಿಚಿತರು. ಅವರು ನಮ್ಮ ಪಕ್ಷದ ಕಾರ್ಪೊರೇಟರ್ ಕೂಡ ಹೌದು. ಪ್ರಜಾಪ್ರಭುತ್ವದ ನಾಲ್ಕನೇ ಆಧಾರ ಸ್ತಂಭವೆಂದೇ ಕರೆಯಲ್ಪಡುವ ಮಾಧ್ಯಮಗಳ ವರದಿಗಳು ವಸ್ತುನಿಷ್ಠ ಮತ್ತು ನ್ಯಾಯಯುತವಾಗಿರಬೇಕು. ಸುಳ್ಳು ಸುದ್ದಿಗಳಿಂದ ಆ ಘನತೆಗೆ ಧಕ್ಕೆಯಾಗುತ್ತದೆ' ಎಂದು ಜಮೀರ್ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel