ರಾಜ್ಯ

ಈ ವರ್ಷ ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಯಿಲ್ಲ; ಸರ್ಕಾರದ ಕಟ್ಟುನಿಟ್ಟಿನ ಆದೇಶ

ಕೋವಿಡ್‌-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಈ ಬಾರಿ ಬೆಂಗಳೂರು ನಗರದಲ್ಲಿ ಗಣೇಶ ಚತುರ್ದಶಿಯ ಸಾರ್ವಜನಿಕ ಆಚರಣೆ ನಡೆಯುವುದಿಲ್ಲ.

ಬೆಂಗಳೂರು: ಕೋವಿಡ್‌-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಈ ಬಾರಿ ಬೆಂಗಳೂರು ನಗರದಲ್ಲಿ ಗಣೇಶ ಚತುರ್ದಶಿಯ ಸಾರ್ವಜನಿಕ ಆಚರಣೆ ನಡೆಯುವುದಿಲ್ಲ.

ಸಾಂಕ್ರಾಮಿಕ ಹರಡದಂತೆ ಎಚ್ಚರವಹಿಸಲು ಸಾರ್ವಜನಿಕರು ಗುಂಪು ಸೇರುವುದನ್ನು ತಡೆಯುವುದು ಅನಿವಾರ್ಯವಾದ್ದರಿಂದ ಈ ವರ್ಷ ಸರಳ ರೀತಿಯಲ್ಲಿ ದೇವಸ್ಥಾನದೊಳಗೆ ಅಥವಾ ತಮ್ಮ ಮನೆಯಲ್ಲಿಯೇ ಹಬ್ಬ ಆಚರಿಸಬೇಕು ಎಂದು ಸರ್ಕಾರ ಆದೇಶ ಹೊರಡಿಸಿದೆ.

ಪ್ರತಿ ವರ್ಷದಂತೆ ಈ ಬಾರಿ ರಸ್ತೆ, ಗಲ್ಲಿ, ಮೈದಾನ ಮತ್ತಿತರ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸುವಂತಿಲ್ಲ. ಯಾವುದೇ ಕಾರಣಕ್ಕೂ ಸಾರ್ವಜನಿಕ ನದಿ, ಕೆರೆ, ಕೊಳ, ಬಾವಿ ಮತ್ತು ಕಲ್ಯಾಣಿಗಳನ್ನು ಮೂರ್ತಿಯನ್ನು ವಿಸರ್ಜಿಸುವಂತಿಲ್ಲ ಎಂದು ಆದೇಶ ತಿಳಿಸಿದೆ.

ಬಿಬಿಎಂಪಿ ಈ ಸಂಬಂಧ ಮಾರ್ಗಸೂಚಿಯನ್ನು ಹೊರಡಿಸಿದ್ದು "ಮನೆ ಅಥವಾ ದೇವಾಲಯದಲ್ಲಿ ಸರಳವಾಗಿ ಗಣೇಶನ ಹಬ್ಬ ಆಚರಿಸಬೇಕು, ಯಾವ ಕಾರಣಕ್ಕೂ ಸಾರ್ವಜನಿಕ ಗಣೇಶೋತ್ಸವ ಅಥವಾ ಗಣೇಶ ವಿಸರ್ಜನೆ ಮೆರವಣಿಗೆಗೆ ಅವಕಾಶವಿಲ್ಲ. 

"ಮನೆ ಆವರಣದಲ್ಲೇ ಗಣೇಶ ವಿಸರ್ಜನೆಗೆ ಮಾತ್ರ ಅವಕಾಶ, ದೇವಸ್ಥಾನಗಳಲ್ಲಿ ದಿನನಿತ್ಯ ಸ್ಯಾನಿಟೈಸೇಷನ್ ಮಾಡಬೇಕು. 6 ಅಡಿ ಅಂತರ ಕಾಪಾಡಿಕೊಳ್ಳಬೇಕು. ಮುಖಗವಸು ಕಡ್ಡಾಯ. ಮಾರ್ಗಸೂಚಿ ಉಲ್ಲಂಘಿಸಿದವರಿಗೆ  ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಶಿಕ್ಷೆ ವಿಧಿಸಲಾಗುವುದು" ಪ್ರಕಟಣೆ ಹೇಳಿದೆ,

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT