ಸಾಂದರ್ಭಿಕ ಚಿತ್ರ 
ರಾಜ್ಯ

ಕೊಯ್ನಾ ಜಲಾಶಯ ಪ್ರದೇಶದಲ್ಲಿ ಭೂಕಂಪ: ರಾಜ್ಯದ ಕೃಷ್ಣಾ ನದಿ ಪಾತ್ರದಲ್ಲಿ ಆತಂಕ ಸೃಷ್ಟಿ

ಮಹಾರಾಷ್ಟ್ರದ ಸತಾರ ಜಿಲ್ಲೆಯ ಕೊಯ್ನಾ ಅಣೆಕಟ್ಟು ಬಳಿ ಶನಿವಾರ ಬೆಳಿಗ್ಗೆ 3.1 ತೀವ್ರತೆಯ ಭೂಕಂಪ ಸಂಭವಿಸುವುದರೊಂದಿಗೆ ರಾಜ್ಯದ ಕೃಷ್ಣ ನದಿ ಪಾತ್ರದಲ್ಲಿ ಆತಂಕ ಸೃಷ್ಟಿಯಾಗಿತ್ತು.

ವಿಜಯಪುರ: ಮಹಾರಾಷ್ಟ್ರದ ಸತಾರ ಜಿಲ್ಲೆಯ ಕೊಯ್ನಾ ಅಣೆಕಟ್ಟು ಬಳಿ ಶನಿವಾರ ಬೆಳಿಗ್ಗೆ 3.1 ತೀವ್ರತೆಯ ಭೂಕಂಪ ಸಂಭವಿಸುವುದರೊಂದಿಗೆ ರಾಜ್ಯದ ಕೃಷ್ಣ ನದಿ ಪಾತ್ರದಲ್ಲಿ ಆತಂಕ ಸೃಷ್ಟಿಯಾಗಿತ್ತು.

ರಿಕ್ಟರ್ ಮಾಪಕದದಲ್ಲಿ 3.1 ತೀವ್ರತೆಯ ಲಘು ಭೂಕಂಪ ಶನಿವಾರ ಬೆಳಿಗ್ಗೆ 10.22ಕ್ಕೆಸಂಭವಿಸಿದೆ. ಇದರ ಕೇಂದ್ರಬಿಂದು ಕೊಯ್ನಾ ಅಣೆಕಟ್ಟಿನಿಂದ 13.60 ಕಿ.ಮೀ. ದೂರದಲ್ಲಿ ಕೇಂದ್ರೀಕೃತವಾಗಿದೆ. 

ಸಾಮಾಜಿಕ ಮಾಧ್ಯಮಗಳಲ್ಲಿ ಭೂಕಂಪದ ಸುದ್ದಿ ಹರಡುತ್ತಿದ್ದಂತೆ, ಬೆಳಗಾವಿ, ಬಾಗಲಕೋಟೆ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೃಷ್ಣಾ ನದಿ ತೀರದಲ್ಲಿ ವಾಸಿಸುವ ಜನರು ಆತಂಕಕ್ಕೊಳಗಾಗಿದ್ದರು. 

ಕೊಯ್ನಾ ಅಣೆಕಟ್ಟಿನಿಂದ ಹೆಚ್ಚು ನೀರು ಬಿಡುಗಡೆಯಾದರೆ ಸಂಭವನೀಯ ಪ್ರವಾಹದ ಭೀತಿಗೆ ನದಿ ಪಾತ್ರದ ಜನರು ಒಳಗಾಗಿದ್ದರು. ಆದರೆ, ಭೂಕಂಪನದಿಂದಾಗಿ ಅಣೆಕಟ್ಟಿಗೆ ಯಾವುದೇ ರೀತಿ ಹಾನಿಯಾಗಿಲ್ಲ.ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡುವ ಉದ್ದೇಶವೂ ಇಲ್ಲ ಎಂದು ಅಣೆಕಟ್ಟಿನ ಅಧಿಕಾರಿಗಳು ದೃಢಪಡಿಸಿದ್ದಾರೆ.   

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡ್ಯ ಅಬ್ಬರ; ಜಿಂಬಾಬ್ವೆಗೆ 257 ರನ್‌ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT