ಸಚಿವ ಆರ್.ಅಶೋಕ್ 
ರಾಜ್ಯ

ಎಸ್'ಡಿಪಿಐ, ಪಿಎಫ್ಐ ನಿಷೇಧಕ್ಕೆ ಸರ್ಕಾರ ಗಂಭೀರ ಚಿಂತನೆ: ಸಚಿವ ಆರ್.ಅಶೋಕ್

ರಾಜ್ಯದಲ್ಲಿ ಎಸ್'ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳನ್ನು ನಿಷೇಧಿಸುವ ಕುರಿತು ಗಂಭೀರವಾಗಿ ಚಿಂತನೆಗಲನ್ನು ನಡೆಸಲಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸೂಚನೆ ಬಳಿಕ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕಂದಾಯ ಸಚಿನ ಆರ್.ಅಶೋಕ್ ಅವರು ಶುಕ್ರವಾರ ಹೇಳಿದ್ದಾರೆ,

ಬೆಂಗಳೂರು: ರಾಜ್ಯದಲ್ಲಿ ಎಸ್'ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳನ್ನು ನಿಷೇಧಿಸುವ ಕುರಿತು ಗಂಭೀರವಾಗಿ ಚಿಂತನೆಗಲನ್ನು ನಡೆಸಲಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸೂಚನೆ ಬಳಿಕ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಕಂದಾಯ ಸಚಿನ ಆರ್.ಅಶೋಕ್ ಅವರು ಶುಕ್ರವಾರ ಹೇಳಿದ್ದಾರೆ,

ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ಗಲಭೆ ಪ್ರಕರಣದಲ್ಲಿ ಎಸ್'ಡಿಪಿಐಗೆ ನೇರ ಸಂಬಂಧ ಇದೆ. ಇದಲ್ಲದೇ, ರಾಜ್ಯದಲ್ಲಿ ಬಿಜೆಪಿ ಮತ್ತು ಆರ್ಎಸ್ಎಸ್ ಮುಖಂಡರ ಹತ್ಯೆಯಲ್ಲಿ ಎಸ್'ಡಿಪಿಐ ಹಾಗೂ ಪಿಎಫ್ಐ ಸಂಘಟನೆಗಳ ಕೈವಾಡವಿದ್ದು, ಇದಕ್ಕೆ ಸಾಕ್ಷಿ ಇದೆ. ಹೀಗಾಗಿ ಸಂಘಟನೆಗಳನ್ನು ನಿಷೇಧಿಸುವಂತೆ ಕೇಂದ್ರಕ್ಕೆ ಶಿಫಾರಸು ಮಾಡು ಸರ್ಕಾರ ಮುಂದಾಗಿದೆ ಎಂದು ಹೇಳಿದ್ದಾರೆ. 

ರಾಜ್ಯದಲ್ಲಿ ಯಾವುದೇ ದೇಶದ್ರೋಹಿ ಸಂಘಟನೆಗಳು ಇರಬಾರದು. ನಗರದ ಕೆ.ಜಿ. ಹಳ್ಳಿ ಹಾಗೂ ಡಿಜೆ. ಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸುತ್ತೇವೆ. ಎಸ್'ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳನ್ನು ನಿರ್ಬಂಧಿಸುವ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಲಾಗಿದ್ದು, ಕೆಲ ಪ್ರಕ್ರಿಯೆ ಸಹ ಪ್ರಾರಂಭಿಸಲಾಗಿದೆ. ಗೃಹ ಇಲಾಖೆಯಿಂದ ಎಸ್'ಡಿಪಿಐ ಕೃತ್ಯಗಳ ಬಗ್ಗೆ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಮುಖ್ಯಮಂತ್ರಿಗಳು ಸೂಚನೆ ಕೊಟ್ಟ ತರುವಾಯ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ತಿಳಿಸಿದರು. 

ಎಸ್'ಡಿಪಿಐ ಮತ್ತು ಪಿಎಫ್ಐ ಸಂಘಟನೆ ಸಾಕಷ್ಟು ಕೃತ್ಯದಲ್ಲಿ ಭಾಗಿಯಾಗಿದೆ. 2008ರಿಂದ 2020ರವರೆಗೆ ಒಟ್ಟು 17 ಪ್ರಕರಣದಲ್ಲಿ ನೇರ ಭಾಗಿಯಾಗಿವೆ. ಹಿಂದೂ ಪರ ಸಂಘಟನೆ, ಬಿಜೆಪಿ ನಾಯಕರು, ಕಾರ್ಯಕರ್ತರು ಇವರಿಗೆ ನೇರ ಟಾರ್ಗೆಟ್. ಇದು ಕೋಮುಗಲಭೆ ಅಲ್ಲ. ರಾಜಕೀಯ ಸಂಘರ್. ಹೀಗಾಗಿ ಯಾವುದೇ ರೀತಿಯ ಶಾಂತಿ ಸಭೆ ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

SCROLL FOR NEXT