ಮಹಿಳಾ ಶಕ್ತಿ 
ರಾಜ್ಯ

ಸ್ವಾತಂತ್ರ್ಯ ಸಂಗ್ರಾಮದಲ್ಲಿ ಮುಂಚೂಣಿಗೆ ಬಂದ ಕರ್ನಾಟಕದ ಮಹಿಳಾ ಶಕ್ತಿ 

ಕೇವಲ ರಾಣಿಯರು ಮಾತ್ರವಲ್ಲ ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಹಲವು ಮಹಿಳೆಯರು ಭಾಗಿಯಾಗಿದ್ದರು

ಬೆಂಗಳೂರು: ಕೇವಲ ರಾಣಿಯರು ಮಾತ್ರವಲ್ಲ ಸ್ವಾತಂತ್ರ್ಯ ಹೋರಾಟದಲ್ಲಿ ಕರ್ನಾಟಕದ ಹಲವು ಮಹಿಳೆಯರು ಭಾಗಿಯಾಗಿದ್ದರು.

ಗೌರಮ್ಮ ವೆಂಕಟ ರಾಮಯ್ಯ ಅವರು ‘ತೆರಿಗೆ ರಹಿತ ಅಭಿಯಾನ’ದಲ್ಲಿ ಮುಂಚೂಣಿಯಲ್ಲಿದ್ದರು,1938 ಏಪ್ರಿಲ್ 9 ರಂದು ನಡೆದ ಶಿವಪುರ ಧ್ವಜ ಸತ್ಯಾಗ್ರಹದಲ್ಲಿ ಯಶೋಧರ ದಾಸಪ್ಪ ಪ್ರಮುಖ ಪಾತ್ರ ವಹಿಸಿದ್ದರು. ಸ್ವಾತಂತ್ರ್ಯ ಹೋರಾಟಗಾರರಿಗೆ ರಕ್ಷಣೆ ನೀಡಲು ಮತ್ತು ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡಲು ಭಗಿನಿ ಮಂಡಳಿನ್ನು ಉಮಾಬಾಯಿ ಕುಂದಾಪುರ ಸ್ಥಾಪಿಸಿದರು. ಅದೇ ರೀತಿ ಲೀಲಾವತಿ  ಮಾಗಡಿ, ಶಕುಂತಲಾ ಕುರ್ತಕೋಟಿ, ಮತ್ತು ನಾಗಮ್ಮ ಪಾಟೀಲ್ ಮುಂತಾದ ಮಹಿಳೆಯರು ಸ್ವಾತಂತ್ರ್ ಹೋರಾಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಕಿತ್ತೂರು ರಾಣಿ ಚೆನ್ನಮ್ಮ ಮತ್ತು ಬ್ರಿಟಿಷ್ ಆಡಳಿತದಿಂದ ದೇಶವನ್ನು ಮುಕ್ತಗೊಳಿಸುವ ಅವರ ಉಪಕ್ರಮದಿಂದಾಗಿ ಒಂದು ಸಣ್ಣ ಸ್ಥಳವು ಇತಿಹಾಸದ ಪುಟಗಳಲ್ಲಿ ಹೆಚ್ಚಿನ ಪ್ರಾಮುಖ್ಯತೆಯನ್ನು ಗಳಿಸಿದೆ.  1824 ರಲ್ಲಿ ಪತಿ ಮತ್ತು ಮಗನ ಮರಣದ ನಂತರ ತನ್ನ ಪ್ರದೇಶವನ್ನು ಬ್ರಿಟಿಷರಿಗೆ ಹಸ್ತಾಂತರಿಸಬೇಕಾಯಿತು. ಬ್ರಿಟಿಷರನ್ನು ಒಮ್ಮೆ ಸೋಲಿಸಿದ ನಂತರ, ಯುದ್ಧವು ನಿಲ್ಲುತ್ತದೆ ಎಂದು ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದಳು. ಆದರೆ ಬ್ರಿಟಿಷರು ಮತ್ತೆ ಕಿತ್ತೂರಿನ ಮೇಲೆ ದಾಳಿ ನಡೆಸಿದರು.   ಬ್ರಿಟಿಷರೊಂದಿಗಿನ ಎರಡನೇ ಯುದ್ಧ, ಚೆನ್ನಮ್ಮ ಧೈರ್ಯದಿಂದ ಹೋರಾಡಿದಳು ಆದರೆ ಬೈಲಾಹೊಂಗಲದಲ್ಲಿ ಸೆರೆಹಿಡಿಯಲ್ಪಟ್ಟಳು. ಅವಳು ಬಂಧನದಲ್ಲಿದ್ದಾಗಲೇ ಮರಣಹೊಂದಿದಳು. ಚನ್ನಮ್ಮ ಉತ್ತರಾಧಿಕಾರಿ ಸಂಗೊಳ್ಳಿ ರಾಯಣ್ಣ ಅವನನ್ನು ಸೆರೆಹಿಡಿದು ಸಾಯುವವರೆಗೂ ಬ್ರಿಟಿಷರ ಜೊತೆ ಹೋರಾಡಿದರು.

ಅಬ್ಬಕ್ಕ ರಾಣಿ ಅಥವಾ 'ಅಬ್ಬಕ್ಕ ಮಹಾದೇವಿ' ತುಳುನಾಡಿನ ರಾಣಿಯಾಗಿದ್ದಳು.  ಪೋರ್ಚುಗೀಸರೊಡನೆ ಹೋರಾಡಿದಳು. ರಾಣಿಯು ದೇವಾಲಯಗಳ ನಗರಿ ಮೂಡುಬಿದಿರೆಯ ಪ್ರದೇಶ ಹೊನ್ನಾಳಿದ ಚೌಟ ವಂಶಕ್ಕೆ ಸೇರಿದವಳು. ಬಂದರು ನಗರಿ ಉಳ್ಳಾಲವು ರಾಜಧಾನಿಯಾಗಿದ್ದಿತು. ಆಯಕಟ್ಟಿನ ಪ್ರದೇಶವಾದ ಉಳ್ಳಾಲವನ್ನು ವಶಪಡಿಸಿಕೊಳ್ಳಲು ಪೋರ್ಚುಗೀಸರು ಅನೇಕ ಯತ್ನಗಳನ್ನು ನೆಡೆಸಿದರು. ಆದರೆ ರಾಣಿಯು ಅವರ ಪ್ರಯತ್ನವನ್ನು ನಾಲ್ಕು ದಶಕಗಳಕಾಲ ಹಿಮ್ಮೆಟ್ಟಿಸಿದಳು. ಅವಳ ಧೈರ್ಯದಿಂದಾಗಿ ಅಭಯ
ರಾಣಿಎಂದು ಹೆಸರಾಗಿದ್ದಳು. ವಸಾಹತುಶಾಷಿಗಳ ವಿರುದ್ಧ ಹೋರಾಡಿದ ಮೊದಲ ಭಾರತೀಯರಲ್ಲಿ ಒಬ್ಬಳು ಮತ್ತು ಮೊದಲ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿಯಾಗಿದ್ದಳು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT