ಸಾಂದರ್ಭಿಕ ಚಿತ್ರ 
ರಾಜ್ಯ

ಪ್ರತಿಕೂಲ ಹವಾಮಾನ; ಮಾರ್ಗಮಧ್ಯದಲ್ಲಿ ಸಿಲುಕಿದ ಅನಂತಕುಮಾರ್‌ ಹೆಗಡೆ ಪ್ರಯಾಣಿಸುತ್ತಿದ್ದ ವಿಮಾನ

ಉತ್ತರ ಕನ್ನಡ ಸಂಸದ ಅನಂತಕುಮಾರ್‌ ಹೆಗಡೆ ಸೇರಿದಂತೆ 49 ಪ್ರಯಾಣಿಕರನ್ನು ಸಾಗಿಸುತ್ತಿದ್ದ ವಿಮಾನ ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ವಾಯುಮಾರ್ಗದಲ್ಲೇ ಸಿಲುಕಿಕೊಂಡ ಘಟನೆ ಭಾನುವಾರ ನಡೆದಿದೆ.

ಹುಬ್ಬಳ್ಳಿ: ಉತ್ತರ ಕನ್ನಡ ಸಂಸದ ಅನಂತಕುಮಾರ್‌ ಹೆಗಡೆ ಸೇರಿದಂತೆ 49 ಪ್ರಯಾಣಿಕರನ್ನು ಸಾಗಿಸುತ್ತಿದ್ದ ವಿಮಾನ ಹವಾಮಾನ ವೈಪರಿತ್ಯದ ಹಿನ್ನೆಲೆಯಲ್ಲಿ ವಾಯುಮಾರ್ಗದಲ್ಲೇ ಸಿಲುಕಿಕೊಂಡ ಘಟನೆ ಭಾನುವಾರ ನಡೆದಿದೆ.

ಇಂಡಿಗೊ ಸಂಸ್ಥೆಯ ಬೆಂಗಳೂರು-ಹುಬ್ಬಳ್ಳಿ ನಡುವೆ ಪ್ರಯಾಣಿಸುವ 6E 7162 ವಿಮಾನ ಬೆಳಗ್ಗೆ 8.55ಕ್ಕೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭೂಸ್ಪರ್ಶ ಮಾಡಬೇಕಿತ್ತು. ಆದರೆ, ವಿಮಾನ ಕೆಳಗಿಳಿಸಲು ಅನುಕೂಲಕರ ಹವಾಮಾನ ಇಲ್ಲದ್ದರಿಂದ ಸುಮಾರು ಒಂದು ಗಂಟೆಯ ಕಾಲ ವಿಮಾನ ಗಾಳಿಯಲ್ಲಿಯೇ ಹಾರಾಡುತ್ತಿತ್ತು. ಕೊನೆಗೆ 10.25ರ ಸುಮಾರು ವಿಮಾನ ಸುರಕ್ಷಿತವಾಗಿ ಭೂಸ್ಪರ್ಶ ಮಾಡಿದೆ. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ವಿಮಾನ ನಿಲ್ದಾಣ ಪ್ರಾಧಿಕಾರ ತಿಳಿಸಿದೆ. 

ವಿಮಾನದಲ್ಲಿ ಸಾಕಷ್ಟು ಇಂಧನ ಸಂಗ್ರಹವಿತ್ತು. ಹೀಗಾಗಿ ಏನೂ ತೊಂದರೆ ಇರಲಿಲ್ಲ. ವಾತಾವರಣ ಸಮಸ್ಯೆಯಿಂದ ತಡವಾಗಿ ಲ್ಯಾಂಡ್ ಆಗಿದೆ. ಸ್ಥಳೀಯ ವಾತಾವರಣ ಹಾಗೂ ಲ್ಯಾಂಡಿಂಗ್ ತಡವಾಗುವುದರ ಬಗ್ಗೆ ಮೊದಲೇ‌ ಮಾಹಿತಿ ಇತ್ತು ಎಂದು ಇಂಡಿಗೊ ಸಂಸ್ಥೆಯ ಸಿಬ್ಬಂದಿಯೊಬ್ಬರು ತಿಳಿಸಿದ್ದಾರೆ. ಈ ವಿಮಾನದಲ್ಲಿ ಸಂಸದ ಅನಂತಕುಮಾರ್ ಹೆಗಡೆ ಸೇರಿದಂತೆ 40 ಪ್ರಯಾಣಿಕರು ಇದ್ದರು. 

ಇತ್ತೀಚೆಗಷ್ಟೇ ಕೇರಳದ ಕಲ್ಲಿಕೋಟೆಯಲ್ಲಿ ಇದೇ ರೀತಿಯ ಪ್ರತೀಕೂಲ ಹವಾಮಾನದಿಂದಾಗಿ ಏರ್ ಇಂಡಿಯಾದ ವಿಮಾನ ದುರಂತಕ್ಕೀಡಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!