ತುಂಗಭದ್ರಾ ಜಲಾಶಯ 
ರಾಜ್ಯ

ಯಾವುದೇ ಕ್ಷಣಕ್ಕೆ ಸಾವಿರಾರು ಕ್ಯೂಸೆಕ್ ನೀರು: ತುಂಗಭದ್ರಾ ಪಾತ್ರದಲ್ಲಿ ಹೈ ಅಲರ್ಟ್ 

ತುಂಗಭದ್ರಾ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುವ ಸಾಧ್ಯತೆ ಇದ್ದು ನದಿ ಪಾತ್ರದಲ್ಲಿನ ಗ್ರಾಮಗಳ ಜನರಲ್ಲಿ ಇದೀಗ ಹೈ ಅಲರ್ಟ್ ಇರುವಂತೆ ವಿಪತ್ತು ನಿರ್ವಹಣಾ ತಂಡ ಜಾಗೃತಿ ಮೂಡಿಸುತ್ತಿದೆ.

ಗಂಗಾವತಿ: ತುಂಗಭದ್ರಾ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುವ ಸಾಧ್ಯತೆ ಇದ್ದು ನದಿ ಪಾತ್ರದಲ್ಲಿನ ಗ್ರಾಮಗಳ ಜನರಲ್ಲಿ ಇದೀಗ ಹೈ ಅಲರ್ಟ್ ಇರುವಂತೆ ವಿಪತ್ತು ನಿರ್ವಹಣಾ ತಂಡ ಜಾಗೃತಿ ಮೂಡಿಸುತ್ತಿದೆ.

ಜಲಾಶಯದ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಅಪಾರ ಪ್ರಮಾಣದ  ಮಳೆಯಿಂದಾಗಿ ನಿರೀಕ್ಷೆಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಒಳ ಹರಿವು ಹೆಚ್ಚಾದಂತೆ ಸಹಜವಾಗಿ ಜಲಾಶಯ ಭರ್ತಿಯಾಗಿದ್ದು, ಹೆಚ್ಚುವರಿ 
ನೀರನ್ನು ವಾಡಿಕೆಯಂತೆ ನದಿಗೆ ಹರಿಸಲಾಗುತ್ತದೆ.

ಈ ಹಿನ್ನೆಲೆ ನದಿ ಪಾತ್ರದಲ್ಲಿರುವ ಗ್ರಾಮಗಳ ಜನ, ಬಟ್ಟೆ ತೊಳೆಯಲು, ಜಾನುವಾರುಗಳಿಗೆ ನೀರು ಕುಡಿಸುವ ಉದ್ದೇಶಕ್ಕೆ ನದಿ ಸಮೀಪಕ್ಕೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ನದ ಸಮೀಪದ ಹೊಲ-ಗದ್ದೆ, ತೋಟಗಳಿಗೆ ಹೋಗದಂತೆ ರೈತರಿಗೆ ಜಾಗೃತಿ ಮೂಡಿಸಲಾಗುತಿದೆ.

ಈಗಾಗಲೆ ಕಡೇಬಾಗಿಲು, ಸಣಾಪುರ, ಬಸವನದುರ್ಗ, ರಾಂದುರ್ಗ (ಗೂಗಿಬಂಡೆ ಕ್ಯಾಂಪ್), ಸಿಂಗನಗುಂಡ, ಆನೆಗೊಂದಿ, ಹಿರೇಜಂತಕಲ್, ದೇವಘಾಟ, ಚಿಕ್ಕಜಂತಕಲ್, ಹೆಬ್ಬಾಳ, ಮುಸ್ಟೂರು, ಉಳೇನೂರು, ಬೆನ್ನೂರು, ಕುಂಟೋಜಿ, ಲಕ್ಷ್ಮಿಕ್ಯಾಂಪ್ ಮೊದಲಾದ ಗ್ರಾಮಗಳಲ್ಲಿ ಹೈ ಅಲರ್ಟ್ ಮೂಡಿಸಲಾಗಿದೆ.  
ವರದಿ: ಶ್ರೀನಿವಾಸ್ .ಎಂ.ಜೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT