ತುಂಗಭದ್ರಾ ಜಲಾಶಯ 
ರಾಜ್ಯ

ಯಾವುದೇ ಕ್ಷಣಕ್ಕೆ ಸಾವಿರಾರು ಕ್ಯೂಸೆಕ್ ನೀರು: ತುಂಗಭದ್ರಾ ಪಾತ್ರದಲ್ಲಿ ಹೈ ಅಲರ್ಟ್ 

ತುಂಗಭದ್ರಾ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುವ ಸಾಧ್ಯತೆ ಇದ್ದು ನದಿ ಪಾತ್ರದಲ್ಲಿನ ಗ್ರಾಮಗಳ ಜನರಲ್ಲಿ ಇದೀಗ ಹೈ ಅಲರ್ಟ್ ಇರುವಂತೆ ವಿಪತ್ತು ನಿರ್ವಹಣಾ ತಂಡ ಜಾಗೃತಿ ಮೂಡಿಸುತ್ತಿದೆ.

ಗಂಗಾವತಿ: ತುಂಗಭದ್ರಾ ಜಲಾಶಯದಿಂದ ಯಾವುದೇ ಕ್ಷಣದಲ್ಲಿ ನದಿಗೆ ನೀರು ಬಿಡುವ ಸಾಧ್ಯತೆ ಇದ್ದು ನದಿ ಪಾತ್ರದಲ್ಲಿನ ಗ್ರಾಮಗಳ ಜನರಲ್ಲಿ ಇದೀಗ ಹೈ ಅಲರ್ಟ್ ಇರುವಂತೆ ವಿಪತ್ತು ನಿರ್ವಹಣಾ ತಂಡ ಜಾಗೃತಿ ಮೂಡಿಸುತ್ತಿದೆ.

ಜಲಾಶಯದ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಅಪಾರ ಪ್ರಮಾಣದ  ಮಳೆಯಿಂದಾಗಿ ನಿರೀಕ್ಷೆಗಿಂತಲೂ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಒಳ ಹರಿವು ಹೆಚ್ಚಾದಂತೆ ಸಹಜವಾಗಿ ಜಲಾಶಯ ಭರ್ತಿಯಾಗಿದ್ದು, ಹೆಚ್ಚುವರಿ 
ನೀರನ್ನು ವಾಡಿಕೆಯಂತೆ ನದಿಗೆ ಹರಿಸಲಾಗುತ್ತದೆ.

ಈ ಹಿನ್ನೆಲೆ ನದಿ ಪಾತ್ರದಲ್ಲಿರುವ ಗ್ರಾಮಗಳ ಜನ, ಬಟ್ಟೆ ತೊಳೆಯಲು, ಜಾನುವಾರುಗಳಿಗೆ ನೀರು ಕುಡಿಸುವ ಉದ್ದೇಶಕ್ಕೆ ನದಿ ಸಮೀಪಕ್ಕೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಅಲ್ಲದೇ ನದ ಸಮೀಪದ ಹೊಲ-ಗದ್ದೆ, ತೋಟಗಳಿಗೆ ಹೋಗದಂತೆ ರೈತರಿಗೆ ಜಾಗೃತಿ ಮೂಡಿಸಲಾಗುತಿದೆ.

ಈಗಾಗಲೆ ಕಡೇಬಾಗಿಲು, ಸಣಾಪುರ, ಬಸವನದುರ್ಗ, ರಾಂದುರ್ಗ (ಗೂಗಿಬಂಡೆ ಕ್ಯಾಂಪ್), ಸಿಂಗನಗುಂಡ, ಆನೆಗೊಂದಿ, ಹಿರೇಜಂತಕಲ್, ದೇವಘಾಟ, ಚಿಕ್ಕಜಂತಕಲ್, ಹೆಬ್ಬಾಳ, ಮುಸ್ಟೂರು, ಉಳೇನೂರು, ಬೆನ್ನೂರು, ಕುಂಟೋಜಿ, ಲಕ್ಷ್ಮಿಕ್ಯಾಂಪ್ ಮೊದಲಾದ ಗ್ರಾಮಗಳಲ್ಲಿ ಹೈ ಅಲರ್ಟ್ ಮೂಡಿಸಲಾಗಿದೆ.  
ವರದಿ: ಶ್ರೀನಿವಾಸ್ .ಎಂ.ಜೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT