ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ: 120 ಅಂತ್ಯಕ್ರಿಯೆಗಳಿಗೆ ಸಹಾಯ ಮಾಡಿ ಇತರರಿಗೆ ಪ್ರೇರಣೆಯಾದ ಮೈಸೂರು ವ್ಯಕ್ತಿ!

ಕೊರೋನಾ ವೈರಸ್ ಎಂಬ ಹೆಸರು ಕೇಳಿದರೆ ಜನರು ಬೆಚ್ಚಿ ಬೀಳುತ್ತಿರುವ ಈ ದಿನಗಳಲ್ಲಿ ಮೈಸೂರು ಮೂಲದ ವ್ಯಕ್ತಿಯೊಬ್ಬರು 120 ಮಂದಿ ಸೋಂಕಿತ ವ್ಯಕ್ತಿಗಳ ಅಂತ್ಯಕ್ರಿಯೆ ನಡೆಸಲು ಸಹಾಯ ಮಾಡುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ. 

ಮೈಸೂರು: ಕೊರೋನಾ ವೈರಸ್ ಎಂಬ ಹೆಸರು ಕೇಳಿದರೆ ಜನರು ಬೆಚ್ಚಿ ಬೀಳುತ್ತಿರುವ ಈ ದಿನಗಳಲ್ಲಿ ಮೈಸೂರು ಮೂಲದ ವ್ಯಕ್ತಿಯೊಬ್ಬರು 120 ಮಂದಿ ಸೋಂಕಿತ ವ್ಯಕ್ತಿಗಳ ಅಂತ್ಯಕ್ರಿಯೆ ನಡೆಸಲು ಸಹಾಯ ಮಾಡುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ. 

ಆಯುಬ್ ಅಹ್ಮದ್ ಅವರು ಸೋಂಕಿತರ ಮೃತದೇಹಗಳನ್ನು ಗೌರವಯುತವಾಗಿ ಅಂತ್ಯಸಂಸ್ಕಾರ ನೆರವೇರಿಸಲು ಪಾಲಿಕೆ ಅಧಿಕಾರಿಗಳಿಗೆ ಸಹಾಯ ಮಾಡಿದ್ದಾರೆ. 

ಬೇರೆ ಬೇರೆ ಧರ್ಮಕ್ಕೆ ಸೇರಿದ 10,000 ಜನರಿಗೆ ಅಂತ್ಯ ಸಂಸ್ಕಾರ ನೆರವೇರಿಸಲು ಅಹ್ಮದ್ ಅವರು ವ್ಯವಸ್ಥೆಗಳನ್ನು ಮಾಡಿಕೊಟ್ಟಿದ್ದಾರೆ. 

ಈ ಕುರಿತು ಮಾಹಿತಿ ತಿಳಿದ ಮೈಸೂರು ಆರೋಗ್ಯ ಇಲಾಖೆಯ ಅಧಿಕಾರಿಗಳು ಸೋಂಕಿತರ ಅಂತ್ಯಸಂಸ್ಕಾರಕ್ಕೂ ಸಹಾಯ ಮಾಡುವಂತೆ ಅಹ್ಮದ್ ಅವರ ಬಳಿ ಮನವಿ ಮಾಡಿಕೊಂಡಿದ್ದಾರೆ. ಇದರಂತೆ ಅಹ್ಮದ್ ಅವರು ಈ ವರೆಗೂ 120 ಮಂದಿ ಸೋಂಕಿತ ವ್ಯಕ್ತಿಗಳ ಅಂತ್ಯಸಂಸ್ಕಾರಕ್ಕೆ ಸಹಾಯ ಮಾಡಿದ್ದಾರೆ. 

ಜಿಲ್ಲೆಯಲ್ಲಿ ಕೊರೋನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಅಹ್ಮದ್ ಅವರ ಸಹಾಯ ಪಡೆಯಲು ನಾವು ಮುಂದಾಗಿದ್ದೆವು. ಈ ವೇಳೆ ಯಾವುದೇ ಆಲೋಚನೆಯನ್ನೂ ಮಾಡದೆ ಅಹ್ಮದ್ ಅವರು ಒಪ್ಪಿದ್ದರು. ಇಂತಹ ನಿಸ್ವಾರ್ಥ ಸೇವೆಗೆ ಯಾರೂ ಒಪ್ಪುವುದಿಲ್ಲ. ಆದರೆ, ಅಹ್ಮದ್ ಒಪ್ಪಿದ್ದರು. ಅವರ ಸೇವೆಯನ್ನು ಶ್ಲಾಘಿಸಲೇಬೇಕು ಎಂದು ಮೈಸೂರು ನಗರ ಪಾಲಿಕೆಯ ಆರೋಗ್ಯಾಧಿಕಾರಿ ಡಾ.ಜಯಂತ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT