ಸಂಗ್ರಹ ಚಿತ್ರ 
ರಾಜ್ಯ

ಕೊರೋನಾ: 120 ಅಂತ್ಯಕ್ರಿಯೆಗಳಿಗೆ ಸಹಾಯ ಮಾಡಿ ಇತರರಿಗೆ ಪ್ರೇರಣೆಯಾದ ಮೈಸೂರು ವ್ಯಕ್ತಿ!

ಕೊರೋನಾ ವೈರಸ್ ಎಂಬ ಹೆಸರು ಕೇಳಿದರೆ ಜನರು ಬೆಚ್ಚಿ ಬೀಳುತ್ತಿರುವ ಈ ದಿನಗಳಲ್ಲಿ ಮೈಸೂರು ಮೂಲದ ವ್ಯಕ್ತಿಯೊಬ್ಬರು 120 ಮಂದಿ ಸೋಂಕಿತ ವ್ಯಕ್ತಿಗಳ ಅಂತ್ಯಕ್ರಿಯೆ ನಡೆಸಲು ಸಹಾಯ ಮಾಡುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ. 

ಮೈಸೂರು: ಕೊರೋನಾ ವೈರಸ್ ಎಂಬ ಹೆಸರು ಕೇಳಿದರೆ ಜನರು ಬೆಚ್ಚಿ ಬೀಳುತ್ತಿರುವ ಈ ದಿನಗಳಲ್ಲಿ ಮೈಸೂರು ಮೂಲದ ವ್ಯಕ್ತಿಯೊಬ್ಬರು 120 ಮಂದಿ ಸೋಂಕಿತ ವ್ಯಕ್ತಿಗಳ ಅಂತ್ಯಕ್ರಿಯೆ ನಡೆಸಲು ಸಹಾಯ ಮಾಡುವ ಮೂಲಕ ಇತರರಿಗೆ ಪ್ರೇರಣೆಯಾಗಿದ್ದಾರೆ. 

ಆಯುಬ್ ಅಹ್ಮದ್ ಅವರು ಸೋಂಕಿತರ ಮೃತದೇಹಗಳನ್ನು ಗೌರವಯುತವಾಗಿ ಅಂತ್ಯಸಂಸ್ಕಾರ ನೆರವೇರಿಸಲು ಪಾಲಿಕೆ ಅಧಿಕಾರಿಗಳಿಗೆ ಸಹಾಯ ಮಾಡಿದ್ದಾರೆ. 

ಬೇರೆ ಬೇರೆ ಧರ್ಮಕ್ಕೆ ಸೇರಿದ 10,000 ಜನರಿಗೆ ಅಂತ್ಯ ಸಂಸ್ಕಾರ ನೆರವೇರಿಸಲು ಅಹ್ಮದ್ ಅವರು ವ್ಯವಸ್ಥೆಗಳನ್ನು ಮಾಡಿಕೊಟ್ಟಿದ್ದಾರೆ. 

ಈ ಕುರಿತು ಮಾಹಿತಿ ತಿಳಿದ ಮೈಸೂರು ಆರೋಗ್ಯ ಇಲಾಖೆಯ ಅಧಿಕಾರಿಗಳು ಸೋಂಕಿತರ ಅಂತ್ಯಸಂಸ್ಕಾರಕ್ಕೂ ಸಹಾಯ ಮಾಡುವಂತೆ ಅಹ್ಮದ್ ಅವರ ಬಳಿ ಮನವಿ ಮಾಡಿಕೊಂಡಿದ್ದಾರೆ. ಇದರಂತೆ ಅಹ್ಮದ್ ಅವರು ಈ ವರೆಗೂ 120 ಮಂದಿ ಸೋಂಕಿತ ವ್ಯಕ್ತಿಗಳ ಅಂತ್ಯಸಂಸ್ಕಾರಕ್ಕೆ ಸಹಾಯ ಮಾಡಿದ್ದಾರೆ. 

ಜಿಲ್ಲೆಯಲ್ಲಿ ಕೊರೋನಾದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಅಹ್ಮದ್ ಅವರ ಸಹಾಯ ಪಡೆಯಲು ನಾವು ಮುಂದಾಗಿದ್ದೆವು. ಈ ವೇಳೆ ಯಾವುದೇ ಆಲೋಚನೆಯನ್ನೂ ಮಾಡದೆ ಅಹ್ಮದ್ ಅವರು ಒಪ್ಪಿದ್ದರು. ಇಂತಹ ನಿಸ್ವಾರ್ಥ ಸೇವೆಗೆ ಯಾರೂ ಒಪ್ಪುವುದಿಲ್ಲ. ಆದರೆ, ಅಹ್ಮದ್ ಒಪ್ಪಿದ್ದರು. ಅವರ ಸೇವೆಯನ್ನು ಶ್ಲಾಘಿಸಲೇಬೇಕು ಎಂದು ಮೈಸೂರು ನಗರ ಪಾಲಿಕೆಯ ಆರೋಗ್ಯಾಧಿಕಾರಿ ಡಾ.ಜಯಂತ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT