ಗೃಹ ಇಲಾಖೆಯ ಅಧಿಕಾರಿಗಳೊಂದಿಗೆ ಸಿಎಂ ಸಭೆ 
ರಾಜ್ಯ

ಗೂಂಡಾ ಕಾಯ್ದೆಯಡಿ ಬಂಧನ, ನಷ್ಟ ವಸೂಲಿ; ಗಲಭೆಕೋರರ ಹೆಡೆಮುರಿಕಟ್ಟಲು ಮುಂದಾದ ಸರ್ಕಾರ, ಬಿಎಸ್ ವೈ ಸಭೆಯ ಪ್ರಮುಖಾಂಶಗಳು!

ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದ ಬೆಂಗಳೂರಿನ ಡಿಜೆ  ಹಳ್ಳಿ ಮತ್ತು ಕೆಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಗಲಭೆ ಕೋರರ ಹೆಡೆಮುರಿ ಕಟ್ಟಲು ಸರ್ಕಾರ ಮುಂದಾಗಿದ್ದು, ಈ ಸಂಬಂಧ ಇಂದು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಬೆಂಗಳೂರು: ಇಡೀ ರಾಜ್ಯವನ್ನು ಬೆಚ್ಚಿ ಬೀಳಿಸಿದ ಬೆಂಗಳೂರಿನ ಡಿಜೆ  ಹಳ್ಳಿ ಮತ್ತು ಕೆಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಗಲಭೆ ಕೋರರ ಹೆಡೆಮುರಿ ಕಟ್ಟಲು ಸರ್ಕಾರ ಮುಂದಾಗಿದ್ದು, ಈ ಸಂಬಂಧ ಇಂದು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಹಲವು ನಿರ್ಣಯಗಳನ್ನು ಕೈಗೊಳ್ಳಲಾಗಿದೆ.

ಈ ಬಗ್ಗೆ ಸ್ವತಃ ಸಿಎಂ ಬಿಎಸ್ ಯಡಿಯೂರಪ್ಪ ಅವರು ಟ್ವೀಟ್ ಮಾಡಿದ್ದು, ಗಲಭೆ ಮಾಡುವವರನ್ನು ಗೂಂಡಾ ಕಾಯ್ದೆಯಡಿ ಬಂಧಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ ಗಲಭೆಯಿಂದ ಸಂಭವಿಸಿದ ನಷ್ಟವನ್ನೂ ಅವರಿಂದಲೇ ವಸೂಲಿ ಮಾಡುವಂತೆ ಸೂಚಿಸಿದ್ದು, ಈ ಸಂಬಂಧ ಕೈಗೊಳ್ಳಬೇಕಾದ ಕಾನೂನು ರೀತಿಯ ಕ್ರಮಗಳನ್ನು ಜರುಗಿಸುವಂತೆಯೂ ಸೂಚನೆ ನೀಡಿದ್ದಾರೆ.

ಉಳಿದಂತೆ ಸಿಎಂ ಸಭೆಯ ಪ್ರಮುಖಾಂಶಗಳು:
1. ಆರೋಪಿಗಳ ತ್ವರಿತ ವಿಚಾರಣೆಗಾಗಿ, ಕಾನೂನು ಪ್ರಕ್ರಿಯೆಗಳಿಗಾಗಿ ಮೂವರು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಗಳ ನೇಮಕ.
2. ಗಲಭೆಯಡಿ ಬಂಧಿಸಿರುವ ಆರೋಪಿಗಳ ಜತೆ ಉಗ್ರ ಸಂಘಟನೆಗಳ ಲಿಂಕ್ ಇದ್ಯಾ ಅನ್ನೋ ಬಗ್ಗೆ ಬಗ್ಗೆ ಪರಿಶೀಲನೆಗೆ ನಿರ್ಧಾರ.
3. ಘಟನೆಯಿಂದ ಆಗಿರುವ ಆಸ್ತಿಪಾಸ್ತಿ ನಷ್ಟ ವಸೂಲಿಗೆ ಕ್ಲೇಂ ಕಮೀಷನರ್ ನೇಮಕ ಮಾಡುವಂತೆ ಹೈಕೋರ್ಟ್ ಗೆ ಮನವಿ ಸಲ್ಲಿಕೆಗೆ ನಿರ್ಧಾರ.
4. ಪ್ರಕರಣದಲ್ಲಿ ಭಾಗಿಯಾದವರ ಮೇಲೆ ಹಿಂದೆ ಕೇಸ್ ಇದ್ದರೆ ಪರಿಶೀಲಿಸಿ ಅಂತಹವರ ಮೇಲೆ ಗೂಂಡಾ ಕಾಯ್ದೆಯ ಅಡಿ ಹಾಕಲು ನಿರ್ಧಾರ.
5. ಪ್ರಕರಣದಲ್ಲಿ ಭಾಗಿಯಾದವರು ಇತರೇ ಸಂಘಟನೆಗಳ ಜೊತೆ ಗುರ್ತಿಸಿಕೊಂಡಿರುವ ಬಗ್ಗೆ ಪರಿಶೀಲನೆ.
6. ಪ್ರಕರಣದ ಹಿಂದಿರುವ ರಾಜಕೀಯ ಕಾರಣಗಳ ಬಗ್ಗೆಯೂ ಪರಿಶೀಲನೆ.
7. ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ನೇತೃತ್ವದ ಒಂದೇ ತನಿಖಾ ತಂಡದಿಂದ ಮಾತ್ರ ಸದ್ಯಕ್ಕೆ ತನಿಖೆ. ಇದರಲ್ಲೂ ಸದ್ಯಕ್ಕೆ ಬದಲಾವಣೆ ಇಲ್ಲ.
8. ಗೋಲಿಬಾರ್ ಪ್ರಕರಣವೂ ಜಿಲ್ಲಾ ಮ್ಯಾಜಿಸ್ಟ್ರೇಟ್ ನೇತೃತ್ವದಲ್ಲಿ ತನಿಖೆ. ಇದರಲ್ಲಿ ಬದಲಾವಣೆ ಇಲ್ಲ.
9. ಆರೋಪಿಗಳ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ನಿರ್ಬಂಧ ಕಾಯ್ದೆಯಡಿಯೂ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

ಇನ್ನು ಇಂದಿನ ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಡ್ವೊಕೇಟ್‌ ಜನರಲ್‌ ಪ್ರಭುಲಿಂಗ ನಾವಡಗಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಪೊಲೀಸ್‌ ಮಹಾನಿರ್ದೇಶಕ ಪ್ರವೀಣ್ ಸೂದ್, ಗುಪ್ತವಾರ್ತೆ ವಿಭಾಗದ ಎಡಿಜಿಪಿ ಬಿ. ದಯಾನಂದ, ಪೊಲೀಸ್‌ ಕಮಿಷನರ್‌, ಕಮಲ್‍ಪಂತ್, ಎಡಿಜಿಪಿ (ಕಾನೂನು ಮತ್ತು ಸುವ್ಯವಸ್ಥೆ) ಅಮರ ಕುಮಾರ್ ಪಾಂಡೆ ಇದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT