ಪ್ರತಿಭಟನಾ ನಿರತ ಮುಸ್ಲಿಂ ಮಹಿಳೆಯರು 
ರಾಜ್ಯ

ಬೆಂಗಳೂರು ಗಲಭೆ: ಡಿ.ಜೆ.ಹಳ್ಳಿ ಠಾಣೆ ಎದುರು ಶುರುವಾಯ್ತು ಹೈಡ್ರಾಮಾ

ಕೆ.ಜಿ.ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ತಡರಾತ್ರಿ ಪೊಲೀಸರು ಹಲವರನ್ನು ಬಂಧಿಸಿದ ಬೆನ್ನಲ್ಲೇ, ಪೊಲೀಸ್ ಠಾಣೆ ಬಳಿ ಜಮಾಯಿಸಿದ 50ಕ್ಕೂ ಹೆಚ್ಚು ಪೋಷಕರು ಅಪ್ರಾಪ್ತರಾಗಿರುವ ತಮ್ಮ ಮಕ್ಕಳು ಮುಗ್ಧರಾಗಿದ್ದು, ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ಹೇಳಿದ್ದಾರೆ. 

ಬೆಂಗಳೂರು: ಕೆ.ಜಿ.ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ ತಡರಾತ್ರಿ ಪೊಲೀಸರು ಹಲವರನ್ನು ಬಂಧಿಸಿದ ಬೆನ್ನಲ್ಲೇ, ಪೊಲೀಸ್ ಠಾಣೆ ಬಳಿ ಜಮಾಯಿಸಿದ 50ಕ್ಕೂ ಹೆಚ್ಚು ಪೋಷಕರು ಅಪ್ರಾಪ್ತರಾಗಿರುವ ತಮ್ಮ ಮಕ್ಕಳು ಮುಗ್ಧರಾಗಿದ್ದು, ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ಹೇಳಿದ್ದಾರೆ. 

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರು, ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ ಹಿನ್ನೆಲೆಯಲ್ಲೇ ನಾವು ಯುವಕರನ್ನು ಬಂಧನಕ್ಕೊಫಡಿಸಲಾಗಿದೆ. ಈ ವರೆಗೂ 264 ಮಂದಿಯನ್ನು ಬಂಧನಕ್ಕೊಳಪಡಿಸಲಾಗಿದ್ದು, ಇದರಲ್ಲಿ ಯಾರೊಬ್ಬರೂ ಅಪ್ರಾಪ್ತ ವಯಸ್ಕರಿಲ್ಲ. ಸಿಸಿಟಿವ ದೃಶ್ಯಾವಳಿಗಳನ್ನು ಸಂಗ್ರಹಿಸಿದ ಬಳಿಕ ಯುವಕರನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆಂದು ಹೇಳಿದ್ದಾರೆ. 

ಗಲಭೆಯನ್ನು ಒಟ್ಟು 5 ಗುಂಪುಗಳು ನಡೆಸಿವೆ. ಒಂದು ಗುಂಪು ಡಿಜೆ ಹಳ್ಳಿ ಪೊಲೀಸ್ ಠಾಣೆ ಬಳಿ, ಎರಡನೇ ಗುಂಪುಪೊಲೀಸ್ ಠಾಣೆ ಒಳಗೆ, ಮೂರನೇ ಗುಂಪು ಕೆಜಿ ಹಳ್ಳಿ ಪೊಲೀಸ್ ಠಾಣೆ, ನಾಲ್ಕನೆ ತಂಡ ಶಾಸಕ ಶ್ರೀನಿವಾರ ಮೂರ್ತಿ ನಿವಾಸ, 5ನೇ ಗುಂಪು ನವೀನ್ ಮನೆಯಲ್ಲಿ ದಾಂಧಲೆ ನಡೆಸಿವೆ. ಘಟನೆ ಸಂಬಂಧ ಹಲವು ಎಫ್ಐಆರ್ ಗಳು ದಾಖಲಾಗಿವೆ ಎಂದು ತಿಳಿಸಿದ್ದಾರೆ. 

ಗಲಭೆಯಿಂದ ಎದುರಾಗಿದ್ದ ನಷ್ಟವನ್ನು ಲೆಕ್ಕಹಾಕಲಾಗುತ್ತಿದೆ. ಈ ಕಾರ್ಯ ಪೂರ್ಣಗೊಂಡ ಕೂಡಲೇ ಗಲಭೆಕೋರರಿಂದ ಆಸ್ತಿ ಜಪ್ತಿ ಮಾಡುವ ಕಾರ್ಯವನ್ನು ಆರಂಭಿಸಲಾಗುತ್ತದೆ. ಕಾನೂನು ಚೌಕಟ್ಟಿನೊಳಗೆ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದಿದ್ದಾರೆ. 

ಇನ್ನು ಠಾಣೆ ಎದುರು ಪ್ರತಿಭಟನೆ ನಡೆಸಿದ ಪೋಷಕರು ತಮ್ಮ ಮಕ್ಕಳನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿದರು. ಈ ವೇಳೆ ಸ್ಥಳಕ್ಕೆ ಬಂದ ಮಹಿಳಾ ಪೊಲೀಸರು, ನಿಷೇಧಾಜ್ಞೆ ಜಾರಿ ಇರುವ ಹಿನ್ನೆಲೆಯಲ್ಲಿ ಯಾರೂ ರಸ್ತೆಯಲ್ಲಿ ನಿಲ್ಲಬಾರದು. ನಮ್ಮ ಮಕ್ಕಳು, ಸಂಬಂಧಿಕರು ತಪ್ಪು ಮಾಡಿರುವ ಹಿನ್ನೆಲೆಯಲ್ಲಿ ಬಂಧಿಸಿ, ಕರೆತರಲಾಗಿದೆ ಎಂದು ಹೇಳಿದರು. ಇದಕ್ಕೆ ಒಪ್ಪದ ಕೆಲವರು ಘಟನೆ ವೇಳೆ ನಮ್ಮ ಮಕ್ಕಳು ಮನೆಯಲ್ಲಿಯೇ ಇದ್ದರು. ನಮ್ಮವರು ಬೆಂಕಿ ಇಟ್ಟಿದ್ದಾರೆ ಎಂಬುದಕ್ಕೆ ಸಾಕ್ಷ್ಯವೇನಿದೆ? ಎಂದು ಹೇಳಿದಾಗ ಪೊಲೀಸರು ಎಚ್ಚರಿಕೆ ನೀಡಿ ಸ್ಥಳದಿಂದ ಕಳುಹಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT