ಸೈಕಲ್ ನಲ್ಲಿ ಮೃತದೇಹ ಸಾಗಿಸುತ್ತಿರುವ ಕುಟುಂಬಸ್ಥರು 
ರಾಜ್ಯ

ಕೊರೋನಾ: ಮೃತನಿಗೆ ಕೊರೋನಾ ಎಂದು ಶಂಕಿಸಿ ಹತ್ತಿರಕ್ಕೆ ಬಾರದ ಜನ, ಸೈಕಲ್ಲಲ್ಲಿ ಶವ ಸಾಗಿಸಿ ಅಂತ್ಯಕ್ರಿಯೆ!

ಕೊರೋನಾ ಭೀತಿಯಿಂದಾಗಿ ಅಂತ್ಯಸಂಸ್ಕಾರಕ್ಕೆ ವಾಹನ ದೊರೆಯದ ಹಿನ್ನೆಲೆಯಲ್ಲಿ ಶವವನ್ನು ತಳ್ಳುವ ಗಾಡಿಯಲ್ಲಿ ತೆಗೆದುಕೊಂಡು ಹೋಗಿದ್ದಾಯ್ತು, ಇದೀಗ ಮಳೆಯ ನಡುವೆಯೇ ಸೈಕಲ್ ಮೇಲೆ ಶವ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆಯೊಂದು ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದ 2ನೇ ವಾರ್ಡ್ ನಲ್ಲಿ ಭಾನುವಾರ ನಡೆದಿದೆ. 

ಬೆಳಗಾವಿ: ಕೊರೋನಾ ಭೀತಿಯಿಂದಾಗಿ ಅಂತ್ಯಸಂಸ್ಕಾರಕ್ಕೆ ವಾಹನ ದೊರೆಯದ ಹಿನ್ನೆಲೆಯಲ್ಲಿ ಶವವನ್ನು ತಳ್ಳುವ ಗಾಡಿಯಲ್ಲಿ ತೆಗೆದುಕೊಂಡು ಹೋಗಿದ್ದಾಯ್ತು, ಇದೀಗ ಮಳೆಯ ನಡುವೆಯೇ ಸೈಕಲ್ ಮೇಲೆ ಶವ ತೆಗೆದುಕೊಂಡು ಹೋಗಿರುವ ಅಮಾನವೀಯ ಘಟನೆಯೊಂದು ಬೆಳಗಾವಿ ಜಿಲ್ಲೆಯ ಚನ್ನಮ್ಮನ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದ 2ನೇ ವಾರ್ಡ್ ನಲ್ಲಿ ಭಾನುವಾರ ನಡೆದಿದೆ. 

ಅನಾರೋಗ್ಯದಿಂದ ಬಳಲುತ್ತಿದ್ದ ಚನ್ನಮ್ಮನ ಕಿತ್ತೂರು ಪಟ್ಟಣದ ಗಾಂಧಿ ನಗರದ ನಿವಾಸಿಗೆ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆಯನ್ನೂ ಪಡೆದುಕೊಂಡಿದ್ದರು. ನಂತರ ಕೊರೋನಾ ಸೋಂಕಿನ ಗುಣಲಕ್ಷಣಗಳಿದ್ದು, ತಪಾಸಣೆ ಮಾಡುವಂತೆ ವೈದ್ಯರು ವೃದ್ಧನಿಗೆ ಸೂಚಿಸಿದ್ದರು. ಆದರೆ ಆತ ಭಾನುವಾರ ಬೆಳಗಿನ ಜಾವವೇ ಎಂ.ಕೆ.ಹುಬ್ಬಳ್ಳಿಯಲ್ಲಿರುವ ಮನೆಯಲ್ಲಿ ಮೃತಪಟ್ಟಿದ್ದಾರೆ. 

ಇದರಿಂದ ಗಾಬರಿಗೊಂಡ ವೃದ್ಧನ ಪತ್ನಿ ಮತ್ತು ಕುಟುಂಬಸ್ಥರು ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ತೆರಳಿ ಶವ ಸಾಗಿಸಲು ಆ್ಯಂಬುಲೆನ್ಸ್ ನೀಡುವಂತೆ ಕೇಳಿಕೊಂಡಿದ್ದಾರೆ. ಆದರೆ, ಇದಕ್ಕೆ ಆರೋಗ್ಯಾಧಿಕಾರಿಗಳು ಸ್ಪಂದಿಸಿಲ್ಲ ಎಂಬ ಆರೋಪ ಕೇಳಿಬಂದಿದೆ. ಜೊತೆಗೆ ಮೃತರಿಗೆ ಕೋವಿಡ್ ಟೆಸ್ಟ್ ಮಾಡಿಲ್ಲವಾಗಿದ್ದರಿಂದ ಕೊರೋನಾ ತಗುಲಿದೆಯೋ ಅತವಾ ಇಲ್ಲವೋ ಎಂಬುದೂ ಖಚಿತವಾಗಿಲ್ಲ. ಈ ಎಲ್ಲದರ ನಡುವೆ ಕೋವಿಡ್ ನಿಯಮದಂತೆ ಆಸ್ಪತ್ರೆ ಸಿಬ್ಬಂದಿಯೇ ಶವ ಸಂಸ್ಕಾರ ಮಾಡಲು ಮುಂದಾಗದಿರುವುದು ಕೂಡ ಆಕ್ರೋಶಕ್ಕೆ ಕಾರಮವಾಗಿದೆ. 

ಕೊರೋನಾ ಶಂಕಿತನೆಂಬ ಕಾರಣಕ್ಕೆ ಶವ ಸಾಗಿಸಲು ಯಾವ ವಾಹನ ಮಾಲೀಕರು ಒಪ್ಪದ್ದರಿಂದ ಮೃತನ ಪುತ್ರ ಹಾಗೂ ಸ್ನೇಹಿತ ಶವವನ್ನು ಪ್ಲಾಸ್ಟಿಕ್ ಕವರ್ ಗಳಿಂದ ಸುತ್ತಿಕೊಂಡು, ಪಂಚಾಯ್ತಿ ನೀಡಿದ ಪಿಪಿಇ ಕಿಟ್ ಧರಿಸಿ ಸೈಕಲ್ ನಲ್ಲಿಟ್ಟುಕೊಂಡು, ಆತ ಬಳಸುತ್ತಿದ್ದ ಬಟ್ಟೆಗಳೊಂದಿಗೆ ಸ್ಮಶಾನದತ್ತ ಹೊರಟು, ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ. ಘಟನೆ ಬಳಿಕ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

SCROLL FOR NEXT