ರಾಜ್ಯ

ಲಾಕ್‌ ಡೌನ್‌ ಆರ್ಥಿಕ ಸಂಕಷ್ಟ; 'ಮಿಸ್ಟರ್ ಕೊಪ್ಪ' ಕೀರ್ತಿಗೆ ಪಾತ್ರರಾಗಿದ್ದ ಜಿಮ್ ತರಬೇತುದಾರ ಆತ್ಮಹತ್ಯೆ

ಕೊರೊನಾ ಲಾಕ್‌ಡೌನ್‌ನಿಂದ ಜಿಮ್ ಚಟುವಟಿಕೆ ಸ್ಥಗಿತಗೊಳಿಸಿದ್ದರಿಂದ ಆರ್ಥಿಕ ಸಂಕಷ್ಟಕ್ಕೆ ತುತ್ತಾದ ಜಿಮ್ ತರಬೇತುದಾರರೊಬ್ಬರು ಜಿಮ್‍ನಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ನಡೆದಿದೆ. 

ಚಿಕ್ಕಮಗಳೂರು:  ಕೊರೊನಾ ಲಾಕ್‌ಡೌನ್‌ನಿಂದ ಜಿಮ್ ಚಟುವಟಿಕೆ ಸ್ಥಗಿತಗೊಳಿಸಿದ್ದರಿಂದ ಆರ್ಥಿಕ ಸಂಕಷ್ಟಕ್ಕೆ ತುತ್ತಾದ ಜಿಮ್ ತರಬೇತುದಾರರೊಬ್ಬರು ಜಿಮ್‍ನಲ್ಲೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರದಲ್ಲಿ ನಡೆದಿದೆ.

ಜಯಪುರ ಸಮೀಪದ ದೂಬ್ಳ ಗ್ರಾಮದ ಸುನಿಲ್ (26)ಆತ್ಮಹತ್ಯೆಗೆ ಶರಣಾದವರು. ಸುನಿಲ್ ಜಯಪುರದಲ್ಲಿ ಜಿಮ್ ಸೆಂಟರ್ ನಡೆಸುತ್ತಾ, 30ರಿಂದ 40 ಮಂದಿ ಯುವಕರಿಗೆ ಜಿಮ್ ಬಗ್ಗೆ ತರಬೇತಿ ಕೊಡುತ್ತಿದ್ದರು.

ಕಳೆದ ನಾಲ್ಕೈದು ತಿಂಗಳಿಂದ ಕೊರೊನಾ ಲಾಕ್‌ಡೌನ್‌ನಿಂದಾಗಿ ಜಿಮ್ ನಡೆಸಲು ಅವಕಾಶ ಇಲ್ಲದಿದ್ದುದರಿಂದ ಸುನೀಲ್ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದರು.

ಜಿಮ್ ನಡೆಸಲಾಗದೆ ಹೋದ ಸುನೀಲ್ ಕಳೆದ ಮೂರು ತಿಂಗಳಿನಿಂದ ಆಟೋ ಚಾಲಕನಾಗಿ ಕೆಲಸ ಮಾಡಿತ್ತಿದ್ದರು. ಆದರೆ ಆರ್ಥಿಕ ಸಂಕಷ್ಟ ಬಗೆಹರಿಯದೆ ಮಾನಸಿಕ ಒತ್ತಡಕ್ಕೆ ಒಳಗಾದ ಸುನೀಲ್ ಭಾನುವಾರ ಜಿಮ್ ನಲ್ಲೇ ಆತ್ಮಹತ್ಯೆಗೆ ಶರಣಗಿದ್ದಾರೆ.

ಮೃತರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ದೇಹದಾಢ್ಯ ಸ್ಪರ್ಧೆಗಳಲ್ಲಿ ಭಾಗವಹಿದ್ದು ಅಲ್ಲದೆ ಕಳೆದ ವರ್ಷ ಮಿಸ್ಟರ್ ಕೊಪ್ಪ ದೇಹದಾಢ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನಗಳಿಸಿದ್ದರು,  

ಘಟನಾ ಸ್ಥಳಕ್ಕೆ ಜಯಪುರ ಪೋಲೀಸರು ಭೇಟಿ ಕೊಟ್ಟು ಪರಿಶೀಲನೆ ಕೈಗೊಂಡಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

ಜಮ್ಮುವಿನಲ್ಲಿ 24 ಗಂಟೆಗಳಲ್ಲಿ ದಾಖಲೆಯ 380 ಮಿಮೀ ಮಳೆ!

ಅಮೆರಿಕದಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲೆ ಭಾರತ ಹೆಚ್ಚಿನ ಸುಂಕ ವಿಧಿಸಬೇಕು: ಕೇಜ್ರಿವಾಲ್

SCROLL FOR NEXT