ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು 
ರಾಜ್ಯ

ಕೊರೋನಾ ವಿಪತ್ತು: ರೂ.200 ಕೋಟಿ ಪ್ಯಾಕೇಜ್ ನೀಡುವಂತೆ ಕೇಂದ್ರಕ್ಕೆ ಪೇಜಾವರ ಶ್ರೀ ಪತ್ರ

ಕೊರೋನಾ ವಿಪತ್ತಿನಿಂದ ದೇಶದ ನೂರಾರು ಗೋಶಾಲೆಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ತುರ್ತಾಗಿ ಕನಿಷ್ಟ ರೂ.200 ಕೋಟಿ ನಿರ್ವಹಣಾ ನಿಧಿಯನ್ನು ನೀಡುವಂತೆ ಒತ್ತಾಯಿಸಿ ಉಡುಪಿ ಗೋವರ್ಧನ ಗಿರಿ ಟ್ರಸ್ಟ್ ಅಧ್ಯಕ್ಷರಾಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಉಡುಪಿ: ಕೊರೋನಾ ವಿಪತ್ತಿನಿಂದ ದೇಶದ ನೂರಾರು ಗೋಶಾಲೆಗಳು ತೀವ್ರ ಸಂಕಷ್ಟ ಎದುರಿಸುತ್ತಿದ್ದು, ತುರ್ತಾಗಿ ಕನಿಷ್ಟ ರೂ.200 ಕೋಟಿ ನಿರ್ವಹಣಾ ನಿಧಿಯನ್ನು ನೀಡುವಂತೆ ಒತ್ತಾಯಿಸಿ ಉಡುಪಿ ಗೋವರ್ಧನ ಗಿರಿ ಟ್ರಸ್ಟ್ ಅಧ್ಯಕ್ಷರಾಗಿರುವ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಗಳು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
 
ಕಳೆದ 6-7 ತಿಂಗಳುಗಳಿಂದ ಕೊರೋನಾದಿಂದಾಗಿ ವಿವಿಧ ಕ್ಷೇತ್ರಗಳು ಗಂಭೀರ ಆರ್ಥಿಕ ಬಿಕ್ಕಟ್ಟನ್ನು ಎದುರಿಸುತ್ತಿರುವಂತೆಯೇ ದೇಶದ ಗೋಶಾಲೆಗಳು ತೊಂದರೆಗೊಳಗಾಗಿವೆ. ಗೋಶಾಲೆಗಳ ನಿರ್ವಹಣೆ ಅತ್ಯಂತ ವೆಚ್ಚದಾಯಕವಾಗಿದೆ. ಉಡುಪಿಯಲ್ಲಿ ನೀಲಾವರ ಕೊಡವೂರು ಹೆಬ್ರಿಯಲ್ಲಿ ನಾವು ನಡೆಸುತ್ತಿರುವ ಗೋಶಾಲೆಗಳಿಗೆ ಮಾಸಿಕ ಅಂದಾಜು ರೂ.35 ಲಕ್ಷ ನಿರ್ವಹಣಾ ವೆಚ್ಚವಾಗುತ್ತಿದೆ. ಅದೇ ರೀತಿಯಲ್ಲಿ ದೊಡ್ಡ ಅಥವಾ ಸಣ್ಣ ಮಟ್ಟದ ಗೋಶಾಲೆಗಳನ್ನು ಅನೇಕ ಮಠ ದೇವಳ ಹಾಗೂ ಮಹನೀಯರು ಯಾವದೇ ಪ್ರತಿಫಲಾಪೇಕ್ಷೆಯಿಲ್ಲದೆ ಕರ್ತವ್ಯದ ದೃಷ್ಟಿಯಿಂದ ನಡೆಸುತ್ತಾ ಲಕ್ಷಾಂತ ಗೋವುಗಳನ್ನು ಪೋಷಣೆ ಮಾಡುತ್ತಿದ್ದಾರೆ. 

ಧರ್ಮಾಭಿಮಾನಿಗಳ ಸಹಕಾರದಿಂದ ಇದು ಸಾಧ್ಯವಾಗುತ್ತಿತ್ತು. ಆದರೆ, ಪ್ರಸ್ತುತ ಭಕ್ತರ ದೇಣಿಗೆಯೂ ಅಷ್ಟಾಗಿ ಬರುತ್ತಿಲ್ಲ. ಮೇಲಾಗಿ ಎರಡು ತಿಂಗಳಿನಿಂದ ದೇಶದ ಕೆಲವೆಡೆಗಳಲ್ಲಿ ವಿಪರೀತ ಮಳೆಯೂ ಸುರಿಯುತ್ತಿರುವುದರಿಂದ ಮೇವಿನ ಸಂಗ್ರಹಣೆಯೂ ದುಸ್ತರವಾಗುತ್ತಿದೆ. ಆದ್ದರಿಂದ ಕೊರೋನಾ ವಿಪತ್ತನ್ನು ಎದುರಿಸಲು ಬೇರೆ ಬೇರೆ ಕ್ಷೇತ್ರಗಳಿಗೆ ಸರ್ಕಾರವು ಆರ್ಥಿಕ ಪ್ಯಾಕೇಜ್ ಘೋಷಿಸಿದಂತೆ ಗೋಶಾಲೆಗಳಿಗೂ ಕನಿಷ್ಟ ರೂ.200 ಕೋಟಿಯಾದರೂ ತುರ್ತಾಗಿ ನೀಡಿ ಗೋರಕ್ಷಣೆಯ ಕೈಂಕರ್ಯದಲ್ಲಿ ಕೈಜೋಡಿಸಬೇಕು. ಕೇವಲ ಧರ್ಮ ಮಾತ್ರವಲ್ಲದೇ ಆರ್ಥಿಕತೆಯ ಹಿತದೃಷ್ಟಿಯಿಂದಲೂ ಗೋರಕ್ಷಣೆಯನ್ನು ಆದ್ಯತೆಯಾಗಿ ಪರಿಗಣಿಸಬೇಕೆಂದು ಶ್ರೀಗಳು ಒತ್ತಾಯಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT