ಸಾಂದರ್ಭಿಕ ಚಿತ್ರ 
ರಾಜ್ಯ

ಕಬ್ಬು ಅರೆವ ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮಲ್ಲಾಪುರ ಗ್ರಾಮದಲ್ಲಿರುವ ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಕಾರ್ಮಿಕನೊಬ್ಬ ಸಿಲುಕಿ ಮೃತಪಟ್ಟಿದ್ದಾನೆ.

ಮೈಸೂರು: ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಮಲ್ಲಾಪುರ ಗ್ರಾಮದಲ್ಲಿರುವ ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಕಾರ್ಮಿಕನೊಬ್ಬ ಸಿಲುಕಿ ಮೃತಪಟ್ಟಿದ್ದಾನೆ.

ವೆಲ್ಡ್ ಮಾಡಲು ಯತ್ನಿಸುತ್ತಿದ್ದಾಗ ಕಬ್ಬಿನ ಪುಡಿಮಾಡುವ ಯಂತ್ರಕ್ಕೆ ಬಿದ್ದು ಪ್ರಾಣ ಕಳೆದುಕೊಂಡಿರುವ ಕಾರ್ಮಿಕನನ್ನು ಬೆಳಗಾವಿ ಜಿಲ್ಲೆಯ ನಿಪ್ಪಾಣಿಯ ಅಮೃತ್ ಕುಮಾರ್‌ (33) ಎಂದು ಗುರುತಿಸಲಾಗಿದೆ. ಬೆಳಗಾವಿ ಮೂಲದ ಈತ, ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎನ್ನಲಾಗಿದೆ.

ಕಬ್ಬು ನುರಿಸುವ ಯಂತ್ರದ ಚಾವಣಿಗೆ ಅವರು ವೆಲ್ಡಿಂಗ್ ಮಾಡುತ್ತಿದ್ದರು. ಡಿವೈಎಸ್‌ಪಿ ಪ್ರಭಾಕರರಾವ್ ಶಿಂಧೆ, ಸಿಪಿಐ ಲಕ್ಷ್ಮೀಕಾಂತ್ ಕೆ.ತಳವಾರ್, ಬಿಳಿಗೆರೆ ಠಾಣೆಯ ಎಸ್‍.ಐ ಆಕಾಶ್ ಕಾರ್ಖಾನೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ರಾತ್ರಿ 8 ಗಂಟೆಯಾದರೂ ದೂರು ದಾಖಲಾಗಿಲ್ಲ ಎಂಬುದು ಗೊತ್ತಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT