ಸಾಂದರ್ಭಿಕ ಚಿತ್ರ 
ರಾಜ್ಯ

ಕುಡಿದ ಮತ್ತಿನಲ್ಲಿ ಪತ್ನಿ ಕೊಲೆ: ಚಾರ್ಜರ್ ವಿಷಯವಾಗಿ ಸ್ನೇಹಿತನ ಹತ್ಯೆ; ನಗರದಲ್ಲಿ ನಾಲ್ಕು ಮರ್ಡರ್

ನಗರದ ಯಲಹಂಕ ನ್ಯೂ ಟೌನ್ ನಲ್ಲಿ ಗಂಡ ಪತ್ನಿಗೆ ಇರಿದು ಕೊಂದಿದ್ದಾನೆ, ನಂದಿನಿ ಕೊಲೆಯಾದ ದುರ್ದೈವಿ, ಆಕೆಯ ಪತಿ ಜಾನ್ಸನ್ ದಿನಗೂಲಿ ನೌಕರನಾಗಿದ್ದು,  ಭಾನುವಾರ ರಾತ್ರಿ ಕುಡಿದು ಬಂದಿದ್ದಾನೆ. ನಂತರ ದಂಪತಿ ನಡುವೆ ಜಗಳವಾಗಿದೆ.

ಬೆಂಗಳೂರು: ವಿಭಿನ್ನ ಪ್ರಕರಣಗಳಲ್ಲಿ ಸೋಮವಾರ ನಾಲ್ಕು ಮಂದಿ ಕೊಲೆಗಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. 

ನಗರದ ಯಲಹಂಕ ನ್ಯೂ ಟೌನ್ ನಲ್ಲಿ ಗಂಡ ಪತ್ನಿಗೆ ಇರಿದು ಕೊಂದಿದ್ದಾನೆ, ನಂದಿನಿ ಕೊಲೆಯಾದ ದುರ್ದೈವಿ, ಆಕೆಯ ಪತಿ ಜಾನ್ಸನ್ ದಿನಗೂಲಿ ನೌಕರನಾಗಿದ್ದು,  ಭಾನುವಾರ ರಾತ್ರಿ ಕುಡಿದು ಬಂದಿದ್ದಾನೆ. ನಂತರ ದಂಪತಿ ನಡುವೆ ಜಗಳವಾಗಿದೆ, ಜಗಳ ಅತಿರೇಕಕ್ಕೋಗಿ ಕತ್ತರಿಯಿಂದ ಆಕೆಯ ಕುತ್ತಿಗೆಗಗೆ ಚುಚ್ಚಿದ್ದಾನೆ. ಸ್ಥಳದಲ್ಲೇ ಆಕೆ ಸಾವನ್ನಪ್ಪಿದ್ದಾಳೆ. ಆಕೆಯ ಕೂಗು ಕೇಳಿಸಿಕೊಂಡ ನೆರೆ ಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ, ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ  ಚನ್ನಸಂದ್ರದ ಮನೆಯಲ್ಲಿ ಜಯಮ್ಮ ಎಂಬುವರು ಕೊಲೆಯಾಗಿದ್ದಾರೆ. ಜಯಮ್ಮ ಪತಿ ಅಪ್ಪಯ್ಯ, ಕರೆಂಟ್ ಬಿಲ್ ಪಾವತಿಸಲು ಹೋಗಿದ್ದರು, ಬಿಲ್ ಪಾವತಿಸಿ ಮನೆಗೆ ವಾಪಸ್ ಬರುವ ವೇಳೆ ಪತ್ನಿ ಶವ ಬೆಡ್ ಮೇಲಿತ್ತು, ಜೊತೆಗೆ ಮನೆಯಲ್ಲಿದ್ದ ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದವು. 

ಭಿಕ್ಷಾಟನೆ ವಿಚಾರವಾಗಿ ಬೆಂಗಳೂರು ಹೊರವಲಯ ಎಲೆಕ್ಟ್ರಾನಿಕ್ ಸಿಟಿ ಸಮೀಪದ ನೈಸ್ ರಸ್ತೆಯಲ್ಲಿ ಕಳೆದ ಶುಕ್ರವಾರ ಕೊಲೆಯಾಗಿತ್ತು. ರಾಮನಗರ ಮೂಲದ ರಾಜೇಂದ್ರ ಪ್ರಕರಣದ ಆರೋಪಿಗಳನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ನಿತ್ಯಾ ಮತ್ತು ದೇವಿ ಭಾವನಾ ಎಂಬುವರನ್ನು ಬಂಧಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ದಿನಗೂಲಿ ನೌಕರನೊಬ್ಬ ತನ್ನ ಸ್ನೇಹಿತನಿಂದಲೇ ಕೊಲೆಯಾಗಿದ್ದಾನೆ. ತಲಘಟ್ಟಪುರದ ಮಣಿ ಎಂಬಾತ ತನ್ನ ಫೋನ್ ಚಾರ್ಜ್ ಗೆ ಹಾಕಿದ್ದ, ಆದರೆ ಹುಸೇನ್ ಎಂಬಾತ ಮಣಿ ಫೋನ್ ಚಾರ್ಜರ್ ತೆಗೆದು ತನ್ನ ಮೊಬೈಲ್ ಗೆ ಹಾಕಿಕೊಂಡಿದ್ದ, ಈ ಸಂಬಂಧ ಇಬ್ಬರ ನಡುವೆ ಜಗಳ ಉಂಟಾಗಿದೆ. ನಂತರ ಹುಸೇನ್ ಮರದ ತುಂಡಿನಿಂದ ಮಣಿ ತಲೆಗೆ ಹೊಡೆದಿದ್ದಾನೆ, ಆದಾದ ನಂತರ ಆತನ ತಲೆಯನ್ನು ಕಲ್ಲಿನಿಂದ ಜಜ್ಜಿದ್ದಾನೆ. ಪೊಲೀಸರು ಆತನನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT