ಶ್ರೀನಿವಾಸ್ ಪ್ರಸಾದ್ 
ರಾಜ್ಯ

ಚಾಮರಾಜನಗರ: ಸಂಸದ ವಿ. ಶ್ರೀನಿವಾಸ್ ಪ್ರಸಾದ್‌ಗೆ ಕೋವಿಡ್-19 ಸೋಂಕು

ಸಂಸದ ವಿ. ಶ್ರೀನಿವಾಸ್ ಪ್ರಸಾದ್‌ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಚಾಮರಾಜನಗರ: ಸಂಸದ ವಿ. ಶ್ರೀನಿವಾಸ್ ಪ್ರಸಾದ್‌ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಮಂಗಳವಾರ ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಈ ಕುರಿತು ಸ್ವತಃ ಶ್ರೀನಿವಾಸ್ ಪ್ರಸಾದ್ ಅವರು ಪ್ರಕಟಣೆ ಬಿಡುಗಡೆ ಮಾಡಿದ್ದು, ‘ನನ್ನ ಕೊರೊನಾ ಪರೀಕ್ಷೆ ವರದಿ ಪಾಸಿಟಿವ್ ಬಂದಿದೆ. ವೈದ್ಯರ ಸಲಹೆಗಳನ್ನು ಪಾಲಿಸುತ್ತಿದ್ದೇನೆ. ಆತಂಕಕ್ಕೆ ಕಾರಣವಿಲ್ಲ. ಕಳೆದ ಒಂದು ವಾರದ ಅವಧಿಯಲ್ಲಿ ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕಾಗಿ ಮತ್ತು ಹೋಮ್ ಕ್ವಾರಂಟೈನ್‌ಗೆ ಒಳಪಡಬೇಕಾಗಿ ವಿನಂತಿಸುತ್ತೇನೆ’ ಎಂದು ಹೇಳಿದ್ದಾರೆ.

ಜ್ವರ ಹಾಗೂ ಮೈಕೈ ನೋವಿನಿಂದ ಬಳಲುತ್ತಿದ್ದ ಅವರು ಮೈಸೂರಿನ ಜಯಲಕ್ಷ್ಮಿಪುರಂ ತನ್ನ ನಿವಾಸದಲ್ಲಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದರು. ಈ ಸಂದರ್ಭ ಅವರ ಪರೀಕ್ಷಾ ವರದಿಯಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ. ಶ್ರೀನಿವಾಸ್ ಪ್ರಸಾದ್ ಅವರಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಮನೆಯ 17ಕ್ಕೂ ಹೆಚ್ಚು ಸದಸ್ಯರ ಸ್ವ್ಯಾಬ್ ಪರೀಕ್ಷೆ ಮಾಡಲಾಗಿದ್ದು, ಪುತ್ರ, ಶಾಸಕ ಹರ್ಷವರ್ಧನ್ ಸೇರಿ ಇತರರ ಪರೀಕ್ಷಾ ವರದಿ ನೆಗಟಿವ್ ಬಂದಿದೆ.

ಸಿಎಂ ಪುತ್ರ ವಿಜಯೇಂದ್ರಗೆ ಆತಂಕ..!
ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸೋಮವಾರ ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದ, ವಿಜಯೇಂದ್ರ ಅವರು, ಶ್ರೀನಿವಾಸ್ ಪ್ರಸಾದ್‌ ಅವರನ್ನು ಭೇಟಿ ಮಾಡಿದ್ದರು. ಬಳಿಕ ವಿಜಯೇಂದ್ರ ಸುತ್ತೂರು ಶ್ರೀಗಳನ್ನ ಭೇಟಿ ಮಾಡಿ ಆಶೀರ್ವಾದ ಪಡೆದುಕೊಂಡಿದ್ದರು. ಅಲ್ಲದೇ ಸೋಮವಾರವಷ್ಟೇ ಬಿವೈ ವಿಜಯೇಂದ್ರ ಜೊತೆ ಹಾಸನ ಶಾಸಕ ಪ್ರೀತಂಗೌಡ, ಎಂಎಲ್ ಸಿ ವಿಶ್ವನಾಥ್, ಮಾಜಿ ಸಚಿವ ವಿಜಯಶಂಕರ್ ಸೇರಿದಂತೆ ಹಲವರು ಸಂಸದರನ್ನು ಭೇಟಿಯಾಗಿದ್ದರು. ಈಗ ಅವರೆಲ್ಲರಿಗೂ ಕೋವಿಡ್ ಭೀತಿ ಎದುರಾಗಿದೆ. ಅಷ್ಟೇ ಅಲ್ಲದೇ ಇದೀಗ ಅವರೆಲ್ಲರೂ ಕ್ವಾರಂಟೈನ್ ಗೆ ಒಳಗಾಗಬೇಕಿದೆ. 73 ವರ್ಷದ ಶ್ರೀನಿವಾಸ್ ಪ್ರಸಾದ್ ಆಗಸ್ಟ್ 6 ರಂದು ಹುಟ್ಟುಹಬ್ಬ ಆಚರಿಸಿಕೊಂಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

US-Iran ಒಪ್ಪಂದ ಬೆನ್ನಲ್ಲೇ Hormuzನಲ್ಲಿ ತೈಲ ಸಾಗಣೆ ಪುನರಾರಂಭ: ಲೆಬನಾನ್'ನಲ್ಲಿ ಮುಂದುವರೆದ ಉದ್ವಿಗ್ನತೆ, ಮಧ್ಯಪ್ರಾಚ್ಯ ಶಾಂತಿಗೆ ಕಂಟಕ..!

ಶತ್ರು ಮುಂದೆ ಶರಣಾಗುವ ಪ್ರಶ್ನೆಯೇ ಇಲ್ಲ, ಹತಾಶೆಯಿಂದ ಒಪ್ಪಂದಕ್ಕೆ ಮುಂದಾಗಿದ್ದಾರೆ: ಇರಾನ್‌ ಪರಮೋಚ್ಛ ನಾಯಕ ಮೊಜ್ತಾಬಾ ಖಮೇನಿ

ಪರಿಷತ್ತಿನಲ್ಲಿ ಬಲ ಹೆಚ್ಚಿಸಿಕೊಂಡ ಕಾಂಗ್ರೆಸ್: ಗೋಹತ್ಯೆ ನಿಷೇಧ ಮಸೂದೆ ಪರಿಶೀಲಿಸುವತ್ತ ಸರ್ಕಾರದ ಚಿತ್ತ?

ಧರ್ಮಸ್ಥಳ ಪ್ರಕರಣ ತನಿಖೆ ಚುರುಕು: ನಾಪತ್ತೆಯಾಗಿರುವ 17 ಮಂದಿ DNA ಹೊಂದಾಣಿಕೆ ಪ್ರಕ್ರಿಯೆ ಆರಂಭ..!

ವಿಧಾನ ಪರಿಷತ್ ಚುನಾವಣೆ: ಯಾವುದೇ ತಂತ್ರ ರೂಪಿಸಿಲ್ಲ, ಅಡ್ಡ ಮತದಾನ ಬಗ್ಗೆ ಮಾಹಿತಿ ಇಲ್ಲ: ಡಿಕೆ ಶಿವಕುಮಾರ್