ಗೋವಿಂದ ಕಾರಜೋಳ 
ರಾಜ್ಯ

ಯುಕೆಪಿ ಸಂತ್ರಸ್ತರಿಗೆ ಹಕ್ಕು ಪತ್ರ ವಿತರಿಸಿದ ಸಚಿವ ಗೋವಿಂದ ಕಾರಜೋಳ

ಯುಕೆಪಿ ಯೋಜನೆಯ ಯುನಿಟ್ 2 ವ್ಯಾಪ್ತಿಯ ಬಾಡಿಗೆದಾರರು ಹಾಗೂ ಇತರೆ ಸಂತ್ರಸ್ತರಿಗೆ ಹಕ್ಕು ಪತ್ರಗಳನ್ನು ಬಾಗಲಕೋಟೆಯಲ್ಲಿಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ವಿತರಿಸಿದರು.

ಬಾಗಲಕೋಟೆ: ಯುಕೆಪಿ ಯೋಜನೆಯ ಯುನಿಟ್ 2 ವ್ಯಾಪ್ತಿಯ ಬಾಡಿಗೆದಾರರು ಹಾಗೂ ಇತರೆ ಸಂತ್ರಸ್ತರಿಗೆ ಹಕ್ಕು ಪತ್ರಗಳನ್ನು ಬಾಗಲಕೋಟೆಯಲ್ಲಿಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ವಿತರಿಸಿದರು.

ನಂತರ ಮಾತನಾಡಿದ ಅವರು, ಮಾಜಿ ಮುಖ್ಯಮಂತ್ರಿಗಳಾದ ದಿ. ರಾಮಕೃಷ್ಣ ಹೆಗ್ಗಡೆ ಬಾಗಲಕೋಟೆ ನವನಗರವನ್ನು ಚಂಡಿಗಡದ  ಮಾದರಿಯಲ್ಲಿ ನಿರ್ಮಿಸುವ ಕನಸನ್ನು ಹೊಂದಿದ್ದರು. ಬಿಡಿಟಿಎ ಅಧ್ಯಕ್ಷರಾಗಿರುವ ಶಾಸಕ ಡಾ. ವೀರಣ್ಣ ಚರಂತಿಮಠ ಅವರು ರಾಮಕೃಷ್ಣ ಹೆಗಡೆ ಅವರ ಕನಸನ್ನು ಸಾಕಾರಗೊಳಿಸಲಿದ್ದಾರೆ ಎಂದರು.

ಚರಂತಿಮಠ ಅವರು ಯುಕೆಪಿ, ಪುನರ್ವಸತಿ, ಪುನರ್ ನಿರ್ಮಾಣ ಕುರಿತ ಸಮಸ್ಯೆಗಳನ್ನು ಸಮಗ್ರವಾಗಿ ಮಾಹಿತಿ ಹೊಂದಿದ್ದು, ಸುಸಲಿತವಾಗಿ ತ್ವರಿತವಾಗಿ ಸಮಸ್ಯೆಗಳನ್ನು ಪರಿಹರಿಸಲಿದ್ದಾರೆ. ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 

ನಿವೇಶನ ಪಡೆದ ಸಂತ್ರಸ್ತರು ನಿವೇಶನಗಳನ್ನು ಮಾರಾಟ ಮಾಡಬಾರದು. ಯೋಜನಾ ಬದ್ಧವಾಗಿ ನೀಡಿದ ಈ ನಿವೇಶನಗಳು ತಮ್ಮ ಮನೆತನಕ್ಕೆ, ಮುಂದಿನ ಜನಾಂಗಕ್ಕೆ ಆಸ್ತಿಯಾಗಿ ರೂಪುಗೊಳ್ಳುತ್ತವೆ. ಈ ನಿವೇಶನಗಳನ್ನು‌ ಮಾರಾಟ ಮಾಡಬಾರದು. ಬಾಗಲಕೋಟೆ ನಗರವು ಮಾದರಿ ನಗರವಾಗಿ ರೂಪಿಸಲು ಎಲ್ಲರೂ ಶ್ರಮಿಸಬೇಕು. ಕೊವಿಡ್ ಹಿನ್ನೆಲೆಯಲ್ಲಿ ಯುಕೆಪಿ ಅನುಷ್ಠಾನಕ್ಕೆ ಹಿನ್ನಡೆಯಾಗಿದೆ, ಕೊವಿಡ್ ವೈರಸ್ ಸಮಸ್ಯೆ ಇಲ್ಲದಿದ್ದರೆ ಯುಕೆಪಿ ಯೋಜನೆ ಯಶಸ್ವಿಯಾಗಿ ಅನುಷ್ಠಾನಗೊಂಡು ಈ ಭಾಗದ ಸ್ವರೂಪವೇ ಬದಲಾಗುತ್ತಿತ್ತು ಎಂದು ಅವರು ತಿಳಿಸಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT