ಆಂಧ್ರ ಪ್ರದೇಶದಲ್ಲಿ ಕೊರೋನಾ ಆರ್ಭಟ 
ರಾಜ್ಯ

ಕೊರೋನಾ ಸೋಂಕು ನಿಯಂತ್ರಣಕ್ಕೆ ಬೂತ್‌ ಮಟ್ಟದಲ್ಲಿ ಸ್ವಯಂ ಸೇವಕರ ನೇಮಕ: ಬಿಬಿಎಂಪಿ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬೂತ್‌ ಮಟ್ಟದಲ್ಲಿ ಸ್ವಯಂ ಸೇವಕರ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಬಿಬಿಎಂಪಿ ಹೇಳಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೋನಾ ಸೋಂಕು ನಿಯಂತ್ರಣಕ್ಕೆ ಬೂತ್‌ ಮಟ್ಟದಲ್ಲಿ ಸ್ವಯಂ ಸೇವಕರ ನೇಮಕ ಮಾಡಿಕೊಳ್ಳಲಾಗುತ್ತದೆ ಎಂದು ಬಿಬಿಎಂಪಿ ಹೇಳಿದೆ.

ಶುಕ್ರವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸ್ವಯಂ ಸೇವಕರ ನೋಂದಣಿಗೆ (ಬಿಎಲ್‌- ಕೇರ್ಸ್‌) ವೆಬ್‌ಸೈಟ್‌ ಲೋಕಾರ್ಪಣೆಗೊಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಅವರು, ನಗರದಲ್ಲಿ ಕೋವಿಡ್‌-19 ಸೋಂಕು ನಿಯಂತ್ರಣ ಕಾರ್ಯಗಳಿಗೆ ಅಧಿಕಾರಿಗಳನ್ನು ನೇಮಕಮಾಡಲಾಗಿದೆ. ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರ ಪಡೆಯಲಾಗಿದೆ. ಇದೀಗ ಸ್ಥಳೀಯವಾಗಿ ಲಭ್ಯವಿರುವ ಅಧಿಕಾರಿಗಳು ಹಾಗೂ ಸ್ವಯಂ ಸೇವಕರನ್ನು ಬಳಸಿ ಸಮೀಕ್ಷೆ ನಡೆಸಲು ತೀರ್ಮಾನಿಸಲಾಗಿದೆ ಎಂದರು.

ಅಂತೆಯೇ ನಗರದಲ್ಲಿ ಬೂತ್‌ ಮಟ್ಟದಲ್ಲಿ ಕೊರೋನಾ ಸೋಂಕು ಪರಿಣಾಮಕಾರಿಯಾಗಿ ನಿಯಂತ್ರಿಸಲು ಸ್ವಯಂ ಸೇವಕರಾಗಿ ಮನೆಗಳಿಗೆ ತೆರಳಿ ಆರೋಗ್ಯ ಸಮೀಕ್ಷೆ ಮಾಡಲು ಇಚ್ಛಿಸುವ ಯುವಕರು ನೋಂದಣಿ ಮಾಡಿಕೊಳ್ಳುವಂತೆ ಕೋರಿದರು. ಬೂತ್‌ ಮಟ್ಟದ ತಂಡದಲ್ಲಿ ಸ್ವಯಂ ಸೇವಕರಾಗಿ ಕಾರ್ಯನಿರ್ವಹಿಸಲು ಬಯಸುವವರು ವೆಬ್‌ಸೈಟ್‌ಗೆ ಭೇಟಿ ಅರ್ಜಿ ಸಲ್ಲಿಸಬಹುದು ಅಥವಾ ನೋಂದಣಿ ಅರ್ಜಿ ಡೌನ್ಲೋಡ್‌ ಮಾಡಿಕೊಂಡು ಭರ್ತಿ ಮಾಡಿ ಸ್ಥಳೀಯ ಪಾಲಿಕೆ ಕಚೇರಿಗೆ ಸಲ್ಲಿಸಿ ಸ್ವಯಂ ಸೇವಕರಾಗಬಹುದು. 

ವಲಯಗಳಲ್ಲಿ ಸಮೀಕ್ಷೆ ಚುರುಕು 
ಬಿಬಿಎಂಪಿಯ ಪೂರ್ವ ವಲಯದಲ್ಲಿ ಇರುವ 1,438 ಬೂತ್‌ಗಳ ಪೈಕಿ 1,156 ಬೂತ್‌ಗಳಲ್ಲಿ ಸಮೀಕ್ಷೆ ನಡೆಯುತ್ತಿದೆ. ಶೇ.80ರಷ್ಟುಸಮೀಕ್ಷೆ ಕಾರ್ಯ ಪೂರ್ಣಗೊಂಡಿದೆ. ಮುಂದಿನ ದಿನಗಳಲ್ಲಿ ಉಳಿದ ವಲಯಗಳಲ್ಲಿ ಕಾರ್ಯ ಚುರುಕುಗೊಳಿಸಲು ನಿರ್ಧರಿಸಲಾಗಿದೆ. ಪ್ರಮುಖ ಅಪಾರ್ಟ್‌ಮೆಂಟ್‌ಗಳಲ್ಲಿ ಅಲ್ಲಿನ ನಿವಾಸಿಗಳೇ ಸ್ವಯಂ ಸೇವಕರಾಗಿ ಸಮೀಕ್ಷೆ ನಡೆಸಿ ಮಾಹಿತಿ ನೀಡುವ ಭರವಸೆ ನೀಡಿದ್ದಾರೆ ಎಂದು ಆಯುಕ್ತ ಮುಂಜುನಾಥ ಪ್ರಸಾದ್‌ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT