ಸಂಗಣ್ಣ ಕರಡಿ 
ರಾಜ್ಯ

ರಾಜ್ಯದ ಇನ್ನೊಬ್ಬ ಸಂಸದರಿಗೂ ಕೊರೋನಾ ಪಾಸಿಟಿವ್

ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಂತರ ಇದೀಗ ರಾಜ್ಯದ ಇನ್ನೊಬ್ಬಸಂಸದರಿಗೂ ಕೋವಿಡ್ ಸೋಂಕು ದೃಢವಾಗಿದೆ.

ಕೊಪ್ಪಳ: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಂತರ ಇದೀಗ ರಾಜ್ಯದ ಇನ್ನೊಬ್ಬಸಂಸದರಿಗೂ ಕೋವಿಡ್ ಸೋಂಕು ದೃಢವಾಗಿದೆ.

ಕೊಪ್ಪಳ ಸಂಸದ ಸಂಗಣ್ಣ ಕರಡಿ ಅವರಿಗೆ ಕೊರೋನಾವೈರಸ್ ಸೋಂಕು ದೃಢವಾಗಿದ್ದು ಅದರ ಸಂಬಂಧ ಸಂಸದ ಸ್ವತಃ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

"ನನ್ನ ಕರೋನ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ವೈದ್ಯರ ಸಲಹೆಯಂತೆ ಮನೆಯಲ್ಲಿ  ಚಿಕಿತ್ಸೆ ಪಡೆಯುತ್ತಿದ್ದೇನೆ.

"ನನ್ನ ಭೇಟಿಯಾದ ಕಾರ್ಯಕರ್ತರು ಹಾಗೂ ಮುಖಂಡರು ಯಾರಿಗಾದರೂ ಕರೋನಾ ಲಕ್ಷಣ ಬಂದರೆ ತಕ್ಷಣವೇ ಪರೀಕ್ಷೆ ಮಾಡಿಸಿಕೊಳ್ಳಿ.

"ಕ್ಷೇತ್ರದ ಜನರ ತುರ್ತು ಕೆಲಸಗಳಿಗೆ ನನ್ನ ಆಪ್ತ ಸಹಾಯಕರನ್ನು ದೂರವಾಣಿ ಮೂಲಕ ಸಂಪರ್ಕಿಸಬಹುದು." ಸಂಸದ ಕರಡಿ  ಟ್ವೀಟ್ ಮೂಲಕ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT