ರಾಜ್ಯ

ಸಂಸದ ಶ್ರೀನಿವಾಸ್ ಪ್ರಸಾದ್ ಗೆ ಕೊರೋನಾ ಹಿನ್ನೆಲೆ, ಬಿಎಸ್ ವೈ ಪುತ್ರ ವಿಜಯೇಂದ್ರ ಹೋಂ ಕ್ವಾರಂಟೈನ್

Raghavendra Adiga

ಬೆಂಗಳೂರು: ಇತ್ತೀಚೆಗೆ ಸಂಸದ ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿಯಾದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿವೈ ವಿಜಯೇಂದ್ರ  ಅವರೀಗ ಸ್ವಯಂ ಹೋಂ ಕ್ವಾರಂಟೈನ್ ಆಗಿದ್ದಾರೆ.

ಸಂಸದ ಪ್ರಸಾದ್ ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸಿದ ವಿಜಯೇಂದ್ರ "ಹಿರಿಯ ನಾಯಕರು, ಸಂಸತ್ ಸದಸ್ಯರಾದ  ವಿ.ಶ್ರೀನಿವಾಸ್ ಪ್ರಸಾದ್ ರವರು ಶೀಘ್ರದಲ್ಲಿ ಕೊರೋನಾ ಸೋಂಕಿನಿಂದ ಗುಣಮುಖರಾಗಲಿ ಎಂದು ಹಾರೈಸುತ್ತೇನೆ.

"ಅವರ ಸಂಪರ್ಕಕ್ಕೆ ಬಂದಿದ್ದರಿಂದ ಎಲ್ಲ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಗೃಹ ಕ್ವಾರಂಟೈನ್ ನಲ್ಲಿದ್ದೇನೆ.ಜೊತೆಗಿದ್ದವರು ಎಲ್ಲ ಮುಂಜಾಗ್ರತೆ ವಹಿಸಬೇಕು ಎಂದು ಈ ಮೂಲಕ ಕೋರುತ್ತೇನೆ." ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಈ ತಿಂಗಳ ಆರಂಭದಲ್ಲಿ ಅವರ ತಂದೆ ಮುಖ್ಯಮಂತ್ರಿ ಯಡಿಯೂರಪ್ಪ ಕೋವಿಡ್ ಪಾಸಿಟಿವ್ ವರದಿ ಪಡೆದಿದ್ದು ಆಗಲೂ ವಿಜಯೇಂದ್ರ ಅವರು ಹೋಂ ಕ್ವಾರಂಟೈನ್ ಆಗಿದ್ದರು,

SCROLL FOR NEXT