ಶಾಸಕ ಎನ್. ಮಹೇಶ್ 
ರಾಜ್ಯ

ಜಾಲತಾಣಗಳಲ್ಲಿ ಚಾರಿತ್ರ್ಯ ವಧೆ ಸಂದೇಶ: ಕ್ರಮಕ್ಕೆ ಶಾಸಕ ಎನ್.ಮಹೇಶ್ ಮನವಿ

ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಗಳ ಚಾರಿತ್ರ್ಯವಧೆಯಾಗುವಂತಹ ಸಂದೇಶ ಗಳನ್ನು ಹರಡುವುದಕ್ಕೆ ನಿಯಂತ್ರಣ ಮಾಡದಿದ್ದರೆ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುತ್ತದೆ.ಹೀಗಾಗಿ ವ್ಯಕ್ತಿತ್ವ ಚಾರಿತ್ರ್ಯವಧೆಯಾಗುವಂತಹ ಸಂದೇಶಗಳನ್ನು ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎನ್.ಮಹೇಶ್ ಮನವಿ ಮಾಡಿದ್ದಾರೆ.

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಗಳ ಚಾರಿತ್ರ್ಯವಧೆಯಾಗುವಂತಹ ಸಂದೇಶ ಗಳನ್ನು ಹರಡುವುದಕ್ಕೆ ನಿಯಂತ್ರಣ ಮಾಡದಿದ್ದರೆ ಸಮಾಜದಲ್ಲಿ ಅಶಾಂತಿ ಸೃಷ್ಟಿಯಾಗುತ್ತದೆ.ಹೀಗಾಗಿ ವ್ಯಕ್ತಿತ್ವ ಚಾರಿತ್ರ್ಯವಧೆಯಾಗುವಂತಹ ಸಂದೇಶಗಳನ್ನು ಹಾಕುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಎನ್.ಮಹೇಶ್ ಮನವಿ ಮಾಡಿದ್ದಾರೆ.

ನಗರದಲ್ಲಿಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಸಾಮಾಜಿಕ ಜಾಲತಾಣದಲ್ಲಿ ತಮ್ಮ ವಿರುದ್ಧ ಸಂದೇಶಗಳನ್ನು ಹರಿಬಿಡುತ್ತಿರುವ ಕುರಿತು ಮಾಹಿತಿ ನೀಡಿದರು.ತಮ್ಮ ಚಾರಿತ್ರ್ಯವಧೆ ಮಾಡ ಲಾಗುತ್ತಿದ್ದು, ಆ ರೀತಿ ಪೋಸ್ಟ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿದರು.

ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣದಲ್ಲಿ ಕೆಲವರು ವ್ಯಕ್ತಿಗಳ ಚಾರಿತ್ರ್ಯವಧೆ ಮಾಡುತ್ತಿದ್ದು, ಸಮುದಾಯ, ವ್ಯಕ್ತಿಯ ಬಗ್ಗೆ ಮಾತನಾಡುತ್ತಿದ್ದಾರೆ.ಇದನ್ನು ನಿಯಂತ್ರಣ ಮಾಡಲು ಶಕ್ತಿಯುತವಾಗಿ ಕೆಲಸ ಮಾಡಬೇಕು.ಸೈಬರ್ ಕ್ರೈಂ ಅನ್ನು ಮತ್ತಷ್ಟು ಶಕ್ತಿಯುತವಾಗಿ ಮಾಡಬೇಕು. ಪ್ರತಿ ಜಿಲ್ಲೆಯಲ್ಲೂ ಈ ಬಗ್ಗೆ ನಿಗಾವಹಿಸಬೇಕು.ಚಾರಿತ್ರ್ಯವಧೆ ಮಾಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾಗಿ ಹೇಳಿದರು.     
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT