ರೇಷನ್ ಗಾಗಿ ಪರದಾಡುತ್ತಿರುವ ಕಮಲಾ ಕುಟುಂಬ 
ರಾಜ್ಯ

ವ್ಯಾಪಾರ, ವಹಿವಾಟು ಆಗುತ್ತಿಲ್ಲ, ದಿನದ ಊಟ-ತಿಂಡಿಗೆ ಪರದಾಟ:ವಲಸೆ ಕಾರ್ಮಿಕರ ಪಾಡು ಕೇಳುವವರಿಲ್ಲ!

ಉತ್ತರ ಪ್ರದೇಶದಲ್ಲಿರುವ ಕುಶಾಂಬಿಗೆ ಲಾಕ್ ಡೌನ್ ಸಮಯದಲ್ಲಿ ಹೋಗದಿರುವುದಕ್ಕೆ ಕಮಲಾಗೆ ವಿಷಾದವಿದೆ. ಕೋವಿಡ್-19 ಸಾಂಕ್ರಾಮಿಕದ ಆರಂಭದ ದಿನಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿರುವಾಗ ಊರಿಗೆ ಹೋಗದೆ ಉಳಿದುಕೊಂಡ ಕಮಲಾರಂಥ ಅನೇಕ ವಲಸೆ ಕಾರ್ಮಿಕರಿದ್ದಾರೆ. ಇಂದು ಪ್ರತಿದಿನದ ಊಟ-ಒಪ್ಪತ್ತಿಗೆ ಪರದಾಡುತ್ತಿದ್ದಾರೆ.

ಮೈಸೂರು: ಉತ್ತರ ಪ್ರದೇಶದಲ್ಲಿರುವ ಕುಶಾಂಬಿಗೆ ಲಾಕ್ ಡೌನ್ ಸಮಯದಲ್ಲಿ ಹೋಗದಿರುವುದಕ್ಕೆ ಕಮಲಾಗೆ ವಿಷಾದವಿದೆ. ಕೋವಿಡ್-19 ಸಾಂಕ್ರಾಮಿಕದ ಆರಂಭದ ದಿನಗಳಲ್ಲಿ ಸೋಂಕು ವ್ಯಾಪಕವಾಗಿ ಹರಡುತ್ತಿರುವಾಗ ಊರಿಗೆ ಹೋಗದೆ ಉಳಿದುಕೊಂಡ ಕಮಲಾರಂಥ ಅನೇಕ ವಲಸೆ ಕಾರ್ಮಿಕರಿದ್ದಾರೆ. ಇಂದು ಪ್ರತಿದಿನದ ಊಟ-ಒಪ್ಪತ್ತಿಗೆ ಪರದಾಡುತ್ತಿದ್ದಾರೆ.

ಲಾಕ್ ಡೌನ್ ಸಡಿಲಿಕೆಯಾಗಿ ವ್ಯಾಪಾರ, ಉದ್ಯಮ, ವಹಿವಾಟುಗಳೆಲ್ಲವೂ ಸಹಜ ಸ್ಥಿತಿಗೆ ನಿಧಾನವಾಗಿ ಮರಳುತ್ತಿರುವಾಗ ಈ ಕೂಲಿ ಕಾರ್ಮಿಕರು ಊಟ-ತಿಂಡಿ, ಸಂಪಾದನೆಗಾಗಿ ಪರದಾಡುತ್ತಿದ್ದಾರೆ. ಒಂದು ರಾಷ್ಟ್ರ ಒಂದು ರೇಷನ್ ಕಾರ್ಡು ಕೂಡ ಈ ಕೂಲಿ ಕಾರ್ಮಿಕರಿಗೆ ಅಷ್ಟೊಂದು ಪ್ರಯೋಜನವಾಗಿಲ್ಲ.

ಕಮಲಾಳ ಪತಿ ಪಾನಿ ಪುರಿ ವ್ಯಾಪಾರಿ. ಅವರ ಸೋದರನ ಕುಟುಂಬ ಸಹ ಮೈಸೂರಿನಲ್ಲಿಯೇ ಇದ್ದಾರೆ. ಪಾನಿಪುರಿ ವ್ಯಾಪಾರ ಸುಧಾರಿಸಬಹುದು ಎಂದು ಭಾವಿಸುತ್ತಿದ್ದವರಿಗೆ ನಿರಾಶೆಯಾಗಿದೆ. ನಾವು ದೊಡ್ಡವರು ಮಾತ್ರವಲ್ಲದೆ ಆರು ಮಕ್ಕಳಿದ್ದಾರೆ. ನಾವು ಊಟ-ತಿಂಡಿಗಾಗಿ ಒದ್ದಾಡುತ್ತಿದ್ದೇವೆ ಎಂದು ಕಮಲಾ ಹೇಳುತ್ತಾರೆ.

ಲಾಕ್ ಡೌನ್ ಸಮಯದಲ್ಲಿ ಕೇಂದ್ರ ಸರ್ಕಾರ ಘೋಷಿಸಿದ್ದ ಒಂದು ರಾಷ್ಟ್ರ, ಒಂದು ರೇಷನ್ ಕಾರ್ಡು ಯೋಜನೆಯಡಿ 24 ರಾಜ್ಯಗಳನ್ನು ಸೇರಿಸಿದ್ದರೂ ಕೂಡ ಹಲವು ಕೂಲಿ ಕಾರ್ಮಿಕರಿಗೆ ಇದರ ಫಲ ಸಿಕ್ಕಿಲ್ಲ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಈ ಯೋಜನೆಯನ್ನು ತರಬಹುದಾಗಿತ್ತು, ಇದರಡಿ ಉಚಿತ ಆಹಾರಧಾನ್ಯವನ್ನು ಡಿಸೆಂಬರ್ ವರೆಗೆ ನೀಡಬೇಕಾಗಿತ್ತು ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ.

ಅಕ್ಕಿ, ಬೇಳೆಕಾಳಿಗಾಗಿ ಒಂದು ಪಡಿತರ ಕೇಂದ್ರಕ್ಕೆ ಹೋಗಿದ್ದೆ. ತಮ್ಮ ದಾಖಲೆ, ವಿವರ ಅಪ್ ಲೋಡ್ ಆಗಿಲ್ಲ ಎನ್ನುತ್ತಾರೆ. ಸ್ಥಳೀಯವಾಗಿ ಕಾರ್ಡು ಮಾಡಿಸಿ ಎನ್ನುತ್ತಿದ್ದಾರೆ. ಆದರೆ ನಮಗೆ ಇಲ್ಲಿಯ ವಿಳಾಸ ದಾಖಲೆ ಇಲ್ಲದೆ ಕಾರ್ಡು ಮಾಡಿಸುವುದು ಹೇಗೆ ನಮಗೆ ಸದ್ಯಕ್ಕೆ ತಕ್ಷಣಕ್ಕೆ ರೇಷನ್ ಬೇಕಾಗಿದೆ ಎನ್ನುತ್ತಾರೆ ಕಮಲಾ ಪತಿ ಹರ್ಷ ಗುಪ್ತಾ.

ಮೈಸೂರಿನ ಶ್ರೀರಾಮ್ ಪುರದಲ್ಲಿರುವ ರಾಜಸ್ತಾನದ ಮರಗೆಲಸ ಮಾಡುವ ಪ್ರಕಾಶ್, ನಮಗೆ ಎಲ್ಲಿ ಬೇಕಾದರೂ ರೇಷನ್ ತೆಗೆದುಕೊಳ್ಳಬಹುದು ಎನ್ನುತ್ತಾರೆ, ಆದರೆ ಸಿಕ್ಕಿಲ್ಲ. ತಾವು ತೆಗೆದುಕೊಂಡ ಸಾಲವನ್ನು ಕೂಡ ಮರಳಿಸಬೇಕಾಗಿದೆ ಎನ್ನುತ್ತಾರೆ.
ಈ ಬಗ್ಗೆ ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗಳನ್ನು ಕೇಳಿದರೆ. ಆಯಾ ರಾಜ್ಯ ಸರ್ಕಾರಗಳು ವಿತರಣೆ ವ್ಯವಸ್ಥೆಗೆ ದಾಖಲೆಗಳನ್ನು ಕಂಪ್ಯೂಟರೀಕರಣ ಮಾಡಬೇಕಿದೆ, ರಾಜಸ್ತಾನ, ಮಧ್ಯ ಪ್ರದೇಶ, ಬಿಹಾರ, ಉತ್ತರಾಖಂಡ, ರಾಜಸ್ತಾನ, ಹರ್ಯಾಣ ಮತ್ತು ಒಡಿಶಾಗಳು ದಾಖಲೆಗಳನ್ನು ಕಂಪ್ಯೂಟರೀಕರಣ ಮಾಡಬೇಕು ಎಂದು ಹೇಳುತ್ತಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಅಂಧ ಕರ್ನಾಟಕದ ಆಟಗಾರ್ತಿಯರಿಗೆ ತಲಾ 10 ಲಕ್ಷ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ, ಹೇಗೆ ನೆರವೇರಿಸಿದ್ರು?ಈ ಅದ್ಭುತ Video ನೋಡಿ..

SCROLL FOR NEXT