ಸಾಂದರ್ಭಿಕ ಚಿತ್ರ 
ರಾಜ್ಯ

ಕಾರವಾರ: ಟ್ವಿಟ್ಟರ್ ವಿರುದ್ಧ ಯಲ್ಲಾಪುರ ಠಾಣೆಯಲ್ಲಿ ಬಿಜೆಪಿ ಮುಖಂಡನಿಂದ ದೂರು ದಾಖಲು

ನಿಷೇಧಿತ ‘ಸಿಖ್ ಫಾರ್ ಜಸ್ಟೀಸ್’ (ಎಸ್.ಎಫ್.ಜೆ) ಸಂಘಟನೆಯಿಂದ ದೇಶವಿರೋಧಿ ಚಟುವಟಿಕೆಗಳ ಟ್ವೀಟ್‌ಗೆ ಅವಕಾಶ ನೀಡಿದ ಆರೋಪದಲ್ಲಿ ಟ್ವಿಟರ್ ಸಂಸ್ಥೆಯ ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

ಕಾರವಾರ: ನಿಷೇಧಿತ ‘ಸಿಖ್ ಫಾರ್ ಜಸ್ಟೀಸ್’ (ಎಸ್.ಎಫ್.ಜೆ) ಸಂಘಟನೆಯಿಂದ ದೇಶವಿರೋಧಿ ಚಟುವಟಿಕೆಗಳ ಟ್ವೀಟ್‌ಗೆ ಅವಕಾಶ ನೀಡಿದ ಆರೋಪದಲ್ಲಿ ಟ್ವಿಟರ್ ಸಂಸ್ಥೆಯ ವಿರುದ್ಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

ಬಿಜೆಪಿ ತಾಲ್ಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಪ್ರಸಾದ ಹೆಗಡೆ ದೂರು ದಾಖಲಿಸಿದ್ದು, ಪಂಜಾಬ್ ಅನ್ನು ಖಲಿಸ್ತಾನ ಎಂಬ ಹೆಸರಿನಲ್ಲಿ ಭಾರತದಿಂದ ಬೇರ್ಪಡಿಸುವ ಸಂಚನ್ನು ರೂಪಿಸಿದ್ದ ಎಸ್.ಎಫ್.ಜೆ.ಯನ್ನು 2019ರಲ್ಲಿ ಕೇಂದ್ರ ಸರ್ಕಾರ ನಿಷೇಧಿಸಿತ್ತು.  ಕೇಂದ್ರ ಸರ್ಕಾರ ನಿಷೇಧಿಸಿದ್ದರೂ ಸಂಘಟನೆಯ ಟ್ವಿಟರ್ ಖಾತೆ ಸಕ್ರಿಯವಾಗಿದೆ. ಅದರಲ್ಲಿ ಭಾರತ ವಿರೋಧಿ ಸಂಗತಿಗಳನ್ನು, ಭಯೋತ್ಪಾದಕ ಚಟುವಟಿಕೆಗಳನ್ನು ಪ್ರಚೋದಿಸುವಂತಹ ಟ್ವೀಟ್‌ಗಳನ್ನು ಮಾಡಲಾಗುತ್ತಿದೆ ಎಂದು  ಅವರು ದೂರಿದ್ದಾರೆ.

ದೇಶ ವಿರೋಧಿ ಕೆಲಸಗಳಿಗೆ ಪ್ರಚೋದನೆ ನೀಡುವ ಬರಹಗಳನ್ನು ಹಾಕಿದರೂ ಟ್ವಿಟರ್ ಅವುಗಳ ಕುರಿತು ನಿಗಾ ವಹಿಸಿಲ್ಲ. ದೇಶ ವಿರೋಧಿ ಹೇಳಿಕೆಗಳ ಟ್ವೀಟ್‌ಗಳನ್ನು ಪ್ರಕಟಿಸಲು ಸಂಸ್ಥೆ ಉತ್ಸುಕವಾಗಿದೆ. ಹಾಗಾಗಿ ಸಂಸ್ಥೆಯ ಹಾಗೂ ಆಡಳಿತಾಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT