ಸಂಗ್ರಹ ಚಿತ್ರ 
ರಾಜ್ಯ

ಪರೀಕ್ಷೆಗೆ ನಿರಾಕರಿಸುವ ಖಾಸಗಿ ಪ್ರಯೋಗಾಲಯಗಳ ವಿರುದ್ಧ ಕಠಿಣ ಕ್ರಮ: ಕೆ. ಸುಧಾಕರ್

ಚಿಕಿತ್ಸೆ ನೀಡಲು ನಿರಾಕರಿಸುವ ಆಸ್ಪತ್ರೆಗಳ ವಿರುದ್ದ ಕೈಗೊಳ್ಳಲಾದ ಕಠಿಣ ಕ್ರಮದಂತಯೇ ಪರೀಕ್ಷೆ ನಡೆಸಲು ನಿರಾಕರಿಸುವ ಖಾಸಗಿ ಪ್ರಯೋಗಾಲಯದ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ  ಸಚಿವ ಡಾ.ಕೆ.ಸುಧಾಕರ್ ಅವರು ಬುಧವಾರ ತಿಳಿಸಿದ್ದಾರೆ. 

ಬೆಂಗಳೂರು: ಚಿಕಿತ್ಸೆ ನೀಡಲು ನಿರಾಕರಿಸುವ ಆಸ್ಪತ್ರೆಗಳ ವಿರುದ್ದ ಕೈಗೊಳ್ಳಲಾದ ಕಠಿಣ ಕ್ರಮದಂತಯೇ ಪರೀಕ್ಷೆ ನಡೆಸಲು ನಿರಾಕರಿಸುವ ಖಾಸಗಿ ಪ್ರಯೋಗಾಲಯದ ವಿರುದ್ಧವೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ವೈದ್ಯಕೀಯ ಶಿಕ್ಷಣ  ಸಚಿವ ಡಾ.ಕೆ.ಸುಧಾಕರ್ ಅವರು ಬುಧವಾರ ತಿಳಿಸಿದ್ದಾರೆ. 

ಸರ್ಕಾರಿ ಮತ್ತು ಖಾಸಗಿ ಪ್ರಯೋಗಾಲಯಗಳ ಮುಖ್ಯಸ್ಥರೊಂದಿಗೆ ವಿಡಿಯೋ ಸಭೆ ನಡೆಸಿದ ಸಚಿವರು ಈ ಸೂಚನೆ ನೀಡಿದ್ದಾರೆ. 

ಪರೀಕ್ಷೆ ನಡೆಸಲು ಕೆಲ ಖಾಸಗಿ ಪ್ರಯೋಗಾಲಯಗಳು ನಿಕಾರಿಸುತ್ತಿವೆ ಎಂಬ ಆರೋಪಗಳು ಕೇಳಿ ಬಂದಿವೆ. ಇಂತಹ ಪ್ರಯೋಗಾಲಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಪ್ರತೀ ನಿತ್ಯ 1 ಲಕ್ಷ ಪರೀಕ್ಷೆ ನಡೆಸುವ ಗುರಿಯನ್ನು ಸರ್ಕಾರ ಹೊಂದಿದ್ದು, ಕೊರೋನಾ ಸೋಂಕಿತರನ್ನು ಬೇಗನೆ ಪತ್ತೆ ಮಾಡುವ ದೃಷ್ಟಿಯಿಂದ ಎಲ್ಲ ಕೋವಿಡ್ ಪ್ರಯೋಗಾಲಯಗಳೂ ನಿಗದಿಪಡಿಸಿದ ಗುರಿಯಷ್ಟು ಪರೀಕ್ಷೆ ನಡೆಸಬೇಕು ಈಗಾಗಲೇ ಸರ್ಕಾರ ಸೂಚನೆ ನೀಡಿದೆ ಎಂದು ಬಿಬಿಎಂಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಬಾಕಿ ಉಳಿದಿರುವ ಸ್ಯಾಂಪಲ್ಸ್ ಪರೀಕ್ಷೆಗಳು ಹೆಚ್ಚಾಗಿರುವುದರಿಂದ ಹಲವು ಖಾಸಗಿ ಪ್ರಯೋಗಾಲಯಗಳು ಹೊಸದಾಗಿ ಪರೀಕ್ಷೆ ಬರುವ ಸ್ಯಾಂಪಲ್ ಪರೀಕ್ಷೆ ಮಾಡಲು ನಿರಾಕರಿಸುತ್ತಿದ್ದಾರೆ. ಇದಕ್ಕೆ ಪ್ರಮುಖ ಕಾರಣ ಸಿಬ್ಬಂದಿಗಳ ಕೊರತೆ ಎಂದು ಹೇಳಲಾಗುತ್ತಿದೆ. ಸ್ವಯಂಚಾಲಿತ ಯಂತ್ರಗಳ ಮೂಲಕ ಪರೀಕ್ಷೆ ನಡೆಸುವಂತೆ ಸರ್ಕಾರ ಕಠಿಣ ಆದೇಶ ನೀಡಿದ್ದರು. ಸಾಕಷ್ಟು ಪ್ರಯೋಗಾಲಯಗಳು ಈಗಲೂ ಆರ್'ಟಿಪಿಸಿಆರ್ ಮೂಲಕವೇ ಪರೀಕ್ಷೆ ನಡೆಸುತ್ತಿದೆ. ಇದರ ಪರಿಣಾಮ ಪರೀಕ್ಷೆ ನಡೆಸಲು ಸಮಯ ಸಾಕಷ್ಟು ತೆಗೆದುಕೊಳ್ಳುತ್ತಿದೆ. ಹೀಗಾಗಿ ಇಂತಹ ಪ್ರಯೋಗಾಲಯಗಳ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ ಎನ್ನಲಾಗುತ್ತಿದೆ. 

ನಗರದಲ್ಲಿ 8 ಸರ್ಕಾರಿ ಪ್ರಯೋಗಾಲಯಗಳು, 21 ಖಾಸಗಿ ಪ್ರಯೋಗಾಲಯಗಳು ಪರೀಕ್ಷೆಗಳನ್ನು ನಡೆಸುತ್ತಿದ್ದು, ಈ ಎಲ್ಲಾ ಪ್ರಯೋಗಾಲಯಗಳಲ್ಲೂ ಒಟ್ಟಾರೆ 30,000-40,000 ಸ್ಯಾಂಪಲ್ಸ್ ಗಳ ಪರೀಕ್ಷೆ ಬಾಕಿ ಉಳಿಸಿದವೆ ಎಂದು ಮೂಲಗಳು ತಿಳಿಸಿವೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಜ್ಯದಲ್ಲಿ ಸಿಎಂ ಗದ್ದುಗೆ ಗುದ್ದಾಟ: ಎಲ್ಲ ಗೊಂದಲಗಳಿಗೆ ಹೈಕಮಾಂಡ್ ತೆರೆ ಎಳೆಯಬೇಕು- ಸಿಎಂ ಸಿದ್ದರಾಮಯ್ಯ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಪಶ್ಚಿಮ ಬಂಗಾಳದಲ್ಲಿ ವಿವಾದಿತ SIR ಕುರಿತು ಮಾತುಕತೆಗೆ ಟಿಎಂಸಿಗೆ ಚುನಾವಣಾ ಆಯೋಗ ಆಹ್ವಾನ

ಇದು ಕೇವಲ ಧ್ವಜವಲ್ಲ ಭಾರತೀಯ ನಾಗರಿಕತೆಯ ಪುನರ್‌ ಜಾಗೃತಿಯ ಧ್ವಜ, ಶತಮಾನಗಳಷ್ಟು ಹಳೆಯ ಗಾಯ ಈಗ ವಾಸಿಯಾಗುತ್ತಿದೆ: ಪ್ರಧಾನಿ ಮೋದಿ

SCROLL FOR NEXT