ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ 
ರಾಜ್ಯ

ದಿಡೀರ್ ಪ್ರಚಾರ ಪಡೆಯಲು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ್ದ ವಸಂತ್: ಪೋಲೀಸ್ ಆಯುಕ್ತ

ಮಂಗಳೂರಿನ  ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ ಘಟನೆಯ ಹಿಂದೆ ಆರೋಪಿಗೆ ಧಿಡೀರನೆ ಪ್ರಚಾರ ಪಡೆಯುವ ಹಂಬಲವಿತ್ತು ಎಂದು ಮಂಗಳೂರು ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಹೇಳಿದ್ದಾರೆ.

ಮಂಗಳೂರು:  ಮಂಗಳೂರಿನ  ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ ಮಾಡಿದ ಘಟನೆಯ ಹಿಂದೆ ಆರೋಪಿಗೆ ಧಿಡೀರನೆ ಪ್ರಚಾರ ಪಡೆಯುವ ಹಂಬಲವಿತ್ತು ಎಂದು ಮಂಗಳೂರು ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ಹೇಳಿದ್ದಾರೆ.

ಶುಕ್ರವಾರ (ಆಗಸ್ಟ್ 21) ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಆಯುಕ್ತರು ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಕರೆ ಮಾಡಿದ ಘಟನೆಯ ಬಗ್ಗೆ ವಿವರಗಳನ್ನು ಬಹಿರಂಗಪಡಿಸಿದ್ದಾರೆ

“ಆಗಸ್ಟ್ 19 ರಂದು ಕಾರ್ಕಳದ ವ್ಯಕ್ತಿಯೊಬ್ಬರು ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವ ಬಗ್ಗೆ ಮಾನ ನಿಲ್ದಾಣದ ಮಾಜಿ ನಿರ್ದೇಶಕ ವಾಸುದೇವ್ ರಾವ್ ಅವರಿಗೆ ದೂರವಾಣಿ ಕರೆ ಮಾಡಿ ಮಾಹಿತಿ ನೀಡಿದ್ದರು,  ವಾಸುದೇವ್ ತಕ್ಷಣ ಪ್ರಸ್ತುತ ವಿಮಾನ ನಿಲ್ದಾಣದ ನಿರ್ದೇಶಕರಿಗೆ ಮಾಹಿತಿ ನೀಡಿದರು. ಪ್ರೋಟೋಕಾಲ್ ಪ್ರಕಾರ, ಸಿಐಎಸ್ಎಫ್ ಮತ್ತು ಸ್ಥಳೀಯ ಪೊಲೀಸರ ಸಹಾಯದಿಂದ ಶೋಧ ಕಾರ್ಯಾಚರಣೆ ನಡೆಸಲಾಯಿತು.

"ನಂತರ ಇದು ಹುಸಿ ಕರೆ ಎಂದು ಕಂಡುಬಂದಿದೆ. 33 ವರ್ಷದ ಕಾರ್ಕಳ ಮುದ್ರಾಡಿ ನಿವಾಸಿ ವಸಂತ್ ಶೇರಿಗಾರ್ ಆರೋಪಿಯಾಗಿದ್ದು ಈತ  8 ನೇ ತರಗತಿಯವರೆಗೆ ಶಿಕ್ಷಣ ಪಡೆದಿದ್ದಾರೆ ಆದರೆ ಮೊಬೈಲ್ ಫೋನ್ ಬಳಸುವಲ್ಲಿ ತುಂಬಾ  ಪರಿಣಿತರಿದ್ದಾನೆ.  ಈ ಹಿಂದೆ ಬೆಂಗಳೂರಿನ ಹೋಟೆಲ್‌ವೊಂದರಲ್ಲಿ ಸುಮಾರು ನಾಲ್ಕು ವರ್ಷಗಳ ಕಾಲ ಕೆಲಸ ಮಾಡಿದ್ದನು. ಆತ  ಆ ನಂತರದ ದಿನಗಳಲ್ಲಿ ಉಡುಪಿಯ ಹೋಟೆಲ್‌ನಲ್ಲಿ ಕೆಲಸ ಮಾಡಿದ್ದಾಗಿ ತಿಳಿದುಬಂದಿದೆ. 

"ಈಗ ಲಾಕ್‌ಡೌನ್ ಕಾರಣ ಮನೆಯಲ್ಲಿದ್ದ. ಅಂತರ್ಜಾಲದಲ್ಲಿ ಬ್ರೌಸ್ ಮಾಡುವ ಮೂಲಕ ವಿಮಾನ ನಿಲ್ದಾಣದ ಮಾಜಿ ನಿರ್ದೇಶಕರ ದೂರವಾಣಿ ಸಂಖ್ಯೆ ಪಡೆದುಕೊಂಡಿದ್ದಾನೆ, ಜನವರಿಯಲ್ಲಿ  ನಡೆದ ಘಟನೆ ಬಗೆಗೆ ಆತನಿಗೆ ಅರಿವಿತ್ತು. ಆದ್ದರಿಂದ, ಪ್ರಚಾರ ಪಡೆಯಲು, ಅವರು ವಿಮಾನ ನಿಲ್ದಾಣದಲ್ಲಿ ಬಾಂಬ್ ಇರಿಸಿದ್ದಾಗಿ ಹುಸಿ ಕರೆ ಮಾಡಿದ್ದಾನೆ. 

"ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಜಾಮೀನು ರಹಿತ  ಪ್ರಕರಣದ ಮೇಲೆ ಭಾರತೀಯ ದಂಡ ಸಂಹಿತೆಯ ವಿವಿಧ ವಿಭಾಗಗಳಡಿ ಆತನ ಬಂಧನವಾಗಿದೆ"ಆಯುಕ್ತರು ಹೇಳಿದ್ದಾರೆ.

ಆರೋಪಿ ಮಾನಸಿಕವಾಗಿ ಅಸ್ವಸ್ಥನಾಗಿದ್ದಾನೆಯೇ ಎಂದು ಕೇಳಲಾಗಿ , “ಆರೋಪಿಯನ್ನು ಮಾನಸಿಕ ಅಸ್ವಸ್ಥ ಎಂದೆನ್ನುವುದು ತಪ್ಪು.  ಅದನ್ನು ಸಾಬೀತುಪಡಿಸಲು ನಮ್ಮಲ್ಲಿ ವೈದ್ಯಕೀಯ ಪ್ರಮಾಣಪತ್ರವಿಲ್ಲದಿದ್ದಾಗ ಹಾಗೆನ್ನಲು ಸಾಧ್ಯವಿಲ್ಲ." ಎಂದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT