ಬಿಎಸ್ ಯಡಿಯೂರಪ್ಪ 
ರಾಜ್ಯ

ರಾಜ್ಯದ ಪ್ರಗತಿಯ ಹಾದಿಯಲ್ಲಿ ಇರುವ ಕಂಟಕ ದೂರಮಾಡಲಿ; ಗಣೇಶ ಚತುರ್ಥಿಗೆ ಶುಭಕೋರಿದ ಮುಖ್ಯಮಂತ್ರಿ

ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ನಾಡಿನ ಸಮಸ್ತ ಜನತೆಗೆ ಶುಭಾಶಯ ಕೋರಿದ್ದಾರೆ.

ಬೆಂಗಳೂರು: ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಅನೇಕ ಗಣ್ಯರು ನಾಡಿನ ಸಮಸ್ತ ಜನತೆಗೆ ಶುಭಾಶಯ ಕೋರಿದ್ದಾರೆ.

ಗಣೇಶ ಹಬ್ಬದ ಶುಭಾಶಯಗಳು, ರಾಜ್ಯದ ಪ್ರಗತಿಯ ಹಾದಿಯಲ್ಲಿ ಇರುವ ಕಂಟಕ, ಅಡಚಣೆಗಳನ್ನು ಗಣಪತಿಯು ದೂರಮಾಡಲಿ ಹಾಗೂ ರಾಜ್ಯದ ಜನತೆಗೆ ವಿನಾಯಕ ಸನ್ಮಂಗಳವನ್ನುಂಟು ಮಾಡಲಿ. ಕೊರೋನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಎಲ್ಲ ಸುರಕ್ಷತಾ ಕ್ರಮಗಳನ್ನು ಪಾಲಿಸೋಣ ಎಂದು ಮುಖ್ಯಮಂತ್ರಿ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.

ಗಣೇಶ ಚತುರ್ಥಿ ಹಬ್ಬದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ನಾಡಿನ ಜನತೆಗೆ ಶುಭಾಶಯ ಕೋರಿದ್ದಾರೆ. ವಿಘ್ನೇಶ್ವರನು ಲೋಕದಲ್ಲಿರುವ ಸಕಲ ವಿಘ್ನಗಳನ್ನು ನಿವಾರಿಸಿ, ಸುಖ-ಶಾಂತಿ, ಆರೋಗ್ಯ, ಸಕಾರಾತ್ಮಕತೆಯನ್ನು ತಂದು ಎಲ್ಲರನ್ನೂ ಆಶೀರ್ವದಿಸಲಿ ಎಂದು ಪ್ರಾರ್ಥಿಸುತ್ತೇನೆ. ಆಚರಣೆ ಸರಳವಾಗಿರಲಿ, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಿ ಎಂದು ಅವರು ಟ್ವೀಟ್ ಮೂಲಕ ಮನವಿ ಮಾಡಿದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT