ರಾಜ್ಯ

ಡಾ, ನಾಗೇಂದ್ರ ಆತ್ಮಹತ್ಯೆ ಪ್ರಕರಣ: ಮೈಸೂರು ಜಿ.ಪಂ. ಸಿಇಓ ವರ್ಗಾವಣೆ

Srinivas Rao BV

ಮೈಸೂರು: ನಂಜನಗೂಡಿನ ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಇಂದು ಆದೇಶಿಸಿದೆ. ಮೈಸೂರು ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್ ಅವರಿಗೆ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹುದ್ದೆಯ ಹೆಚ್ಚುವರಿ ಹೊಣೆ ವಹಿಸಲಾಗಿದೆ.

ನಂಜನಗೂಡು ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ ಮುಂದಿಟ್ಟುಕೊಂಡು ಜಿಲ್ಲಾ ಆರೋಗ್ಯಾಧಿಕಾರಿ ಕಚೇರಿ ಮುಂಭಾಗ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದರು.

ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ವಿರುದ್ದ ಆಲನಹಳ್ಳಿ ಠಾಣೆಯಲ್ಲಿ ಎಫ್ಐಆರ್ ಕೂಡಾ ದಾಖಲಾಗಿದೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ ಜಿ.ಪಂ. ಸಿಇಓ ಅವರನ್ನು ವರ್ಗಾವಣೆಮಾಡಲಾಗಿದೆ. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್, ನಂಜನಗೂಡು ಆರೋಗ್ಯಾಧಿಕಾರಿ ಆತ್ಮಹತ್ಯೆ ಪ್ರಕರಣ ಮುಂದಿಟ್ಟುಕೊಂಡು ವೈದ್ಯರು ಪ್ರತಿಭಟನೆ ನಡೆಸುವುದನ್ನು ನಿಲ್ಲಿಸಬೇಕು, ಕೊರೋನಾ ಸೋಂಕಿತರ ಸೇವೆಯಲ್ಲಿ ನಿರತರಾಗಬೇಕು ಎಂದು ಮನವಿ ಮಾಡಿದ್ಧಾರೆ. 

SCROLL FOR NEXT