ಸಾಂದರ್ಭಿಕ ಚಿತ್ರ 
ರಾಜ್ಯ

ಎಟಿಎಂ ಗಳಲ್ಲಿ 32 ಲಕ್ಷ ರು ಹಣ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

ಎಟಿಎಂ ಘಟಕದಲ್ಲಿ 32 ಲಕ್ಷ ರು. ಕಳವು ಮಾಡಿದ್ದ ಆರೋಪದಡಿ ಹಲಸೂರು ಗೇಟ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. 

ಬೆಂಗಳೂರು: ಎಟಿಎಂ ಘಟಕದಲ್ಲಿ 32 ಲಕ್ಷ ರು. ಕಳವು ಮಾಡಿದ್ದ ಆರೋಪದಡಿ ಹಲಸೂರು ಗೇಟ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. 

ಕಿರಣ್ ಹಾಗೂ ಅಶ್ವತ್ ಬಂಧಿತ ಆರೋಪಿಗಳು‌. ಗೌರಿಬಿದನೂರಿನ ಕಿರಣ, ಸಿಎಂಎಸ್ ಇನ್ಪೋ ಸಿಸ್ಟಮ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಕಂಪನಿಯಿಂದ ಹಣ ಪಡೆದುಕೊಂಡು ಎಟಿಎಂ ಘಟಕಗಳಿಗೆ ತುಂಬುವ  ಕೆಲಸ‌ ಮಾಡುತ್ತಿದ್ದ.

ಐಟಿಪಿಎಲ್ ರೋಡ್ ಹಾಗೂ ಹಲಸೂರು ಮಾರ್ಗದ ಎಟಿಎಂ ಘಟಕಗಳಲ್ಲಿ ಹಣ ತುಂಬಿಸುವ ಜವಾಬ್ದಾರಿ ಹೊತ್ತಿದ್ದ ಕಿರಣ್. ಇತ್ತೀಚೆಗೆ ತಾನು ಹೋಗುವ ರೂಟ್‌ಗೆ ಬೇರೊಬ್ಬರನ್ನು ನಿಯೋಜನೆ ಮಾಡಿತ್ತು ಕಂಪನಿ. ಇದೇ ತಿಂಗಳು ಇನ್ನೊಬ್ಬ ಕಸ್ಟೋಡಿಯನ್ ಆಗಿದ್ದ ಸೂರ್ಯ ಹಲಸೂರಿನ ಎರಡು ಬ್ಯಾಂಕ್ ಎಟಿಎಂ ಘಟಕಗಳಿಗೆ 12 ಲಕ್ಷ ತುಂಬಿಸಿದ್ದರು. 

ಹಣ ಹಾಕಿದ ಅರ್ಧ ಗಂಟೆಯಲ್ಲೇ ಆರೋಪಿ ಕಿರಣ್ ಎಟಿಎಂಗಳಿಗೆ ಹೋಗಿ 32.28 ರು.ಲಕ್ಷ ಹಣ ಎಗರಿಸಿದ್ದ. ಎಟಿಎಂಗಳ ಪಾಸ್ ವರ್ಡ್ ಅರಿತಿದ್ದ ಕಿರಣ್. ಕೃತ್ಯಕ್ಕೆ ಮತ್ತೊಬ್ಬ ಆರೋಪಿ ಅಶ್ವತ್ ಕೈ ಜೋಡಿಸಿದ್ದ. ಹಣ ಕಳವು ಸಂಬಂಧ ಕಂಪೆನಿಯು ಹಲಸೂರು ಠಾಣೆಗೆ ದೂರು ನೀಡಿತ್ತು. 

ಸಿಸಿಟಿವಿ ಸೆರೆಯಾದ ದೃಶ್ಯಾವಳಿ ಆಧಾರದ ಮೇಲೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಪೊಲೀಸರು. ಹಣ ಕದ್ದು ಯಾರಿಗೂ ಅನುಮಾನ ಬಾರದಂತೆ ನಟಿಸಿದ್ದ. ಪೊಲೀಸ್ ವಿಚಾರಣೆಯಲ್ಲಿ ಕೃತ್ಯದ ಬಗ್ಗೆ ಗೊತ್ತೇ ಇಲ್ಲ ಅಂದಿದ್ದ ಕಿರಣ್. ಸಿಸಿಟಿವಿಯಲ್ಲಿ ಸೆರೆಯಾಗಿದ್ದ ಆರೋಪಿಯ ನಡೆಯುವ ಶೈಲಿ ಹಾಗೂ ಕಿರಣ್ ನಡೆಯುವ ಸ್ಟೈಲ್ ತಾಳೆ ಹಾಕಿದ ಪೊಲೀಸರು ಅನುಮಾನದಿಂದ ತ್ರೀವ ವಿಚಾರಣೆಗೊಳಪಡಿಸಿದಾಗ ಕೃತ್ಯ ಎಸಗಿರುವುದಾಗಿ ಕಳ್ಳರು ತಪ್ಪೊಪ್ಪಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoorನಲ್ಲಿ ಧ್ವಂಸವಾಗಿದ್ದ ಜೈಶ್ ನೆಲೆ ಮರುನಿರ್ಮಾಣ! ಪಾಕ್‌ ಸರ್ಕಾರದಿಂದ 25 ಕೋಟಿ ನೆರವು!

Onion Price: ದಿಢೀರ್ ಈರುಳ್ಳಿ ಬೆಲೆ ಏರಿಕೆ; ಸೆಪ್ಟೆಂಬರ್-ಅಕ್ಟೋಬರ್‌ನಲ್ಲಿ ಮತ್ತಷ್ಟು ದುಬಾರಿ ಸಾಧ್ಯತೆ, ದರ ಏರಿಕೆಗೆ ಕಾರಣವೇನು?

ಮಹಿಳಾ ಮೀಸಲಾತಿ ಮಸೂದೆ ಬೆಂಬಲಿಸಿ, ಕಾಂಗ್ರೆಸ್ ಕಚೇರಿಯಲ್ಲಿ ವಂದೇ ಪೂರ್ತಿಯಾಗಿ ಹಾಡಿ ತೋರಿಸಿ: ರಾಹುಲ್ ಗಾಂಧಿಗೆ ಸ್ಮೃತಿ ಇರಾನಿ ಸವಾಲು

ಮದ್ಯ ಸಾಗಣೆ ಹಗರಣ: ಆಂಧ್ರಪ್ರದೇಶದ ಮಾಜಿ ಸಚಿವರ ಬಂಧಿಸಿದ ED

'3 ರಾಷ್ಟ್ರಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದೇನೆ': SIR ಪಟ್ಟಿಯಲ್ಲಿ ಹೆಸರು ನಾಪತ್ತೆ ಬಗ್ಗೆ ಮಾಜಿ ರಾಯಭಾರಿ ಅಸಮಾಧಾನ!