ಸಂಸದ ಡಿ. ಕೆ. ಸುರೇಶ್ 
ರಾಜ್ಯ

ಬಿಬಿಎಂಪಿ ಚುನಾವಣೆಗಾಗಿ ಬಿಜೆಪಿಯಿಂದ ಡಿ.ಜೆ. ಹಳ್ಳಿ ಗಲಭೆ- ಸಂಸದ ಡಿ. ಕೆ. ಸುರೇಶ್

ಡಿ.ಜೆ ಹಳ್ಳಿ ಪ್ರಕರಣಕ್ಕೂ ಫೋನ್ ಟ್ಯಾಪಿಂಗ್‌ಗೂ ಸಂಬಂಧವಿಲ್ಲ.ಕಾಂಗ್ರೆಸ್ ನಾಯಕರ ಫೋನ್ ಟ್ಯಾಪಿಂಗ್ ಆರೋಪವಲ್ಲ, ಅದು ಸತ್ಯ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.

ಬೆಂಗಳೂರು: ಡಿ.ಜೆ ಹಳ್ಳಿ ಪ್ರಕರಣಕ್ಕೂ ಫೋನ್ ಟ್ಯಾಪಿಂಗ್‌ಗೂ ಸಂಬಂಧವಿಲ್ಲ.ಕಾಂಗ್ರೆಸ್ ನಾಯಕರ ಫೋನ್ ಟ್ಯಾಪಿಂಗ್ ಆರೋಪವಲ್ಲ, ಅದು ಸತ್ಯ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.

ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ಬಿಜೆಪಿಯವರು ಡಿ.ಜೆ ಹಳ್ಳಿ ಪ್ರಕರಣ ಮುಚ್ಚಿಹಾಕುವ ಪ್ರಯತ್ನ ನಡೆಸುತ್ತಿದ್ದಾರೆ. ವಾಸ್ತವಾಂಶವೇ ಬೇರೆಯಿದೆ.ಬಿಬಿಎಂಪಿ‌ ಚುನಾವಣೆ ಎದುರಾಗುತ್ತಿದೆ. ಅದಕ್ಕಾಗಿ ಇಲ್ಲಿನ ಬಿಜೆಪಿ ನಾಯಕರು ಚುನಾವಣಾ ರಾಜಕೀಯ ಮಾಡುತ್ತಿದ್ದಾರೆ. ಅದಕ್ಕಾಗಿ ಪೊಲೀಸರ ಮೇಲೆ ಒತ್ತಡ ತರುತ್ತಿದ್ದಾರೆ ಎಂದರು.

ಬಿಜೆಪಿಯವರು ಸಾವಿನ ಮೇಲೆ ಹೆಣದ ರಾಜಕೀಯ ಮಾಡಿದವರು.ಇದೀಗ ಡಿ.ಜೆ.ಹಳ್ಳಿ ಪ್ರಕರಣವನ್ನು ಚುನಾವಣೆಗೆ ಬಳಸಿಕೊಳ್ಳುತ್ತಿದ್ದಾರೆ ಎಂದು ಸಂಸದ ಡಿ.ಕೆ.ಸುರೇಶ್ ಆರೋಪಿಸಿದರು.

ಡಿಜೆ ಹಳ್ಳಿ ಪ್ರಕರಣದಲ್ಲಿ ಗುಪ್ತಚರ ಇಲಾಖೆಯ ವೈಫಲ್ಯವಿದೆ. ವೈಫಲ್ಯವನ್ನು ಮುಚ್ಚಿ ಹಾಕಲು ಕಾಂಗ್ರೆಸ್ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ.ಡಿ.ಜೆ.ಹಳ್ಳಿ ಗಲಭೆಗೆ ಗುಪ್ತಚರ ವೈಫಲ್ಯವೇ ಕಾರಣ ಎಂಬುದನ್ನು ಸರ್ಕಾರ ಒಪ್ಪಿಕೊಳ್ಳಬೇಕು ಎಂದು ಡಿ.ಕೆ.ಸುರೇಶ್ ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

ರಾಮ ಮಂದಿರ ಟ್ರಸ್ಟ್‌ CEO ಹುದ್ದೆಗೆ ಬರೋಬ್ಬರಿ 5,200 ಅರ್ಜಿ; ಸಂದರ್ಶನಕ್ಕೆ ಕೇವಲ 20 ಅಭ್ಯರ್ಥಿಗಳು ಆಯ್ಕೆ!

17 ದಿನಗಳಿಂದ ಸಂಸತ್ತಿನ ಎರಡೂ ಸದನಗಳು ಸ್ತಬ್ಧ; ನಮ್ಮ ಬೇಡಿಕೆಗಳಿಗೆ ಹೆದರಿ PM ಮೋದಿ, ಅಮಿತ್ ಶಾ ಸದನಕ್ಕೆ ಬರುತ್ತಿಲ್ಲ: ಖರ್ಗೆ

Video: ಬಿಡದಿ ಟೌನ್‌ಶಿಪ್ ಪಿಸುಮಾತು ವಿವಾದ: ಮಧು ಬಂಗಾರಪ್ಪ ಜೊತೆಗಿನ ಮಾತುಕತೆ ಬಗ್ಗೆ ಬಿ.ವೈ. ವಿಜಯೇಂದ್ರ ಸ್ಪಷ್ಟನೆ

'ಬೇಡ ಬ್ರೋ': ಬೆಂಗಳೂರು ಪೊಲೀಸರ ಭರ್ಜರಿ ಬೇಟೆ; 55.8 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, 39 ಡ್ರಗ್ ಪೆಡ್ಲರ್‌ಗಳ ಬಂಧನ!