ಜಮೀರ್ ಅಹ್ಮದ್ ಖಾನ್ 
ರಾಜ್ಯ

ಕೊರೋನಾ ವೈರಸ್: ಸೋಂಕಿನಿಂದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್

ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 

ಬೆಂಗಳೂರು: ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 

ಈ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ಶಾಸಕ ಜಮೀರ್ ಅಹ್ಮದ್ ಖಾನ್, 'ತಮ್ಮ ಆರೋಗ್ಯ ಚೇತರಿಕೆಗಾಗಿ ಪ್ರಾರ್ಥಿಸಿದ ಅಭಿಮಾನಿಗಳಿಗೂ ಮತ್ತು ಚಿಕಿತ್ಸೆ ನೀಡಿದ ಆಸ್ಪತ್ರೆ ಸಿಬ್ಬಂದಿಗೆ ಜಮೀರ್ ಅಹ್ಮದ್ ಧನ್ಯವಾದ ತಿಳಿಸಿದ್ದಾರೆ.

'ಇಂದು ಕೊರೊನಾ ಸೋಂಕಿನಿಂದ ಗುಣಮುಖನಾಗಿ ಮನೆಗೆ ಮರಳುತ್ತಿದ್ದೇನೆ. ವೈದ್ಯರ ಸಲಹೆಯ ಮೇರೆಗೆ ಮುಂದಿನ 10 ದಿನಗಳ ಕಾಲ ನಾನು ಹೋಂ ಕ್ವಾರೆಂಟೈನ್‍ನಲ್ಲಿ ಇರಲಿದ್ದು, ನಂತರದಲ್ಲಿ ಸಕ್ರಿಯ ಜನಸೇವೆಗೆ ಮರಳಲಿದ್ದೇನೆ. ಈವರೆಗೆ ಅತ್ಯಂತ ಕಾಳಜಿಯಿಂದ ನನಗೆ ಚಿಕಿತ್ಸೆ ನೀಡಿದ ವಿಕ್ರಂ ಆಸ್ಪತ್ರೆಯ  ಎಲ್ಲಾ ವೈದ್ಯಕೀಯ ಸಿಬ್ಬಂದಿಗಳಿಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ್ದಾರೆ. ಅಂತೆಯೇ, 'ನಾನು ಆಸ್ಪತ್ರೆಗೆ ದಾಖಲಾದ ದಿನವೇ ಕರೆ ಮಾಡಿ, ನನಗೆ ಧೈರ್ಯ ತುಂಬಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ ಆತ್ಮೀಯರು, ನಮ್ಮ ಪಕ್ಷದ ಹಿರಿಯ ನಾಯಕರೂ ಆದ ಸಿದ್ದರಾಮಯ್ಯನವರಿಗೂ ಹಾಗೂ ಮಾಜಿ  ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರಿಗೂ ಧನ್ಯವಾದಗಳು. ತಮ್ಮ ಪ್ರೀತಿ ಮತ್ತು ಕಾಳಜಿಗೆ ನಾನು ಆಭಾರಿ ಎಂದು ಹೇಳಿದ್ದಾರೆ.

ಅಲ್ಲದೆ ನಾನು ಶೀಘ್ರ ಗುಣಮುಖನಾಗುವಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮತ್ತು ಮಹಾರಾಷ್ಟ್ರ, ಆಂಧ್ರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಜನರು ಮಸೀದಿ, ಮಂದಿರ, ಚರ್ಚ್ ಗಳಲ್ಲಿ ಪ್ರಾರ್ಥನೆ, ಹರಕೆ, ಪೂಜೆಗಳನ್ನು ಮಾಡಿದ್ದಾರೆ. ತಮ್ಮೆಲ್ಲರ ಪ್ರೀತಿಯ ಋಣ ದೊಡ್ಡದು. ತಮ್ಮ ಸೇವೆಯ ಮೂಲಕ ಅದನ್ನು  ತೀರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT