ರಾಜ್ಯ

ಬೆಳಗಾವಿ: ಮೊದಲ ಕನ್ನಡ ಮೇಯರ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ  ಸಿದ್ಧನಗೌಡ ಪಾಟೀಲ್ ನಿಧನ

ಬೆಳಗಾವಿಯ ಮಹಾನಗರ ಪಾಲಿಕೆಯ ಮೊದಲ ಕನ್ನಡ ಮೇಯರ್ ಸಿದ್ಧನಗೌಡ ಪಾಟೀಲ್(87) ಅವರು ಅನಾರೋಗ್ಯದಿಂದ ಬುದವಾರ ನಿಧನ ಹೊಂದಿದರು.

ಬೆಳಗಾವಿ:  ಬೆಳಗಾವಿಯ ಮಹಾನಗರ ಪಾಲಿಕೆಯ ಮೊದಲ ಕನ್ನಡ ಮೇಯರ್ ಸಿದ್ಧನಗೌಡ ಪಾಟೀಲ್(87) ಅವರು ಅನಾರೋಗ್ಯದಿಂದ ಬುದವಾರ ನಿಧನ ಹೊಂದಿದರು.

ಬೆಳಗಾವಿ ಮಹಾನಗರ ಪಾಲಿಕೆಯ ಮೊದಲ ಕನ್ನಡ ಮೇಯರ್ ಎನಿಸಿಕೊಂಡಿದ್ದಂತ ಸಿದ್ದನಗೌಡ ಪಾಟೀಲ(87) ಅವರು ಇಲ್ಲಿನ ಶಿವಬಸವನಗರದ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ.

ಬೆಳಗಾವಿ ಜಿಲ್ಲೆ ಬೈಲಹೊಂಗಲದ ಸರಿಗೆ ಮಲ್ಲಾಪುರ ಗ್ರಾಮದ ಕೃಷಿಕ ಕುಟುಂಬವೊಂದರಲ್ಲಿ 1934,ಏಪ್ರಿಲ್ 18ರಂದು ಸಿದ್ದನಗೌದ ಜನಿಸಿದ್ದರು.  ಪ್ರಾಂತ್ಯಗಳ ವಿಂಗಡನೆ ಸಮಯದಲ್ಲಿ ಬಳ್ಲಾರಿಯನ್ನು ಆಂಧ್ರಪ್ರದೇಶಕ್ಕೆ ಸೇರಿಸಿದ ಸಮಯ ಅಂದಿನ ಪ್ರಧಾನಿ ಜವಹರಲಾಲ್ ನೆಹರು ಬೆಳಗಾವಿಗೆ ಆಗಮಿಸಿದ್ದ ವೇಳೆ ಅವರಿಗೆ ಕಪ್ಪು ಬಾವುಟ ತೋರಿಸಿ ವಿರೋಧ ವ್ಯಕ್ತಪಡಿಸಿದ್ದರು.

ಸತತ 2 ಬಾರಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿದ್ದ ಸಸಿದ್ದನಗೌಡ ನಾಡು ನುಡಿ, ಗಡಿ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಗುರ್ತಿಸಿಕೊಂಡಿದ್ದರು. 1956ರಿಂದಲೂ ಕನ್ನಡ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. 1984ರಲ್ಲಿ ಬೆಳಗಾವಿ ಪಾಲಿಕೆಯ ಸದಸ್ಯರಾಗಿ, 1990ರಲ್ಲಿ ಮತ್ತೆ ಪುನರಾಯ್ಕೆಯಾಗಿ, ಆನಂತರ 1991ರಲ್ಲಿ ಬೆಳಗಾವಿಯ ಪ್ರಥಮ ಕನ್ನಡ ಮಹಾಪೌರರಾಗಿ ಆಯ್ಕೆಗೊಂಡಿದ್ದರು. ಅನೇಕ ಕನ್ನಡ ಪರ ಸಂಘಟನೆಗಳು ಇವರ ನಿಧನಕ್ಕೆ ಶೋಕ ವ್ಯಕ್ತಪಡಿಸಿವೆ. 

ಇಂದು ಮಧ್ಯಾಹ್ನ 3 ಗಂಟೆಗೆ ಅವರ ಸ್ವಗ್ರಾಮ ನೇಸರಗಿ ಸಮೀಪದ ಮಲ್ಲಾಪುರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

AI- ಚಾಲಿತ ಡಿಜಿಟಲೀಕರಣ, SIR ಕುರಿತು CECಗೆ ಐದನೇ ಪತ್ರ ಬರೆದ ಮಮತಾ ಬ್ಯಾನರ್ಜಿ

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

Indian Stock Market: 5 ದಿನಗಳ ಸತತ ಕುಸಿತಕ್ಕೆ ಕೊನೆಗೂ ಬ್ರೇಕ್, Sensex 301 ಅಂಕ ಏರಿಕೆ!

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

ಬಿಜೆಪಿ ನಿಯೋಗದಿಂದ ರಾಜ್ಯಪಾಲರ ಭೇಟಿ: 'ದ್ವೇಷ ಭಾಷಣ ತಡೆ' ಮಸೂದೆಗೆ ಅಂಕಿತ ಹಾಕದಂತೆ ಮನವಿ!

SCROLL FOR NEXT