ರಾಜ್ಯ

ಬೆಳಗಾವಿ: ಮೊದಲ ಕನ್ನಡ ಮೇಯರ್, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ  ಸಿದ್ಧನಗೌಡ ಪಾಟೀಲ್ ನಿಧನ

ಬೆಳಗಾವಿಯ ಮಹಾನಗರ ಪಾಲಿಕೆಯ ಮೊದಲ ಕನ್ನಡ ಮೇಯರ್ ಸಿದ್ಧನಗೌಡ ಪಾಟೀಲ್(87) ಅವರು ಅನಾರೋಗ್ಯದಿಂದ ಬುದವಾರ ನಿಧನ ಹೊಂದಿದರು.

ಬೆಳಗಾವಿ:  ಬೆಳಗಾವಿಯ ಮಹಾನಗರ ಪಾಲಿಕೆಯ ಮೊದಲ ಕನ್ನಡ ಮೇಯರ್ ಸಿದ್ಧನಗೌಡ ಪಾಟೀಲ್(87) ಅವರು ಅನಾರೋಗ್ಯದಿಂದ ಬುದವಾರ ನಿಧನ ಹೊಂದಿದರು.

ಬೆಳಗಾವಿ ಮಹಾನಗರ ಪಾಲಿಕೆಯ ಮೊದಲ ಕನ್ನಡ ಮೇಯರ್ ಎನಿಸಿಕೊಂಡಿದ್ದಂತ ಸಿದ್ದನಗೌಡ ಪಾಟೀಲ(87) ಅವರು ಇಲ್ಲಿನ ಶಿವಬಸವನಗರದ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ.

ಬೆಳಗಾವಿ ಜಿಲ್ಲೆ ಬೈಲಹೊಂಗಲದ ಸರಿಗೆ ಮಲ್ಲಾಪುರ ಗ್ರಾಮದ ಕೃಷಿಕ ಕುಟುಂಬವೊಂದರಲ್ಲಿ 1934,ಏಪ್ರಿಲ್ 18ರಂದು ಸಿದ್ದನಗೌದ ಜನಿಸಿದ್ದರು.  ಪ್ರಾಂತ್ಯಗಳ ವಿಂಗಡನೆ ಸಮಯದಲ್ಲಿ ಬಳ್ಲಾರಿಯನ್ನು ಆಂಧ್ರಪ್ರದೇಶಕ್ಕೆ ಸೇರಿಸಿದ ಸಮಯ ಅಂದಿನ ಪ್ರಧಾನಿ ಜವಹರಲಾಲ್ ನೆಹರು ಬೆಳಗಾವಿಗೆ ಆಗಮಿಸಿದ್ದ ವೇಳೆ ಅವರಿಗೆ ಕಪ್ಪು ಬಾವುಟ ತೋರಿಸಿ ವಿರೋಧ ವ್ಯಕ್ತಪಡಿಸಿದ್ದರು.

ಸತತ 2 ಬಾರಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿದ್ದ ಸಸಿದ್ದನಗೌಡ ನಾಡು ನುಡಿ, ಗಡಿ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಗುರ್ತಿಸಿಕೊಂಡಿದ್ದರು. 1956ರಿಂದಲೂ ಕನ್ನಡ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. 1984ರಲ್ಲಿ ಬೆಳಗಾವಿ ಪಾಲಿಕೆಯ ಸದಸ್ಯರಾಗಿ, 1990ರಲ್ಲಿ ಮತ್ತೆ ಪುನರಾಯ್ಕೆಯಾಗಿ, ಆನಂತರ 1991ರಲ್ಲಿ ಬೆಳಗಾವಿಯ ಪ್ರಥಮ ಕನ್ನಡ ಮಹಾಪೌರರಾಗಿ ಆಯ್ಕೆಗೊಂಡಿದ್ದರು. ಅನೇಕ ಕನ್ನಡ ಪರ ಸಂಘಟನೆಗಳು ಇವರ ನಿಧನಕ್ಕೆ ಶೋಕ ವ್ಯಕ್ತಪಡಿಸಿವೆ. 

ಇಂದು ಮಧ್ಯಾಹ್ನ 3 ಗಂಟೆಗೆ ಅವರ ಸ್ವಗ್ರಾಮ ನೇಸರಗಿ ಸಮೀಪದ ಮಲ್ಲಾಪುರದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳದಲ್ಲಿ ಭೀಕರ ಪ್ರವಾಹ; ಮೃತರ ಸಂಖ್ಯೆ 903ಕ್ಕೆ ಏರಿಕೆ, ವಿದೇಶಿಯರು ಸೇರಿ 4,000ಕ್ಕೂ ಹೆಚ್ಚು ಮಂದಿ ಇನ್ನೂ ನಾಪತ್ತೆ!

KPSC ನೇಮಕಾತಿ ಹಗರಣಕ್ಕೆ ಬಿಗ್‌ ಟ್ವಿಸ್ಟ್‌ ; ₹40 ಲಕ್ಷಕ್ಕೆ ಪ್ರಶ್ನೆಪತ್ರಿಕೆ ಮಾರಾಟ ಮಾಡಿದ್ದ ಮಧ್ಯವರ್ತಿ, BJP ಮುಖಂಡನ ಬಂಧನ!

ಮರ ಬಿದ್ದು ತುಂಡಾಗಿ ವೃದ್ದನ ಮೇಲೆ ಬಿದ್ದ ಹೈಟೆನ್ಷನ್ ವೈರ್, ಅಂಗಡಿ ಮಾಲೀಕನ ಸಮಯಪ್ರಜ್ಞೆಯಿಂದ ಜೀವ ರಕ್ಷಣೆ, Video Viral

ನೆರೆ ಸಂತ್ರಸ್ತರಿಗೆ ನೆರವು ಹೊತ್ತು ಹೋದವರಿಗೆ ಶಾಕ್: 'ಇಲ್ಲೇ ಖರೀದಿಸಿ' ಎಂದ ನೇಪಾಳ ಅಧಿಕಾರಿಗಳು! ಆಗಿದ್ದೇನು?

ನೇಪಾಳ ಪ್ರವಾಹ: ಲೈಕ್ಸ್ ಗಾಗಿ ನಕಲಿ ವಿಡಿಯೋ, ಸುಳ್ಳು ಮಾಹಿತಿ ಪ್ರಸಾರ; 72 ಸೋಶಿಯಲ್ ಮೀಡಿಯಾ ಬಳಕೆದಾರರಿಗೆ ಕಟ್ಟುನಿಟ್ಟಿನ ಸೂಚನೆ!