ರಾಜ್ಯ

ಬೆಂಗಳೂರು: ಹಾಡಹಗಲೇ ವೃದ್ಧೆಯ ಹತ್ಯೆ ಮಾಡಿ ಚಿನ್ನಾಭರಣ ದೋಚಿದ್ದ ಮೂವರ ಬಂಧನ

Raghavendra Adiga

ಬೆಂಗಳೂರು:  ನಗರದಲ್ಲಿ ಹಾಡಹಗಲೇ ವೃದ್ಧೆಯ ಕತ್ತು ಸೀಳಿ ಕೊಲೆ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ರಾಯಚೂರು ಮೂಲದ ವೀರೇಶ್, ಆತನ ಪತ್ನಿ ಚೈತ್ರಾ ಮತ್ತು ಪ್ರಶಾಂತ್ ಬಂಧಿತ ಆರೋಪಿಗಳು.

ಆ. 12ರಂದು ನಗರದ ಕಾಡುಗೋಡಿಯ ಚನ್ನಸಂದ್ರದಲ್ಲಿ 65 ವರ್ಷದ ಜಯಮ್ಮ ಎಂಬುವವರನ್ನು ಕತ್ತು ಸೀಳಿ ಭೀಕರ ಕೊಲೆ ಬಳಿಕ ಮನೆಯಲ್ಲಿದ್ದ 45 ಲಕ್ಷ ರೂ. ಹಣ, 88 ಗ್ರಾಂ ಚಿನ್ನಾಭರಣ ದೋಚಿ ಆರೋಪಿಗಳು ಪರಾರಿಯಾಗಿದ್ದರು.

ಘಟನೆ ಸಂಬಂಧ ಕಾಡುಗೋಡಿ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಿ  ವಿಚಾರಣೆ ನಡೆಸಿದಾಗ ಪ್ರಸ್ತುತ ಕೊರೋನಾ ಲಾಕ್ ಡೌನ್ ಇದ್ದ ಕಾರಣ  ಆರ್ಥಿಕ ಸಂಕಷ್ಟ ಎದುರಾಗಿತ್ತು. ಹಾಗಾಗಿ ಈ ದುಷ್ಕೃತ್ಯ ಎಸಗಿದ್ದರೆಂದು ಒಪ್ಪಿಕೊಂಡಿದ್ದಾರೆ. 

SCROLL FOR NEXT