ಬಂಧಿತ ಆರೋಪಿ ಶಂಕರಪ್ಪ 
ರಾಜ್ಯ

ಬೆಂಗಳೂರು ಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನಾಭರಣ ಕಳ್ಳತನ: ಆರೋಪಿ ಬಂಧನ

ಜೂಜಾಡುವ ಚಟಕ್ಕೆ ಬಿದ್ದಿದ್ದ ವ್ಯಕ್ತಿಯೊಬ್ಬ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನಾಭರಣಗಳ ಕಳವು ಮಾಡಿ ಇದೀಗ ಗಿರಿನಗರದ ಪೊಲೀಸರ ಅತಿಥಿಯಾಗಿದ್ದಾನೆ.

ಬೆಂಗಳೂರು: ಜೂಜಾಡುವ ಚಟಕ್ಕೆ ಬಿದ್ದಿದ್ದ ವ್ಯಕ್ತಿಯೊಬ್ಬ ಕೆಲಸ ಮಾಡುತ್ತಿದ್ದ ಮನೆಯಲ್ಲೇ ಚಿನ್ನಾಭರಣಗಳ ಕಳವು ಮಾಡಿ ಇದೀಗ ಗಿರಿನಗರದ ಪೊಲೀಸರ ಅತಿಥಿಯಾಗಿದ್ದಾನೆ.

ಶಂಕರಪ್ಪ ಬಂಧಿತ ಆರೋಪಿ. ಆರೋಪಿಯು ಕೆಲ ವರ್ಷಗಳಿಂದ ಗಿರಿನಗರದ ಉದ್ಯಮಿಯೊಬ್ಬರ ಮನೆಯಲ್ಲಿ ಕೆಲಸ ಮಾಡುತ್ತಿದ್ದ. ಮನೆಯಲ್ಲಿ ಯಾರು ಇಲ್ಲದ ವೇಳೆ ಸುಮಾರು 15 ಲಕ್ಷ ರೂಪಾಯಿ ಮೌಲ್ಯದ 320 ಗ್ರಾಂ ಚಿನ್ನಾಭರಣ ಎಗರಿಸಿದ್ದ.

ನಂತರ ಶಂಕರಪ್ಪ ಕಳವು ಮಾಡಿದ ಚಿನ್ನಾಭರಣವನ್ನು ಹೊಸದುರ್ಗದಲ್ಲಿ ಅಡವಿಟ್ಟಿದ್ದ. ಮನೆಯಲ್ಲಿದ್ದ ಚಿನ್ನಾಭರಣ ಕಾಣೆಯಾದಾಗ ಮನೆಯ ಯಜಮಾನ, ಗಿರಿನಗರ ಪೊಲೀಸ್​ ಠಾಣೆಗೆ ದೂರು ನೀಡಿದ್ದರು

ಆದರೆ ಆರೋಪಿ ಶಂಕರಪ್ಪ ತಾನು ಅಡವಿಟ್ಟ ಚಿನ್ನದಿಂದ ಬಂದ ಹಣವನ್ನು ಜೂಜಿನಲ್ಲಿ ಕಳೆದಿದ್ದ. ಇದೀಗ ಆರೋಪಿಯನ್ನು ಬಂಧಿಸಿರುವ ಪೋಲೀಸರು ವಿಚಾರಣೆ ತೀವ್ರಗೊಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Parliament special session: ಅಗ್ನಿ ಪರೀಕ್ಷೆಯಲ್ಲಿ ಮೋದಿ ಸರ್ಕಾರ, ಇಂದು ಪಾಸ್ ಆಗುತ್ತಾ ಪ್ರಮುಖ ಮಸೂದೆಗಳು?

'ಇರಾನ್ ತನ್ನ ಸಮೃದ್ಧ ಯುರೇನಿಯಂ ಸಂಗ್ರಹವನ್ನು ಹಸ್ತಾಂತರಿಸಲು ಒಪ್ಪಿಕೊಂಡಿದೆ, ಶಾಂತಿ ಒಪ್ಪಂದ ಹತ್ತಿರದಲ್ಲಿದೆ': Donald Trump

ಕಾಳಿ ಮಾತೆಯ ಬಣ್ಣ ಕಪ್ಪು: ಪ್ರಧಾನಿ ನರೇಂದ್ರ ಮೋದಿಯ 'ಕಾಲ ಟಿಕಾ' ಟೀಕೆ ವಿರುದ್ಧ ಕನ್ನಿಮೋಳಿ ಆಕ್ರೋಶ!

ಇನ್ಮುಂದೆ ನೇಚರ್ ಗೈಡ್, GPS ವಾಕಿಟಾಕಿ ಇಲ್ಲದೆ ಯಾರಿಗೂ ಚಾರಣಕ್ಕೆ ಅವಕಾಶವಿಲ್ಲ: SOP ಬಿಡುಗಡೆ ಮಾಡಿದ ಸಚಿವ ಈಶ್ವರ ಖಂಡ್ರೆ!

ವಿಜ್ಞಾನ-ತಂತ್ರಜ್ಞಾನ ಕ್ಷೇತ್ರ: ಮಹಿಳೆಯರದ್ದು ಪ್ರಧಾನ ಪಾತ್ರ; ಕೇವಲ ಪಾಲ್ಗೊಳ್ಳುವುದಲ್ಲ, ನಾಯಕತ್ವಕ್ಕೂ ಬೇಕು ನಾರಿ ಶಕ್ತಿ

SCROLL FOR NEXT