ಚರಕ ಆಸ್ಪತ್ರೆ 
ರಾಜ್ಯ

ಬೆಂಗಳೂರು: 130 ಬೆಡ್ ಗಳ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ

ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದು, ಶೇ 1%ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳಿಗೆ ಐಸಿ ಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದ ಚೇತರಿಕೆ ಪ್ರಮಾಣ ಶೇ.70% ಇದ್ದು, ಮರಣ ಪ್ರಮಾಣ ಶೇ.1.69%ರಷ್ಟಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಹೇಳಿದ್ದಾರೆ

ಬೆಂಗಳೂರು: ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಮಂದಿ ಕೋವಿಡ್ ನಿಂದ ಗುಣಮುಖರಾಗಿದ್ದು, ಶೇ 1%ಕ್ಕಿಂತ ಕಡಿಮೆ ಸಕ್ರಿಯ ಪ್ರಕರಣಗಳಿಗೆ ಐಸಿ ಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದ ಚೇತರಿಕೆ ಪ್ರಮಾಣ ಶೇ.70% ಇದ್ದು, ಮರಣ ಪ್ರಮಾಣ ಶೇ.1.69%ರಷ್ಟಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.

ಶಿವಾಜಿನಗರದಲ್ಲಿ 130 ಬೆಡ್ ಗಳ ಕೋವಿಡ್ ಆಸ್ಪತ್ರೆ ಉದ್ಘಾಟಿಸಿ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್, "ಬಿಬಿಎಂಪಿಯ ಕಟ್ಟಡ ನಾಲ್ಕು ವರ್ಷಗಳಿಂದ ಖಾಲಿ ಇತ್ತು. ಇಂತಹ ಸಂದರ್ಭದಲ್ಲಿ 20-25 ಕೋಟಿ ರೂ. ವೆಚ್ಚದಲ್ಲಿ ಆಸ್ಪತ್ರೆ ನಿರ್ಮಿಸುವ ಆಲೋಚನೆ ಬಂದಿತ್ತು. ಆದರೆ ಕೋವಿಡ್ ಸಂಕಷ್ಟವಿದ್ದ ಹಿನ್ನೆಲೆಯಲ್ಲಿ, ಇನ್ಫೋಸಿಸ್ ಪ್ರತಿಷ್ಠಾನದ ಸುಧಾಮೂರ್ತಿ ಅವರನ್ನು ಮನವಿ ಮಾಡಿದ್ದೆ. ಅವರು ತಕ್ಷಣ ಸ್ಪಂದಿಸಿ 11 ಕೋಟಿ ರೂ. ಮೌಲ್ಯದ ಉಪಕರಣಗಳನ್ನು ನೀಡಿದರು ಎಂದು ಹೇಳಿದ್ದಾರೆ. 

ಪುರುಷರ ಚಿಕಿತ್ಸೆಗೆ 60, ಮಹಿಳೆಯರಿಗೆ 50 ಹಾಗೂ ಮಕ್ಕಳಿಗೆ 20 ಹಾಸಿಗೆಗಳ ಸೌಕರ್ಯವನ್ನು ಆಸ್ಪತ್ರೆಯಲ್ಲಿ ಕಲ್ಪಿಸಲಾಗಿದೆ. ಆಮ್ಲಜನಕ ಪೂರಣ ವ್ಯವಸ್ಥೆಯ 20 ಹಾಸಿಗೆ ಸಾಮರ್ಥ್ಯದ ತುರ್ತು ನಿಗಾ ಘಟಕವಿದೆ (ಐ.ಸಿ.ಯು). 20 ವೆಂಟಿಲೇಟರ್‌ಗಳನ್ನೂ ಕಲ್ಪಿಸಲಾಗಿದೆ. 30 ಎಂಬಿಬಿಎಸ್ ವೈದ್ಯರು, ಶಸ್ತ್ರಚಿಕಿತ್ಸಾ ತಜ್ಞರು, ಹೃದ್ರೋಗ ತಜ್ಞರು, ರೇಡಿಯಾಲಜಿಸ್ಟ್ ಸೇರಿದಂತೆ 10 ತಜ್ಞ ವೈದ್ಯರು, ಒಬ್ಬರು ಅಧೀಕ್ಷಕ ವೈದ್ಯರು, ಇಬ್ಬರು ಫಾರ್ಮಸಿಸ್ಟ್‌ಗಳು, ಇಬ್ಬರು ಆಹಾರ ತಜ್ಞೆ, 6 ಶುಶ್ರೂಷಕರು, 6 ಪ್ರಯೋಗಾಲಯ
ತಂತ್ರಜ್ಞರು, 15 ಭದ್ರತಾ ಸಿಬ್ಬಂದಿ ಹಾಗೂ 60 ಡಿ–ಗುಂಪಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.

ಕೊರೋನಾ ಸಂದರ್ಭದಲ್ಲಿ ಹಗಲು ರಾತ್ರಿ ಶ್ರಮಿಸುತ್ತಿರುವ  ಕೊರೋನಾ ವಾರಿಯರ್ಸ್ ಗಳನ್ನು ಸಿಎಂ ಯಡಿಯೂರಪ್ಪ ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ವಸತಿ ಸಚಿವ ವಿ.ಸೋಮಣ್ಣ ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT