ಡಿಸಿಎಂ ಅಶ್ವಥ ನಾರಾಯಣ 
ರಾಜ್ಯ

ನೀಟ್, ಜೆಇಇ ಪರೀಕ್ಷೆ ವಿಚಾರದಲ್ಲಿ ವಿರೋಧ ಪಕ್ಷಗಳ ನಾಯಕರು ರಾಜಕೀಯ ಮಾಡುತ್ತಿದ್ದಾರೆ:ಡಿಸಿಎಂ ಅಶ್ವಥ ನಾರಾಯಣ 

ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ನಿಗದಿತ ದಿನಾಂಕಗಳಂದೇ ನಡೆಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಈ ವಿಚಾರದಲ್ಲಿ ವಿರೋಧ ಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ ನಾರಾಯಣ ಹೇಳಿದ್ದಾರೆ.

ಬೆಂಗಳೂರು: ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ನಿಗದಿತ ದಿನಾಂಕಗಳಂದೇ ನಡೆಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ಈ ವಿಚಾರದಲ್ಲಿ ವಿರೋಧ ಪಕ್ಷಗಳು ರಾಜಕೀಯ ಮಾಡುತ್ತಿವೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ ನಾರಾಯಣ ಹೇಳಿದ್ದಾರೆ.

ಪರೀಕ್ಷೆಗೆ ತೊಂದರೆಯನ್ನುಂಟುಮಾಡಲು ಪಟ್ಟಭದ್ರ ಹಿತಾಸಕ್ತಿಗಳು ಪ್ರಯತ್ನಿಸುತ್ತಿದ್ದು ಕೋವಿಡ್-19 ಸಮಯದಲ್ಲಿ ಎಲ್ಲಾ ಮುನ್ನೆಚ್ಚರಿಕೆ ತೆಗೆದುಕೊಂಡು ಪರೀಕ್ಷೆಯನ್ನು ಸುಗಮವಾಗಿ ನಡೆಸಲು ರಾಜ್ಯ ಸರ್ಕಾರ ಸಜ್ಜಾಗಿದೆ ಎಂದು ಹೇಳಿದರು.

ವಿರೋಧ ಪಕ್ಷದವರಿಗೆ ವಿದ್ಯಾರ್ಥಿಗಳು ಮತ್ತು ವ್ಯವಸ್ಥೆ ಮೇಲೆ ಕಾಳಜಿಯಿಲ್ಲ, ವಿಷಯವನ್ನು ರಾಜಕೀಯಗೊಳಿಸುತ್ತಿದ್ದಾರೆ. ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದ್ದು ನಾವು ವೈರಸ್ ಮಧ್ಯೆ ಜಾಗರೂಕತೆಯಿಂದ ಬದುಕುವುದನ್ನು ಕಲಿಯಬೇಕು. ಜನರಲ್ಲಿ ಗೊಂದಲ ಹುಟ್ಟಿಸಿ ವಿದ್ಯಾರ್ಥಿಗಳ ಶೈಕ್ಷಣಿಕ ಬದುಕನ್ನು ಹಾಳು ಮಾಡಲು ವಿರೋಧ ಪಕ್ಷಗಳ ನಾಯಕರು ನೋಡುತ್ತಿದ್ದಾರೆ,ಈಗಾಗಲೇ ತಡವಾಗಿದೆ, ಇನ್ನಷ್ಟು ವಿಳಂಬ ಮಾಡಿದರೆ ವಿದ್ಯಾರ್ಥಿಗಳ ಬದುಕು ಹಾಳಾಗುತ್ತದೆ ಎಂದರು.

ಜೆಇಇ ಮುಖ್ಯ ಪರೀಕ್ಷೆ ದೇಶಾದ್ಯಂತ ಸೆಪ್ಟೆಂಬರ್ 1ರಿಂದ 6ರವರೆಗೆ, ನೀಟ್ ಪರೀಕ್ಷೆ ಸೆಪ್ಟೆಂಬರ್ 13ರಂದು ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT