ಡಿಜೆಹಳ್ಳಿ ಗಲಭೆ(ಸಂಗ್ರಹ ಚಿತ್ರ) 
ರಾಜ್ಯ

ಡಿಜೆ ಹಳ್ಳಿ ಗಲಭೆ ಪ್ರಕರಣ: ಸೆಪ್ಟಂಬರ್ 2 ರಿಂದ ಮ್ಯಾಜಿಸ್ಟ್ರೇಟ್ ತನಿಖೆ 

ಆ.11 ರಂದು ನಡೆದಿದ್ದ ಡಿಜೆಹಳ್ಳಿ ಹಾಗೂ ಕೆಜಿಹಳ್ಳಿ ಗಲಭೆ ಪ್ರಕರಣ ಸಂಬಂಧ ಸರ್ಕಾರ ಆದೇಶಿಸಿದ್ದ ಮ್ಯಾಜಿಸ್ಪ್ರೇಟ್‌ ತನಿಖೆ ಸೆಪ್ಟಂಬರ್ 2 ರಿಂದ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದೆ.

ಬೆಂಗಳೂರು: ಆ.11 ರಂದು ನಡೆದಿದ್ದ ಡಿಜೆಹಳ್ಳಿ ಹಾಗೂ ಕೆಜಿಹಳ್ಳಿ ಗಲಭೆ ಪ್ರಕರಣ ಸಂಬಂಧ ಸರ್ಕಾರ ಆದೇಶಿಸಿದ್ದ ಮ್ಯಾಜಿಸ್ಪ್ರೇಟ್‌ ತನಿಖೆ ಸೆಪ್ಟಂಬರ್ 2 ರಿಂದ ಪೂರ್ಣ ಪ್ರಮಾಣದಲ್ಲಿ ಆರಂಭವಾಗಲಿದೆ.

ಡಿಜೆ ಹಳ್ಳಿ ಮತ್ತು ಕೆಜಿ ಹಳ್ಳಿ ಠಾಣೆಗಳಿಗೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಶಿವಮೂರ್ತಿ ನೇತೃತ್ವದ ತಂಡ ಭೇಟಿ ನೀಡಿ ಪ್ರಾಥಮಿಕ ಮಾಹಿತಿ ಕಲೆ ಹಾಕಿತು. ಠಾಣಾಧಿಕಾರಿಗಳು ಮತ್ತು ತನಿಖಾ ತಂಡದ ಜತೆ ಮಾತ್ರ ಮೊದಲ ದಿನ ಪ್ರಾಥಮಿಕ ಮಾಹಿತಿ ಪಡೆದುಕೊಳ್ಳುವ ಪ್ರಯತ್ನ ನಡೆದಿದ್ದು ಸೆ.2 ರಿಂದ ಪ್ರಕರಣದ ಪೂರ್ಣಾವಧಿ ತನಿಖೆ ಪ್ರಾರಂಭವಾಗುತ್ತದೆ ಎಂದು ತಿಳಿಸಿದ್ದಾರೆ.

ಠಾಣೆ ಭೇಟಿ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಜಿಲ್ಲಾಧಿಕಾರಿ ಶಿವಮೂರ್ತಿ, ''ಮ್ಯಾಜಿಸ್ಪ್ರೇಟ್‌ ತನಿಖೆ ವರದಿ ನೀಡಲು ಸರಕಾರ ಮೂರು ತಿಂಗಳು ಗಡುವು ನೀಡಿದೆ. ನ್ಯಾಯಾಂಗ ತನಿಖೆ ಮಾದರಿಯಲ್ಲೇ ಮ್ಯಾಜಿಸ್ಪ್ರೇಟ್‌ ತನಿಖೆಯೂ ನಡೆಯುತ್ತದೆ. ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಹೆಚ್‌ಆರ್‌ಸಿ) ಮಾರ್ಗಸೂಚಿಯಂತೆ ತನಿಖೆ ಪ್ರಾರಂಭಿಸಲಾಗಿದೆ.

ಗಲಭೆ ಪ್ರಕರಣ ಸಂಬಂಧ ಈವರೆಗೆ ಒಟ್ಟು 388 ವ್ಯಕ್ತಿಗಳನ್ನು ಬಂಧಿಸಲಾಗಿದೆ. ಡಿಜೆ ಹಳ್ಳಿ ಠಾಣೆಯಲ್ಲಿ 55 ಹಾಗೂ ಕೆಜಿ ಹಳ್ಳಿ ಠಾಣೆಯಲ್ಲಿ 16 ಪ್ರಕರಣಗಳು ದಾಖಲಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT