ಬಿಳಿ ಹುಲಿ 
ರಾಜ್ಯ

ಉತ್ತರ ಕರ್ನಾಟಕದ ಅತಿ ದೊಡ್ಡ ಪ್ರಾಣಿ ಸಂಗ್ರಾಲಯಕ್ಕೆ ಹೊಸ ಅತಿಥಿಗಳ ಆಗಮನ!

ವಿಶ್ವ ವಿಖ್ಯಾತ ಹಂಪಿ ಬಳಿಯಲ್ಲಿ ನೂತನವಾಗಿ ಪ್ರಾರಂಭವಾಗಿರುವ ಮೃಗ್ರಾಲಯಕ್ಕೆ ಇಬ್ಬರು ಅಪರೂಪದ ಅತಿಥಿಗಳ ಆಗಮನವಾಗಿದೆ. ಅರ್ಜುನ್ ಹೆಸರಿನ ಒಂದು ಬಿಳಿ ಹುಲಿ ಮತ್ತು ಏಳು ಬಿಳಿ ತೋಳಗಳನ್ನ ಕಳೆ ಎರಡು ವಾರಗಳ ಹಿಂದೆಯಷ್ಠೇ ಮೈಸೂರಿನ ಮೃಗಾಲಯದಿಂದ ಇಲ್ಲಿಗೆ ಕರೆತರಲಾಗಿದೆ. 

ಹೊಸಪೇಟೆ: ವಿಶ್ವ ವಿಖ್ಯಾತ ಹಂಪಿ ಬಳಿಯಲ್ಲಿ ನೂತನವಾಗಿ ಪ್ರಾರಂಭವಾಗಿರುವ ಮೃಗ್ರಾಲಯಕ್ಕೆ ಇಬ್ಬರು ಅಪರೂಪದ ಅತಿಥಿಗಳ ಆಗಮನವಾಗಿದೆ. ಅರ್ಜುನ್ ಹೆಸರಿನ ಒಂದು ಬಿಳಿ ಹುಲಿ ಮತ್ತು ಏಳು ಬಿಳಿ ತೋಳಗಳನ್ನ ಕಳೆ ಎರಡು ವಾರಗಳ ಹಿಂದೆಯಷ್ಠೇ ಮೈಸೂರಿನ ಮೃಗಾಲಯದಿಂದ ಇಲ್ಲಿಗೆ ಕರೆತರಲಾಗಿದೆ. 

ಇಲ್ಲಿನ ಪರಿಸರಕ್ಕೆ ನಿಧಾನವಾಗಿ ಈ ಅಪರೂಪದ ಅತಿಥಿಗಳು ಹೊಂದಿಕೊಳ್ಳುತಿದ್ದು, ಇನ್ನೇನು ಸೆಪ್ಟಂಬರ್ ತಿಂಗಳು ಮೊದಲ ಅಥವಾ ಎರಡನೆ ವಾರದಲ್ಲಿ ಪ್ರವಾಸಿಗರ ವೀಕ್ಷಣೆಗೆ ಈ ಅತಿಥಿಗಳು ಗೋಚರವಾಗುವ ಸಾಧ್ಯತೆ ಇದೆ. 

ಹೊಸಪೇಟೆ ತಾಲೂಕಿನ ಕಮಲಾಪುರ ಬಳಿಯ ಬಿಳಿಕಲ್ಲು ಅರಣ್ಯ ಪ್ರದೇಶದಲ್ಲಿ ಕಳೆದ ಎರಡು ವರ್ಷಗಳ ಹಿಂದೆ ಅಟಲ್ ಬಿಹಾರಿ ವಾಜಪೇಯಿ ಜಿಯೊಲಾಜಿಕಲ್ ಪಾರ್ಕ್ ಲೋಕಾರ್ಪಣೆಗೊಂಡಿತ್ತು. ಅದರಲ್ಲಿ 150ಹೆಕ್ಟೆರ್ ಪ್ರದೇಶದಲ್ಲಿ ಹುಲಿ ಸಫಾರಿ, ಜಿಂಕೆ ಸಫಾರಿ, ಸಿಂಹದ ಸಫಾರಿ, ಸೇರಿದಂತೆ  ಮೃಗ್ರಾಲಯವನ್ನ ಕೂಡ ಪ್ರಾರಂಭಿಸಲಾಗಿದೆ.ಈ ಹಿನ್ನೆಲೆಯಲ್ಲಿ ಈ ಪ್ರಾಣಿ ಮೃಗ್ರಾಲಯಕ್ಕೆ ಈ ಹೊಸ ಅತಿಥಿಗಳು ಸೇರ್ಪಡೆಗೊಂಡಿದ್ದಾರೆ. 

ಉತ್ತರ ಕರ್ನಾಟಕದಲ್ಲಿಯೇ ಮೊದಲ ಅತಿ ದೊಡ್ಡ ಪ್ರಾಣಿ ಸಂಗ್ರಾಲಯ ಇದಾಗಿದ್ದು, ಇನ್ನು ಮುಂದೆ ಪ್ರವಾಸಿಗರನ್ನ ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸುತ್ತದೆ, ಹಂಪಿಯ ಪ್ರವಾಸಕ್ಕೆ ಬರುವ ಪ್ರತಿ ದೇಶಿ ವಿದೇಸಿ ಪ್ರವಾಸಿಗರನ್ನ ಆಕರ್ಷಿಸುವ ಈ ಉದ್ಯಾನವನ ದೇಶ ವಿದೇಶದಲ್ಲಿ ಹೆಸರುಮಾಡಲಿದೆ.ತುಂಗಭದ್ರ ಜಲಾಶಯ, ಸಂಡೂರು ಕುಮಾರಸ್ವಾಮಿ ದೇವಸ್ಥಾನ, ಮತ್ತು ಅಲ್ಲಿನ ಅರಣ್ಯ ಪ್ರದೇಶ, ಹಾಗೂ ಕರಡಿದಾಮ ಮತ್ತು ವಿಶ್ವ ವಿಖ್ಯಾತ ಹಂಪಿಯಂತ ಪ್ರಮುಖ ಪ್ರವಾಸಿ ತಾಣಗಳು ಕೇವಲ ಮುವತ್ತು ಕಿಲೋಮಿಟರ್ ವ್ಯಾಪ್ತಿಯಲ್ಲಿದ್ದು, ಬಲು ಬೇಗ ಪ್ರವಾಸಿಗರನ್ನ ಆಕರ್ಷಿಸಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT