ರಾಜನಾಥ್ ಸಿಂಗ್ 
ರಾಜ್ಯ

ಸಾಂಸ್ಕೃತಿಕವಾಗಿ ಆತ್ಮನಿರ್ಭರಾಗಲು ಆಧ್ಯಾತ್ಮಿಕ ಮಾರ್ಗದರ್ಶನ ಅಗತ್ಯ: ರಾಜನಾಥ್ ಸಿಂಗ್

ನಾವು ಕೇವಲ ಆರ್ಥಿಕವಾಗಿ ಮಾತ್ರ ಆತ್ಮನಿರ್ಭರಾಗಬಾರದು. ಅದರ ಜತೆ ಸಾಂಸ್ಕೃತಿಕವಾಗಿ ಮತ್ತು ಮಾನಸಿಕವಾಗಿಯೂ ಆತ್ಮನಿರ್ಭರಾಗಬೇಕು ಮತ್ತು ಇದಕ್ಕೆ ಆಧ್ಯಾತ್ಮಿಕ ಹಾಗೂ ಧಾರ್ಮಿಕ ಗುರುಗಳ ಮಾರ್ಗದರ್ಶನ ಅಗತ್ಯ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶನಿವಾರ ಹೇಳಿದ್ದಾರೆ.

ನವದೆಹಲಿ: ನಾವು ಕೇವಲ ಆರ್ಥಿಕವಾಗಿ ಮಾತ್ರ ಆತ್ಮನಿರ್ಭರಾಗಬಾರದು. ಅದರ ಜತೆ ಸಾಂಸ್ಕೃತಿಕವಾಗಿ ಮತ್ತು ಮಾನಸಿಕವಾಗಿಯೂ ಆತ್ಮನಿರ್ಭರಾಗಬೇಕು ಮತ್ತು ಇದಕ್ಕೆ ಆಧ್ಯಾತ್ಮಿಕ ಹಾಗೂ ಧಾರ್ಮಿಕ ಗುರುಗಳ ಮಾರ್ಗದರ್ಶನ ಅಗತ್ಯ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಶನಿವಾರ ಹೇಳಿದ್ದಾರೆ.

ಇಂದು ಸುತ್ತೂರು ಜಗದ್ಗುರು ವೀರಸಿಂಹಾಸನ ಮಠದ ವತಿಯಿಂದ ಆಯೋಜಿಸಲಾಗಿದ್ದ ಡಾ. ಶ್ರೀ ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ 105ನೇ ಜಯಂತಿ ಮಹೋತ್ಸವವನ್ನು ವರ್ಚುವಲ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಸುತ್ತೂರು ಮಠ ಆಧ್ಯಾತ್ಮಕ ಮೌಲ್ಯಗಳು ಮತ್ತು ಆದರ್ಶಗಳ ಮೇಲೆ ಸಾಮಾಜಿಕ ಆರ್ಥಿಕ ನ್ಯಾಯ ಒದಗಿಸುವ ಕೆಲಸದಲ್ಲಿ ನಿರತವಾಗಿದೆ ಎಂದರು.

ಸುತ್ತೂರು ಮಠ ಅತ್ಯುತ್ತಮ ಸಾಂಸ್ಕೃತಿಕ ಚಳುವಳಿಯಾಗಿಯೂ ಕಾರ್ಯ ನಿರ್ವಹಿಸುತ್ತಿದೆ. ವಿದ್ಯ ಜತೆಗೆ ಉತ್ತಮ ಸಂಸ್ಕಾರ ನೀಡುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ 'ಸುತ್ತೂರು ಶ್ರೀ ಮಠ - ಗುರು ಪರಂಪರೆ' ಪುಸ್ತಕವನ್ನು ಬಿಡುಗಡೆ ಮಾಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT