ರಾಜ್ಯ

ಒಂದೇ ದಿನ 72 ಸಾವಿರ ಕೋವಿಡ್ ಟೆಸ್ಟ್: ನೂತನ ದಾಖಲೆ ಬರೆದ ರಾಜ್ಯ ಸರ್ಕಾರ 

ರಾಜ್ಯದಲ್ಲಿ ಶನಿವಾರ ಒಂದೇ ದಿನ ಅತಿ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಿದ್ದು, 72,684 ಮಂದಿಗೆ ಕೊರೋನಾ ಟೆಸ್ಟ್ ನಡೆಸಲಾಗಿದೆ. ಇದುವರೆಗೆ ರಾಜ್ಯದಲ್ಲಿ, ಒಟ್ಟು 27,85,718 ಕೋವಿಡ್ ಪರೀಕ್ಷೆ ನಡೆದಿದೆ. ಇನ್ನು ಕೋವಿಡ್ ಪಾಸಿಟಿವ್ ಪ್ರಕರಣಗಳು  8,000 ರ ಗಡಿ ದಾಟುತ್ತಲೇ ಇದ್ದು, ಶನಿವಾರ ಸಹ 8,324 ಮಂದಿ ಹೊಸದಾಗಿ ಕೊರೋನಾಗೆ ತುತ್ತಾಗಿದ್ದಾರೆ. ರಾಜ್ಯದಲ್ಲಿ ಇದ

ಬೆಂಗಳುರು: ರಾಜ್ಯದಲ್ಲಿ ಶನಿವಾರ ಒಂದೇ ದಿನ ಅತಿ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಿದ್ದು, 72,684 ಮಂದಿಗೆ ಕೊರೋನಾ ಟೆಸ್ಟ್ ನಡೆಸಲಾಗಿದೆ. ಇದುವರೆಗೆ ರಾಜ್ಯದಲ್ಲಿ, ಒಟ್ಟು 27,85,718 ಕೋವಿಡ್ ಪರೀಕ್ಷೆ ನಡೆದಿದೆ. ಇನ್ನು ಕೋವಿಡ್ ಪಾಸಿಟಿವ್ ಪ್ರಕರಣಗಳು  8,000 ರ ಗಡಿ ದಾಟುತ್ತಲೇ ಇದ್ದು, ಶನಿವಾರ ಸಹ 8,324 ಮಂದಿ ಹೊಸದಾಗಿ ಕೊರೋನಾಗೆ ತುತ್ತಾಗಿದ್ದಾರೆ. ರಾಜ್ಯದಲ್ಲಿ ಇದುವರೆಗಿನ ಸೋಂಕಿತರ ಸಂಖ್ಯೆ , 3,27,076 ಕ್ಕೆ ತಲುಪಿದೆ.

ಒಂದೇ ದಿನ 115 ಸಾವಿನ ಪ್ರಕರಣ ವರದಿಯಾಗಿದ್ದು ಒಟ್ಟು 5,483 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ನಿನ್ನೆ 8,110 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 2,35,128 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. "ಇತ್ತೀಚೆಗೆ ಹೆಚ್ಚಿನ ಸಂಖ್ಯೆಯ ಪರೀಕ್ಷೆಗಳು ನಡೆಯುತ್ತಿದ್ದು ಇದು ಹೆಚ್ಚಿನ ಕೋವಿಡ್ ರೋಗಿಗಳನ್ನು ಪತ್ತೆಹಚ್ಚಲು ಸಹಾಯ ಮಾಡಿದೆ." ಎಂದು ನೋಡಲ್ ಅಧಿಕಾರಿ ಡಾ. ಸಿ.ಎನ್.ಮಂಜುನಾಥ್ ಹೇಳಿದ್ದಾರೆ.

“ರಾಜ್ಯವು ಪ್ರತಿದಿನ 65,000-70,000 ಪರೀಕ್ಷೆಗಳನ್ನು ನಡೆಸುತ್ತಿದೆ. ಹಾಗಾಗದಿದ್ದಲ್ಲಿ ರಾಜ್ಯದಲ್ಲಿ ಅದೆಷ್ಟೋ ಕೋವಿಡ್ ಪ್ರಕರಣಗಳು ಬೆಳಕಿಗೆ ಬರುತ್ತಿರಲಿಲ್ಲ. ಇದರಿಂದಾಗಿ ಸೋಂಕು ಹೆಚ್ಚಾಗಿ ಹರಡಲು ಕಾರಣವಾಗುತ್ತಿತ್ತು. , ಕೆಲವು ರಾಜ್ಯಗಳು ದಿನಕ್ಕೆ ಕೇವಲ 5,000-10,000 ಪರೀಕ್ಷೆಗಳನ್ನು ನಡೆಸುತ್ತಿವೆ " ಅವರು ಹೇಳಿದ್ದಾರೆ.

"ಕರ್ನಾಟಕವು ಪ್ರಕರಣಗಳನ್ನು ಪರೀಕ್ಷಿಸುವ ಮತ್ತು ಪತ್ತೆಹಚ್ಚುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ." ಬೆಂಗಳೂರು ನಗರವು 2,993 ಮತ್ತು 25 ಸಾವುಗಳೊಂದಿಗೆ ಹೆಚ್ಚಿನ ಪಾಸಿಟಿವ್ ಕೇಸ್ ಗಳನ್ನು ದಾಖಲಿಸಿದೆ. . 468 ಪ್ರಕರಣಗಳೊಂದಿಗೆ ಬಳ್ಳಾರಿ ಎರಡನೇ ಸ್ಥಾನದಲ್ಲಿದೆ. ಶಿವಮೊಗ್ಗ (333), ಹಾಸನ (325), ದಾವನಾಗರೆ (319) ಮತ್ತು ಮೈಸೂರು (309) ನಂತರದ ಸ್ಥಾನಗಳಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್; Video

ಸ್ವಾತಂತ್ರ್ಯ ಬಳಿಕ ಇದೇ ಮೊದಲು: ಮಕರ ಸಂಕ್ರಾಂತಿಗೆ ಮತ್ತೊಂದು ಹೊಸ 'ದಾಖಲೆ'ಗೆ ಸಜ್ಜಾದ ಪ್ರಧಾನಿ ಮೋದಿ!

ಡೆಂಟಲ್ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್: ಕೆಲಸದಿಂದ 6 ಪ್ರಾಧ್ಯಾಪಕರ ವಜಾ

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; 'ಆ' ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಇರಾನ್ ಸಂಸತ್ ಸ್ಪೀಕರ್ ಖಡಕ್ ವಾರ್ನಿಂಗ್!

SCROLL FOR NEXT