ರಾಜ್ಯ

ಒಂದೇ ದಿನ 72 ಸಾವಿರ ಕೋವಿಡ್ ಟೆಸ್ಟ್: ನೂತನ ದಾಖಲೆ ಬರೆದ ರಾಜ್ಯ ಸರ್ಕಾರ 

ರಾಜ್ಯದಲ್ಲಿ ಶನಿವಾರ ಒಂದೇ ದಿನ ಅತಿ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಿದ್ದು, 72,684 ಮಂದಿಗೆ ಕೊರೋನಾ ಟೆಸ್ಟ್ ನಡೆಸಲಾಗಿದೆ. ಇದುವರೆಗೆ ರಾಜ್ಯದಲ್ಲಿ, ಒಟ್ಟು 27,85,718 ಕೋವಿಡ್ ಪರೀಕ್ಷೆ ನಡೆದಿದೆ. ಇನ್ನು ಕೋವಿಡ್ ಪಾಸಿಟಿವ್ ಪ್ರಕರಣಗಳು  8,000 ರ ಗಡಿ ದಾಟುತ್ತಲೇ ಇದ್ದು, ಶನಿವಾರ ಸಹ 8,324 ಮಂದಿ ಹೊಸದಾಗಿ ಕೊರೋನಾಗೆ ತುತ್ತಾಗಿದ್ದಾರೆ. ರಾಜ್ಯದಲ್ಲಿ ಇದ

ಬೆಂಗಳುರು: ರಾಜ್ಯದಲ್ಲಿ ಶನಿವಾರ ಒಂದೇ ದಿನ ಅತಿ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಿದ್ದು, 72,684 ಮಂದಿಗೆ ಕೊರೋನಾ ಟೆಸ್ಟ್ ನಡೆಸಲಾಗಿದೆ. ಇದುವರೆಗೆ ರಾಜ್ಯದಲ್ಲಿ, ಒಟ್ಟು 27,85,718 ಕೋವಿಡ್ ಪರೀಕ್ಷೆ ನಡೆದಿದೆ. ಇನ್ನು ಕೋವಿಡ್ ಪಾಸಿಟಿವ್ ಪ್ರಕರಣಗಳು  8,000 ರ ಗಡಿ ದಾಟುತ್ತಲೇ ಇದ್ದು, ಶನಿವಾರ ಸಹ 8,324 ಮಂದಿ ಹೊಸದಾಗಿ ಕೊರೋನಾಗೆ ತುತ್ತಾಗಿದ್ದಾರೆ. ರಾಜ್ಯದಲ್ಲಿ ಇದುವರೆಗಿನ ಸೋಂಕಿತರ ಸಂಖ್ಯೆ , 3,27,076 ಕ್ಕೆ ತಲುಪಿದೆ.

ಒಂದೇ ದಿನ 115 ಸಾವಿನ ಪ್ರಕರಣ ವರದಿಯಾಗಿದ್ದು ಒಟ್ಟು 5,483 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ. ನಿನ್ನೆ 8,110 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದುವರೆಗೆ 2,35,128 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. "ಇತ್ತೀಚೆಗೆ ಹೆಚ್ಚಿನ ಸಂಖ್ಯೆಯ ಪರೀಕ್ಷೆಗಳು ನಡೆಯುತ್ತಿದ್ದು ಇದು ಹೆಚ್ಚಿನ ಕೋವಿಡ್ ರೋಗಿಗಳನ್ನು ಪತ್ತೆಹಚ್ಚಲು ಸಹಾಯ ಮಾಡಿದೆ." ಎಂದು ನೋಡಲ್ ಅಧಿಕಾರಿ ಡಾ. ಸಿ.ಎನ್.ಮಂಜುನಾಥ್ ಹೇಳಿದ್ದಾರೆ.

“ರಾಜ್ಯವು ಪ್ರತಿದಿನ 65,000-70,000 ಪರೀಕ್ಷೆಗಳನ್ನು ನಡೆಸುತ್ತಿದೆ. ಹಾಗಾಗದಿದ್ದಲ್ಲಿ ರಾಜ್ಯದಲ್ಲಿ ಅದೆಷ್ಟೋ ಕೋವಿಡ್ ಪ್ರಕರಣಗಳು ಬೆಳಕಿಗೆ ಬರುತ್ತಿರಲಿಲ್ಲ. ಇದರಿಂದಾಗಿ ಸೋಂಕು ಹೆಚ್ಚಾಗಿ ಹರಡಲು ಕಾರಣವಾಗುತ್ತಿತ್ತು. , ಕೆಲವು ರಾಜ್ಯಗಳು ದಿನಕ್ಕೆ ಕೇವಲ 5,000-10,000 ಪರೀಕ್ಷೆಗಳನ್ನು ನಡೆಸುತ್ತಿವೆ " ಅವರು ಹೇಳಿದ್ದಾರೆ.

"ಕರ್ನಾಟಕವು ಪ್ರಕರಣಗಳನ್ನು ಪರೀಕ್ಷಿಸುವ ಮತ್ತು ಪತ್ತೆಹಚ್ಚುವಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ." ಬೆಂಗಳೂರು ನಗರವು 2,993 ಮತ್ತು 25 ಸಾವುಗಳೊಂದಿಗೆ ಹೆಚ್ಚಿನ ಪಾಸಿಟಿವ್ ಕೇಸ್ ಗಳನ್ನು ದಾಖಲಿಸಿದೆ. . 468 ಪ್ರಕರಣಗಳೊಂದಿಗೆ ಬಳ್ಳಾರಿ ಎರಡನೇ ಸ್ಥಾನದಲ್ಲಿದೆ. ಶಿವಮೊಗ್ಗ (333), ಹಾಸನ (325), ದಾವನಾಗರೆ (319) ಮತ್ತು ಮೈಸೂರು (309) ನಂತರದ ಸ್ಥಾನಗಳಲ್ಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT