ಡಾ. ಕೆ ಸುಧಾಕರ್ 
ರಾಜ್ಯ

ಗೋಹತ್ಯೆ ಮಹಾಪಾಪ, ಗೋಹತ್ಯೆ ವಿರುದ್ಧ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಜಾಗೃತಿ ಆಂದೋಲನ: ವೈದ್ಯಕೀಯ ಶಿಕ್ಷಣ ಸಚಿವ

ಮನೆ ಸದಸ್ಯನಂತಿರುವ ಗೋವನ್ನು ಹತ್ಯೆ ಮಾಡುವುದು ಮಹಾಪಾಪ. ಗೋಹತ್ಯೆ ನಿಷೇಧಿಸಲು ಮುಖ್ಯಮಂತ್ರಿಯವರಿಗೆ ಮನವಿ ಮಾಡುತ್ತೇನೆ.

ಚಿಕ್ಕಬಳ್ಳಾಪುರ: ಮನೆ ಸದಸ್ಯನಂತಿರುವ ಗೋವನ್ನು ಹತ್ಯೆ ಮಾಡುವುದು ಮಹಾಪಾಪ. ಗೋಹತ್ಯೆ ನಿಷೇಧಿಸಲು ಮುಖ್ಯಮಂತ್ರಿಯವರಿಗೆ ಮನವಿ ಮಾಡುತ್ತೇನೆ. ಜೊತೆಗೆ ಜಿಲ್ಲೆಯಲ್ಲಿ ಜಾಗೃತಿ ಆಂದೋಲನವನ್ನು ಕೂಡ ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಅಖಿಲ ಕರ್ನಾಟಕ ಒಕ್ಕಲಿಗರ ಒಕ್ಕೂಟ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶ್ರೀ ವೆಂಕಟೇಶ್ವರ ಗೋಶಾಲೆ ಉದ್ಘಾಟಿಸಿ ಮಾತನಾಡಿದ ಅವರು, "ಗೋಹತ್ಯೆಯನ್ನು ಎಲ್ಲ ಸರ್ಕಾರಗಳು ನಿಷೇಧಿಸಬೇಕು. ಗೋಮಾಂಸದ ರಫ್ತನ್ನು ಕೂಡ ನಿಷೇಧಿಸಬೇಕು. ಪಶ್ಚಿಮದ ದೇಶಗಳಲ್ಲಿ ನಾಲಿಗೆ ಚಪಲಕ್ಕೆ ಏನು ಬೇಕಾದರೂ ತಿನ್ನುತ್ತಾರೆ. ಆದರೆ ಭಾರತೀಯರಾಗಿ ನಾವು ಗೋಹತ್ಯೆ ಮಾಡಬಾರದು. ಇದನ್ನು ನಾನು ಬಲವಾಗಿ ವಿರೋಧಿಸುತ್ತೇನೆ" ಎಂದರು.

"ಭಾರತೀಯ ಸಂಪ್ರದಾಯದಲ್ಲಿ ಗೋವಿಗೆ ವಿಶೇಷ ಸ್ಥಾನಮಾನವಿದೆ. ವಯಸ್ಸಾಗಿದೆ ಎಂಬ ಕಾರಣಕ್ಕೆ ಹಸುವನ್ನು ಮಾರಾಟ ಮಾಡಬಾರದು. ಹಸು ಮನುಷ್ಯನಿಗೆ ಎಲ್ಲವನ್ನೂ ನೀಡುವ ಕಾಮಧೇನುವಾಗಿದೆ. ಆದ್ದರಿಂದ ಗೋಹತ್ಯೆ ಮಾಡಬಾರದು" ಎಂದರು.

"ಗೋಮಾಂಸ ರಫ್ತು ನಿಷೇಧಕ್ಕೆ ಎರಡೂ ಸದನಗಳಲ್ಲಿ ಸಾಕಷ್ಟು ಚರ್ಚೆಯಾಗಬೇಕಿದೆ. ನಮ್ಮ ಪಕ್ಷ ಈ ವಿಚಾರದಲ್ಲಿ ದೃಢ ಸಂಕಲ್ಪ ಹೊಂದಿದೆ. ಶೀಘ್ರದಲ್ಲೇ ರಫ್ತು ನಿಷೇಧ ಆಗಲಿದೆ" ಎಂದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮೀರ್ ಪುತ್ರನ ಸಿನಿಮಾ ಬ್ಯಾನರ್ ತೆರವು: ಅಶ್ಲೀಲವಾಗಿ ನಿಂದಿಸಿ ಬೆದರಿಕೆ ಹಾಕಿದ 'ಕೈ' ಮುಖಂಡ; ಕಣ್ಣೀರಿಟ್ಟ ಕಮಿಷನರ್, video!

ಯಾವ ಸಂದೇಶವೂ ಇಲ್ಲ, ಪಕ್ಷದ ನಾಯಕರ ಜತೆಗಿನ ಮಾತುಕತೆ ಬಗ್ಗೆ ಬಹಿರಂಗವಾಗಿ ಚರ್ಚೆ ಮಾಡಲ್ಲ: ಡಿ.ಕೆ. ಶಿವಕುಮಾರ್

ತಿರುಮಲ ಬಳಿಕ ಶಬರಿಮಲೆ ತುಪ್ಪದಲ್ಲೂ ಗೋಲ್ ಮಾಲ್: ವಿಜಿಲೆನ್ಸ್ ತನಿಖೆಗೆ ಕೇರಳ ಹೈಕೋರ್ಟ್ ಆದೇಶ!

Cricket: ಸಚಿನ್ ತೆಂಡೂಲ್ಕರ್ ಹೆಸರಲ್ಲಿದ್ದ ಸುದೀರ್ಘ ಕಾಲದ ದಾಖಲೆ ಮುರಿದ Virat Kohli, ಎಲೈಟ್ ಗ್ರೂಪ್ ಅಗ್ರಸ್ಥಾನದ ಮೇಲೆ ಕಣ್ಣು!

ತಮಿಳುನಾಡಿನಲ್ಲಿ ಮಹಿಳೆಯರಿಗೆ ಅಧ್ಯಯನಕ್ಕೆ ಉತ್ತೇಜನ; ಉತ್ತರ ಭಾರತದಲ್ಲಿ ಮಕ್ಕಳನ್ನು ಹೆರಲು ಮಾತ್ರ ಪ್ರೋತ್ಸಾಹ- ಮಾರನ್

SCROLL FOR NEXT